ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತನ್ನವರಿಂದಲೇ ದುಃಖ ಪಡೆಯಬೇಕಾಗುವುದು
ಮೇಷ ರಾಶಿ: ಒಂದೇ ಕೆಲಸವನ್ನು ನಿರಂತರವಾಗಿ ಮಾಡಿ ಶಿಸ್ತನ್ನು ಪಡೆದುಕೊಳ್ಳಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತ. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ…
ಮೇಷ ರಾಶಿ: ಒಂದೇ ಕೆಲಸವನ್ನು ನಿರಂತರವಾಗಿ ಮಾಡಿ ಶಿಸ್ತನ್ನು ಪಡೆದುಕೊಳ್ಳಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತ. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ ಇರುವುದು. ಆಹಾರದಿಂದ ಆರೋಗ್ಯ ಕೆಡುವುದು. ನಿಮಗೆ ಬೇಕಾದ ವಸ್ತುವೇ ಆದರೂ ಯಾರು ಕೇಳಿದರೂ ಕೊಡುವಿರಿ. ದೂರದ ಬಂಧುವಿನ ಭೇಟಿಯಾಗಿ ಪರಿಚಯ ಮಾಡಿಕೊಳ್ಳುವಿರಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ್ದು ಬೇಸರಕ್ಕೆ ಕಾರಣ. ವೃಷಭ ರಾಶಿ: ಪ್ರೀತಿಯ ವಿಷಯದಲ್ಲಿ ಪರಿಚಿತರ ಜೊತೆ ಚರ್ಚಿಸಿ. ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸ್ವಲ್ಪಮಟ್ಟಿನ ಲಾಭವಾಗುವುದು. ನಿತ್ಯಕರ್ಮದಲ್ಲಿ ವ್ಯತ್ಯಾಸವಾದ ಕಾರಣ ಎಲ್ಲವೂ ವೇಗವಾಗಿ ಮಾಡಬೇಕಾದೀತು. ಕೆಲವು…
ನಿಮ್ಮ ಮನೆಯ ಬಳಿ ಇರುವಂಥ ದೇವಿ ದೇವಸ್ಥಾನಕ್ಕೆ ತೆರಳಿ, ಅಲ್ಲಿ ನಿಮ್ಮಿಂದ ಸಾಧ್ಯವಾಗುವಂಥ ಸೇವೆಯನ್ನು ಮಾಡಿಬನ್ನಿ. ಇದರಿಂದ ನಿಮ್ಮ ಮೇಲೆ ಬಂದಂಥ ವೃಥಾ ಆರೋಪಗಳು ದೂರವಾಗುತ್ತವೆ. ಹಾಗೂ ಕೈ ತಪ್ಪಿಹೋಗಬಹುದು ಎಂದುಕೊಂಡಿದ್ದ ಅವಕಾಶಗಳು, ಪ್ರಾಜೆಕ್ಟ್ ಗಳು ದೊರೆಯಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಅತ್ಯಂತ ಕ್ರಿಯಾಶೀಲವಾದ ದಿನ ಇದಾಗಿದೆ. ಉದ್ಯೋಗಕ್ಕೆ ರಜೆಯ ದಿನವಾಗಿದ್ದರೂ ನಿಮ್ಮ ಮನಸ್ಸಿನ ಮುಂದಿನ ಗುರಿಗಳ ಬಗ್ಗೆ ಯೋಚಿಸುತ್ತಾ ಇರಲಿದೆ. ಕೌಟುಂಬಿಕವಾಗಿ ಸಂಭ್ರಮದ ಸಮಯವನ್ನು…
ಕುಂಕುಮವನ್ನು ನೀರಿಗೆ ಹಾಕಿ, ಅದನ್ನು ಒಂದು ತಟ್ಟೆಯಲ್ಲಿ ಹಾಕಿ, ಅದರಲ್ಲಿ ಒಂದು ನಾಣ್ಯವನ್ನು ಇಟ್ಟುಕೊಂಡು ನೀವು ವಾಸಿಸುವಂಥ ಸಂಜೆಯ ಹೊತ್ತಿಗೆ ನಿವಾಳಿಸಿ, ಮನೆಯಿಂದ ಹೊರಗೆ ಹಾಕಿ. ಇದರಿಂದ ಸಾಮರಸ್ಯ ಮೂಡುತ್ತದೆ ಹಾಗೂ ದೃಷ್ಟಿ ದೋಷ ನಿವಾರಣೆಯಾಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸಮಾಜದಲ್ಲಿ ನಿಮ್ಮ ವ್ಯಕ್ತಿತ್ವಕ್ಕೆ ಮನ್ನಣೆ ಸಿಗಲಿದೆ. ನಿಮ್ಮಲ್ಲಿ ಕೆಲವರಿಗೆ ಗೌರವ- ಸನ್ಮಾನಗಳು ಆಗಬಹುದು. ಮನೆಗೆ ಭೇಟಿ ಆಗುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುತ್ತದೆ….
ಐವತ್ತೊಂದು ಬಾರಿ ಓಂ ನಮೋ ನಾರಾಯಣಾಯ ಹಾಗೂ ನೂರಾ ಹದಿನಾರು ಬಾರಿ ಶ್ರೀರಾಮ ಜಯರಾಮ ಜಯ ರಾಮ ಎಂದು ಒಂದು ಪುಸ್ತಕದಲ್ಲಿ ಬರೆಯಿರಿ. ಇದರಿಂದ ಯಾರಿಗೆ ಆತ್ಮವಿಶ್ವಾಸ ಕುಂದುತ್ತಾ ಬರುತ್ತಿದೆ, ಅಂಥವರಿಗೆ ಕಾಣಿಸಿಕೊಳ್ಳುತ್ತಿದೆ. ವ್ಯಾಪಾರ- ವ್ಯವಹಾರದಲ್ಲಿ ಯಶಸ್ಸಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂತೋಷದ ಸುದ್ದಿ ಬರುವುದರಿಂದ ಅಥವಾ ನಿಮ್ಮದೇ ಸ್ವಭಾವದ ಕಾರಣಕ್ಕಾಗಿ ಅತ್ಯಂತ ಲವಲವಿಕೆಯ ದಿನ ಇದಾಗಿದೆ. ಹಳೆಯ ಯಾವುದಾದರೂ ಮಾತುಕತೆ ನಡೆಸುವಿರಿ ಅಥವಾ…
<p><strong>ಬೆಂಗಳೂರು: </strong>ಕರ್ನಾಟಕ ರಾಜಕಾರಣದಲ್ಲಿ ಸದ್ಯಕ್ಕೆ ಎಲ್ಲವೂ ಶಾಂತವಾಗಿದೆ ಎಂದು ಮೇಲ್ನೋಟಕ್ಕೆ ಕಂಡರೂ, ತೆರೆಯ ಮರೆಯಲ್ಲಿ ‘ಸಿಂಹಾಸನ ಯುದ್ಧ’ ಮಾತ್ರ ಧಗಧಗಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಪಟ್ಟದ ಜಿದ್ದಾಜಿದ್ದಿ ಈಗ ಅಕ್ಷರಶಃ ಸಪ್ತಸಾಗರಗಳನ್ನು ದಾಟಿದೆ. ಹೌದು, ರಾಜ್ಯ ಕಾಂಗ್ರೆಸ್ನಲ್ಲಿ ಸದ್ದಿಲ್ಲದೆ ನಡೆಯುತ್ತಿರುವ ಈ ‘ಅಗೋಚರ ಆಟ’ ಈಗ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನ ಬೀದಿಗಳಲ್ಲಿ ಪ್ರತಿಧ್ವನಿಸುತ್ತಿದೆ.</p><p><strong>ಶಾಸಕರ ವಿದೇಶ ಪ್ರವಾಸ: ಬರೀ ಮೋಜಲ್ಲ, ಇದು ರಣತಂತ್ರ!</strong></p><p>ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರ ದಂಡು ಈಗ ವಿದೇಶ…
ಚಿಕ್ಕನಾಯಕನಹಳ್ಳಿಯ ಎಫ್ಡಿಎ ಅಧಿಕಾರಿ ಜಯಲಕ್ಷ್ಮಿ ಅವರ ಅನುಮಾನಾಸ್ಪದ ಸಾವು ಕೊಲೆ ಎಂದು ಸಾಬೀತಾಗಿದೆ. ಆಸ್ತಿಗಾಗಿ ಆಕೆಯ ಸ್ವಂತ ಸಹೋದರಿ ಮತ್ತು ದತ್ತು ಪುತ್ರನೇ ಉಸಿರುಗಟ್ಟಿಸಿ ಕೊಲೆ ಮಾಡಿ, ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ್ದರು. ತುಮಕೂರು (ಫೆ.19): ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಶಿಕ್ಷಣ ಇಲಾಖೆಯ ಎಫ್ಡಿಎ (FDA) ಅಧಿಕಾರಿ ಜಯಲಕ್ಷ್ಮಿ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಈಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಆಸ್ತಿಗಾಗಿ ಆಕೆಯನ್ನು ಸ್ವಂತ ತಂಗಿ ಮತ್ತು ದತ್ತು ಪುತ್ರನೇ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬೆಳಕಿಗೆ…
ಪ್ರಧಾನಿ ಮೋದಿ ಆಯೋಜಿಸಿದ್ದ ಔತಣಕೂಟಕ್ಕೆ ಆಹ್ವಾನಿತರಾಗಿದ್ದ ಅಮೆರಿಕದ ಉದ್ಯಮಿ ಸಾರಾ ಹೂಕರ್, ದೆಹಲಿಯ ಭೀಕರ ಟ್ರಾಫಿಕ್ನಿಂದಾಗಿ ಕಾರ್ಯಕ್ರಮವನ್ನು ತಪ್ಪಿಸಿಕೊಂಡರು. ನಾಲ್ಕು ಗಂಟೆಗಳ ಕಾಲ ಟ್ರಾಫಿಕ್ನಲ್ಲಿ ಸಿಲುಕಿ, ಅಂತಿಮವಾಗಿ ಹೋಟೆಲ್ನಲ್ಲಿ ರೂಮ್ ಸರ್ವಿಸ್ ಮೂಲಕ ಊಟ ಮಾಡಿದ್ದಾರೆ. ನವದೆಹಲಿ (ಫೆ.19): ಭಾರತದ ರಾಜಧಾನಿ ದೆಹಲಿಯ ಟ್ರಾಫಿಕ್ ಸಮಸ್ಯೆ ಎಷ್ಟು ಭೀಕರವಾಗಿದೆ ಎಂದರೆ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರ ಔತಣಕೂಟಕ್ಕೆ ಆಮಂತ್ರಣ ಪಡೆದಿದ್ದ ಅಮೆರಿಕದ ಪ್ರಖ್ಯಾತ ಮಹಿಳಾ ಉದ್ಯಮಿಯೊಬ್ಬರು ಸಮಯಕ್ಕೆ ಸರಿಯಾಗಿ ತಲುಪಲಾಗದೆ ಪೇಚಿಗೆ ಸಿಲುಕಿದ್ದಾರೆ. ಅಡಾಪ್ಟೇಶನ್ ಲ್ಯಾಬ್ಸ್ನ…
ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಿ ಬ್ಯುಸಿನೆಸ್ ಮ್ಯಾನ್, ವಿದ್ಯಾರ್ಥಿಗಳು, ಗೃಹಿಣಿಯರು, ಹೀಗೆ ಒಂದಲ್ಲ ಒಂದು ಕಾರಣಕ್ಕೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮನುಷ್ಯನ ಜೀವನದಲ್ಲಿ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ ಅದಕ್ಕಿಂತ ಹೆಚ್ಚಿನ ಮಹತ್ವ ಮಾನಸಿಕ ಆರೋಗ್ಯಕ್ಕೆ ಇದೆ. ಹೌದು…ಇಂದಿನ ಲೈಫ್ ಸ್ಟೈಲ್, ಆಫೀಸ್ ಒತ್ತಡ, ಕೌಟುಂಬಿಕ ಸಮಸ್ಯೆಗಳು, ಆರ್ಥಿಕ ಮತ್ತು ಸಾಮಾಜಿಕ ಒತ್ತಡ ಹೀಗೆ ಹಲವು ಆತಂಕಗಳು, ಖಿನ್ನತೆ ಮತ್ತು ನಿರಾಸೆಯಂತಹ ಮಾನಸಿಕ ಸಮಸ್ಯೆಗಳು. ಈ ತಪ್ಪು ಕಲ್ಪನೆಗಳಿಂದ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಲು ಹೆದರುತ್ತಾರೆ. ಹೀಗಾಗಿ ಮಾನಸಿಕ…
ನವದೆಹಲಿ, ಫೆಬ್ರವರಿ 19: ಭಾರತೀಯ ಚುನಾವಣಾ ಆಯೋಗವು (ECI) ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳು (CEO) ಪತ್ರ ಬರೆದಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಏಪ್ರಿಲ್ 2026 ರಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಹೀಗಾಗಿ, SIRಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಲು ಚುನಾವಣಾ ಸಂಸ್ಥೆ ನಿರ್ದೇಶನ ನೀಡಿದೆ. ಈ ಕೆಳಗಿನ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ವರ್ಷ ಏಪ್ರಿಲ್ ತಿಂಗಳಿನಿಂದ…
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ಗೆ ಅರ್ಥಪೂರ್ಣ ಅಣು ಒಪ್ಪಂದಕ್ಕೆ ಒಪ್ಪಿಕೊಳ್ಳುವಂತೆ ಅಥವಾ ಕೆಟ್ಟ ಪರಿಣಾಮಗಳನ್ನು ಎದುರಿಸುವಂತೆ ಎಚ್ಚರಿಕೆ ನೀಡಿದ್ದಾರೆ. ಒಂದೆಡೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿದ್ದರೂ, ಅಮೆರಿಕ ಇರಾನ್ ಗಡಿಯ ಸುತ್ತಮುತ್ತ ಭಾರಿ ಸೇನಾ ಜಮಾವಣೆ ಮಾಡಿದೆ. ವಾಷಿಂಗ್ಟನ್ (ಫೆ.19): ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಮತ್ತು ಸೇನಾ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಗುಡುಗಿದ್ದಾರೆ. “ಇರಾನ್ ತಕ್ಷಣವೇ ಅರ್ಥಪೂರ್ಣವಾದ ಅಣು ಒಪ್ಪಂದಕ್ಕೆ ಒಪ್ಪಿಕೊಳ್ಳಬೇಕು, ಇಲ್ಲದಿದ್ದರೆ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು…