ನಾಳೆ ಬೆಳಗ್ಗೆ 6 ಗಂಟೆಯಿಂದ ಬಸ್ ಬಂದ್, ಹೈಕೋರ್ಟ್ ಆದೇಶದ ನಡುವೆ ಮುಷ್ಕರ್ ಫಿಕ್ಸ್ | Karnataka Transport Strike Begin From 6am Tomorrow Despite High Court Order
ಹೈಕೋರ್ಟ್ ಆದೇಶದ ನಡುವೆಯೂ ಸಾರಿಗೆ ನೌಕರರು ಮುಷ್ಕರ ಆರಂಭಿಸಲು ಸಜ್ಜಾಗಿದ್ದಾರೆ. ಈ ಕುರಿತು ಸಾರಿಗೆ ಮುಖಂಡ ಅನಂತ ಸುಬ್ಬರಾವ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು (ಆ.04) ಸಾರಿಗೆ ನೌಕರರ ಮುಷ್ಕರ ನಾಳೇವರಗೆ ತಡೆಹಿಡಿಯುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು. ಆದರೆ ಹೈಕೋರ್ಟ್ ಆದೇಶದ ನಡುವೆಯೂ ನಾಳೆಯಿಂದ ಅನಿರ್ದಿಷ್ಟಾವದಿ ಮುಷ್ಕರ ಆರಂಭಿಸುವುದು ಖಚಿತ ಎಂದು ಸಾರಿಗೆ ನೌಕರ ಮುಖಂಡ ಅನಂತ ಸುಬ್ಬರಾವ್…