ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಪ್ರಕರಣ, ಸ್ಯಾಂಡಲ್ವುಡ್ ನಟಿಯ ಗೆಳೆಯ ವೈಶಾಕ್ ಬಂಧನ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ | High Court Expresses Strong Displeasure Over Arrest Of Bk Vaishak In Avr Aravind Reddy Threat Letter Case
ಸ್ಯಾಂಡಲ್ವುಡ್ ನಟಿಯ ಗೆಳೆಯ ಬಿ.ಕೆ. ವೈಶಾಕ್ ಬಂಧನ ಪ್ರಕ್ರಿಯೆಯಲ್ಲಿ ಕಾನೂನು ಪಾಲಿಸದ ಪೊಲೀಸರು ಮತ್ತು ಮ್ಯಾಜಿಸ್ಟ್ರೇಟ್ ನಡೆಗೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೋಟಿಸ್ ನೀಡದೆ ಬಂಧಿಸಿರುವುದು ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸ್ಯಾಂಡಲ್ವುಡ್ ನಟಿ ಮತ್ತು ಉದ್ಯಮಿ ಅರವಿಂದ್ ರೆಡ್ಡಿ ಗಲಾಟೆ ಮಧ್ಯೆ ಬೆದರಿಕೆ ಪತ್ರ ಕಳುಹಿಸಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ನಟಿ ಆತ್ಮೀಯ ಗೆಳೆಯ ಬಿ.ಕೆ. ವೈಶಾಕ್ ಅವರ ಬಂಧನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ. ಬಂಧನಕ್ಕೂ…