ಕಲಬುರಗಿ, ಜೂನ್ 25: ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಗಂಡಸರೇ ಇಲ್ಲ ಅಂದ್ಕೊಡಿದ್ದೆ, ಆದರೆ ಆಳಂದ್ ಶಾಸಕ ಬಿಅರ್ ಪಾಟೀಲ್ (Aland MLA BR Patil) ಅದನ್ನು ಸುಳ್ಳು ಮಾಡಿದ್ದಾರೆ, ಅವರ ನಂತರ ರಾಜು ಕಾಗೆ ಮತ್ತು ಗೋಪಾಲಕೃಷ್ಣ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡಿದ್ದಾರೆ, ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್ನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ನಾರಾಯಣ ಸ್ವಾಮಿ ಚಲವಾದಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ನಾಯಕರು ಹೇಳಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅಪಹಾಸ್ಯ ಮಾಡಿದ್ದರು, ಈಗ ಅವರ ಪಕ್ಷದವರೇ ಆರೋಪಗಳನ್ನು ಮಾಡುತ್ತಿದ್ದಾರಲ್ಲ, ಏನು ಹೇಳುತ್ತಾರೆ? ಎಂದು ಚಲವಾದಿ ಪ್ರಶ್ನಿಸಿದರು.
ಇದನ್ನೂ ಓದಿ: ಸ್ಮಾರಕವಾಗಿರುವ ವಿಧಾನ ಸೌಧವನ್ನು ಸರ್ಕಾರ ಡಬ್ಬ ಅಂಗಡಿಯೆಂದು ಪರಿಗಣಿಸಿದೆ: ನಾರಾಯಣಸ್ವಾಮಿ ಚಲವಾದಿ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ