ಬೆಂಗಳೂರು, ಜೂನ್ 25: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಲ್ಲಿ ‘ಕಾವೇರಿ ಆರತಿ’ಗೆ ರೈತರಿಂದ ವಿರೋಧ ವ್ಯಕ್ತವಾಗಿರುವ ಕಾರಣ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ವಿಧಾನಸೌಧದಲ್ಲಿ ರೈತ ಮುಖಂಡರ ಜತೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ, ಎಂಎಲ್ಸಿ ದಿನೇಶ್ಗೂಳಿಗೌಡ ಭಾಗಿಯಾದರು. ಡಿಕೆ ಶಿವಕುಮಾರ್, ರೈತ ಮುಖಂಡರ ಮನವೊಲಿಸುವ ಪ್ರಯತ್ನ ಮಾಡಿದರು. ಇದೇ ವೇಳೆ, ಕಾವೇರಿ ಆರತಿ ವೇದಿಕೆಯ ಪ್ರಾಜೆಕ್ಟ್ ಪ್ಲಾನ್ ವೀಕ್ಷಿಸಿದರು. ವಿಡಿಯೋ ಇಲ್ಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ