ಜಮ್ಮು-ಕಾಶ್ಮೀರ ಜಲವಿದ್ಯುತ್ ಯೋಜನೆ; ಶಾಶ್ವತ ಮಧ್ಯಸ್ಥಿಕೆ ನ್ಯಾಯಾಲಯದ ತೀರ್ಪು ನಿರಾಕರಿಸಿದ ಭಾರತ

ಜಮ್ಮು-ಕಾಶ್ಮೀರ ಜಲವಿದ್ಯುತ್ ಯೋಜನೆ; ಶಾಶ್ವತ ಮಧ್ಯಸ್ಥಿಕೆ ನ್ಯಾಯಾಲಯದ ತೀರ್ಪು ನಿರಾಕರಿಸಿದ ಭಾರತ


ನವದೆಹಲಿ, ಜೂನ್ 28: ಜಮ್ಮು-ಕಾಶ್ಮೀರದಲ್ಲಿನ (Jammu and Kashmir) ಕಿಶನ್​ಗಂಗಾ ಮತ್ತು ರ್ಯಾಟಲ್ ಈ ಎರಡು ಜಲವಿದ್ಯುತ್ ಯೋಜನೆಗಳ ಕುರಿತು ಹೇಗ್‌ನಲ್ಲಿರುವ ಶಾಶ್ವತ ಮಧ್ಯಸ್ಥಿಕೆ ನ್ಯಾಯಾಲಯದ ತೀರ್ಪನ್ನು ಪಾಕಿಸ್ತಾನ (Pakistan) ಸ್ವಾಗತಿಸಿದೆ. ಆದರೆ, ಈ ತೀರ್ಪನ್ನು ಭಾರತ ತಿರಸ್ಕರಿಸಿದೆ. 1960ರಲ್ಲಿ ಸಿಂಧೂ ನದಿ ನೀರು ಹಂಚಿಕೆಯ ಮಧ್ಯಸ್ಥಿಕೆ ವಿಚಾರವಾಗಿ ಸ್ಥಾಪಿಸಿದ್ದ ನ್ಯಾಯಾಲಯವನ್ನು ಭಾರತ ಅನಧಿಕೃತ ಎನ್ನುವ ಮೂಲಕ ತನ್ನ ದಿಟ್ಟ ನಿಲುವು ತಿಳಿಸಿದೆ. ಸಿಂಧೂ ನದಿ ಹಂಚಿಕೆ ಒಪ್ಪಂದವನ್ನು ಉಲ್ಲಂಘಿಸಿ ಈ ಕೋರ್ಟ್ ಅನ್ನು ಸ್ಥಾಪಿಸಲಾಗಿತ್ತು ಎಂದು ಭಾರತ ಆರೋಪಿಸಿದೆ.

ಸಿಂಧೂ ಜಲ ಒಪ್ಪಂದಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಭಾರತದೊಂದಿಗೆ ಮಾತುಕತೆಗೆ ಸಿದ್ಧ ಎಂದು ಪಾಕಿಸ್ತಾನ ಹೇಳಿದೆ. ಆದರೆ, ಪಾಕಿಸ್ತಾನದೊಂದಿಗಿನ ವಿವಾದ ಪರಿಹಾರಕ್ಕಾಗಿ ಯಾವುದೇ ಚೌಕಟ್ಟನ್ನು ಗುರುತಿಸಿಲ್ಲ ಎಂದು ಭಾರತ ಶುಕ್ರವಾರ ಈ ತೀರ್ಪನ್ನು ಬಲವಾಗಿ ತಿರಸ್ಕರಿಸಿದೆ. ಭಾರತವೆಂದೂ ಈ ನ್ಯಾಯಾಲಯವನ್ನು ಅಧಿಕೃತ ಎಂದು ಎಂದಿಗೂ ಪರಿಗಣಿಸಿಲ್ಲ. ನಾವು ಈ ಕೋರ್ಟ್ ತೀರ್ಪನ್ನು ಎಂದಿಗೂ ಒಪ್ಪುವುದಿಲ್ಲ. ಜಮ್ಮು ಮತ್ತು ಕಾಶ್ಮೀರದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಈ ಕೋರ್ಟ್ ನೀಡಿರುವ ತೀರ್ಪನ್ನು ಅಮಾನ್ಯ ಎಂದು ಪರಿಗಣಿಸಲಾಗುವುದು. ಭಾರತ ಪ್ರತಿ ಸಲವೂ ಈ ನ್ಯಾಯಾಲಯದ ಎಲ್ಲ ತೀರ್ಪನ್ನೂ ನಿರಾಕರಿಸಿದೆ, ಈಗಲೂ ನಿರಾಕರಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿತ್ತು.

ಇದನ್ನೂ ಓದಿ: ಆಪರೇಷನ್ ಸಿಂಧೂರ್: ಭಾರತದಿಂದ ತಮ್ಮನ್ನು ಕಾಪಾಡುವಂತೆ ಸೌದಿ ರಾಜಕುಮಾರನಿಗೆ ಕರೆ ಮಾಡಿತ್ತು ಪಾಕ್ ಸರ್ಕಾರ

ಒಂದುವೇಳೆ ಭಾರತ ಮತ್ತು ಪಾಕಿಸ್ತಾನದ ನಡುವೆ ನದಿ ನೀರು ಹಂಚಿಕೆಯ ಬಗ್ಗೆ ಯಾವುದಾದರೂ ಪ್ರಕರಣ ದಾಖಲಾದರೆ ಅದನ್ನು ವಿಚಾರಣೆ ನಡೆಸುವ ಅಧಿಕಾರ ಮಾತ್ರ ಈ ನ್ಯಾಯಾಲಯಕ್ಕಿದೆ. ನದಿ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ನಿರ್ಧರಿಸುವ ಯಾವ ಅಧಿಕಾರವೂ ಈ ನ್ಯಾಯಾಲಯಕ್ಕಿಲ್ಲ. ಪಾಕಿಸ್ತಾನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೂ ಸಿಂಧೂ ಜಲ ಒಪ್ಪಂದವನ್ನು ರದ್ದುಪಡಿಸುವುದು ಖಚಿತ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ನ್ಯಾಯಾಲಯದ ತೀರ್ಪೇನು?:

ಏಪ್ರಿಲ್‌ನಲ್ಲಿ ಭಾರತವು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದು, ಅದು ವಿವಾದದ ಬಗ್ಗೆ ತನ್ನ ಸಾಮರ್ಥ್ಯವನ್ನು ಮಿತಿಗೊಳಿಸುವುದಿಲ್ಲ ಮತ್ತು ಅದರ ತೀರ್ಪು ಪಕ್ಷಗಳ ಮೇಲೆ ಬದ್ಧವಾಗಿದೆ ಎಂದು ಮಧ್ಯಸ್ಥಿಕೆ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿದೆ. ಪಾಕಿಸ್ತಾನವು ಈ ತೀರ್ಪನ್ನು “ಪ್ರಮುಖ ಕಾನೂನು ಗೆಲುವು” ಎಂದು ಕರೆದಿದ್ದು, “ಭಾರತವು ಏಕಪಕ್ಷೀಯವಾಗಿ ಒಪ್ಪಂದವನ್ನು ಅಮಾನತುಗೊಳಿಸಲು ಅಥವಾ ಬದಿಗಿಡಲು ಸಾಧ್ಯವಿಲ್ಲ ಎಂಬ ಸ್ಪಷ್ಟ ಸಂದೇಶವಿದು” ಎಂದು ಒತ್ತಿ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 5:48 pm, Sat, 28 June 25



Source link

Leave a Reply

Your email address will not be published. Required fields are marked *