ಚಿಕ್ಕಬಳ್ಳಾಪುರ, ಜೂನ್ 28: ಸಿದ್ದರಾಮಯ್ಯ ಸರ್ಕಾರ ಜುಲೈ 2ರಂದು ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಡೆಸಲಿರುವುದರಿಂದ ಜೂನ್ 30 ಸಾಯಂಕಾಲ 6 ಗಂಟೆಯಿಂದ ಜುಲೈ 3 ಮಧ್ಯಾಹ್ನ 3 ಗಂಟೆಯವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿರುವ ಜಿಲ್ಲಾಧಿಕಾರಿ ಪಿಎನ್ ರವೀಂದ್ರ, ನಂದಿ ಹಿಲ್ಸ್ ಗೆ ಸಿಂಗಲ್ ರಸ್ತೆ ಇರೋದ್ರಿಂದ ಮತ್ತು ಸಭೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿರುವುದರಿಂದ ಪ್ರವಾಸಿಗರನ್ನು ನಿರ್ಬಂಧಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಸಿದ್ಧತೆಯ ಭಾಗವಾಗಿ ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ರಸ್ತೆಗಳನ್ನು ದುರಸ್ತಿ ಮಾಡಿಸುವ ಕಾರ್ಯದಲ್ಲಿ ತೊಡಗಿರುವುದನ್ನು ನೋಡಬಹುದು.
ಇದನ್ನೂ ಓದಿ: ಪ್ರವಾಸಿತಾಣ ನಂದಿಗಿರಿಧಾಮ 1 ತಿಂಗಳು ಬಂದ್: ವೀಕೆಂಡ್ನಲ್ಲಿ ಮಾತ್ರ ಓಪನ್..!
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ