
ಇನ್ಸ್ಟಾಗ್ರಾಮ್ ರೀಲ್ಸ್ನಿಂದ ಆರಂಭವಾದ ಪ್ರೇಮಿಗಳ ಜಗಳ ಯುವತಿಯ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ತುಮಕೂರಿನಲ್ಲಿ ನಡೆದ ಈ ಘಟನೆಯಲ್ಲಿ ಚೈತನ್ಯ ಎಂಬ ಯುವತಿ ನೇಣಿಗೆ ಶರಣಾಗಿದ್ದಾಳೆ.<img><p>ಇನ್ಸ್ಟಾಗ್ರಾಮ್ ರೀಲ್ಸ್ನಿಂದ ಪ್ರೇಮಿಗಳ ನಡುವೆ ಆರಂಭವಾದ ಜಗಳ, ಪ್ರೇಯಸಿಯ ದುರಂತ ಸಾವಿನಿಂದ ಅಂತ್ಯವಾಗಿದೆ. ಪ್ರಿಯಕರನ ಜೊತೆ ಜಗಳ ಮಾಡಿದ ಬಳಿಕ ಯುವತಿ ಚೈತನ್ಯ(22) ನೇಣಿಗೆ ಶರಣಾಗಿದ್ದಾಳೆ.</p><img><p>ತುಮಕೂರು ಗ್ರಾಮಾಂತರ ತಾಲೂಕು ಹೊಸಹಳ್ಳಿ ನಿವಾಸಿ ಚೈತನ್ಯ. ನೆನ್ನೆ ರಾತ್ರಿ 10 ಘಂಟೆ ಸುಮಾರಿಗೆ ಘಟನೆ ನಡೆದಿದೆ. ಮೃತ ಯುವತಿ ಚೈತನ್ಯ ತಾಯಿ ಜೊತೆ ವಾಸವಿದ್ದಳು.</p><img><p>ಯುವತಿ ಚೈತನ್ಯ ಕಾಲೇಜಿನಲ್ಲಿ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತಿದ್ದಳು. ಜೊತೆಗೆ ಮಾಡಲಿಂಗ್ನ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದಳು.</p><img><p>ತಮ್ಮ ಪಕ್ಕದ ಊರಿನ ವಿಜಯ್ ಕುಮಾರ್ ಜೊತೆ ಪ್ರೀತಿಯಲ್ಲಿದ್ದಳು. ವಿಜಯ್ ಕುಮಾರ್ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದಾನೆ. ಕಳೆದ ಕೆಲವು ವರ್ಷಗಳಿಂದ ಮನೆಯವರಿಗೆ ಗೊತ್ತಾಗದಂತೆ ಕದ್ದು ಮುಚ್ಚಿ ಪ್ರೀತಿಸುತ್ತಿದ್ದರು.</p><img><p>ಇನ್ನು ವಿಜಯ್ ಕುಮಾರ್ ಮತ್ತು ಚೈತನ್ಯಳ ಪ್ರೀತಿ ವಿಚಾರವನ್ನು ತಿಳಿದ ಯುವತಿಯ ಮಾವ ಆಕೆಗೆ ಎಚ್ಚರಿಕೆಯನ್ನು ನೀಡಿದ್ದರು. ನೀನು ಪ್ರೀತಿ-ಪ್ರೇಮ ಇದೆಲ್ಲ ಬಿಟ್ಟುಬಿಡುವಂತೆ ತಿಳಿಸಿದ್ದರು.</p><img><p>ನಿನ್ನೆ ಚೈತನ್ಯ ರೀಲ್ಸ್ ವೊಂದನ್ನು ಸ್ಟೇಟಸ್ ನಲ್ಲಿ ಅಪ್ಲೋಡ್ ಮಾಡಿದ್ದಳು. ಇದೇ ವಿಚಾರವಾಗಿ ಪ್ರಶ್ನಿಸಲು ರಾತ್ರಿ ಚೈತನ್ಯ ಮನೆ ಬಳಿಗೆ ವಿಜಯ್ ಬಂದಿದ್ದನು.</p><img><p>ಆಗ ಚೈತನ್ಯಳ ತಾಯಿ ಸೌಭಾಗ್ಯಮ್ಮ ಮನೆಯ ರೂಮಿನಲ್ಲಿದ್ದರು. ತಾಯಿ ಇದ್ದ ರೂಮಿನ ಬಾಗಿಲನ್ನು ಲಾಕ್ ಮಾಡಿ ಕಿಟಕಿಯ ಬಳಿ ಇಬ್ಬರೂ ಜಗಳ ಮಾಡಲಾರಂಭಿಸಿದ್ದಾರೆ.</p><img><p>ವಿಜಯ್ ಕುಮಾರ್ ಜಗಳ ಮಾಡಿಕೊಂಡು ಹೋದ ಬಳಿಕ ಚೈತನ್ಯಾ ಸಾಯುವುದಾಗಿ ಕರೆ ಮಾಡಿ ಹೇಳಿದ್ದಾಳೆ. ಈ ವಿಚಾರವನ್ನು ವಿಜಯ್ ಕೂಡಲೇ ಚೈತನ್ಯಳ ಸಂಬಂಧಿಗೆ ಕರೆ ಮಾಡಿ ತಿಳಿಸಿದ್ದಾನೆ.</p><img><p>ಚೈತನ್ಯಾ ಸಾವಿಗೆ ಪ್ರಯತ್ನಿಸುವ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿಕರು ಬಂದು ನೋಡಿದಾಗ ಯುವತಿ ನೇಣಿಗೆ ಶರಣಾಗಿ ಮೃತಪಟ್ಟಿರುವುದು ಖಚಿತವಾಗಿದೆ.</p><img><p>ಈ ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಚೈತನ್ಯಾಳ ಸಾವಿಗೆ ಆಕೆಯ ಪ್ರೇಮಿ ವಿಜಯ್ ಕುಮಾರ ಕಾರಣ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.</p><img><p>ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ವಿಜಯ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.</p>
Source link
ತುಮಕೂರು: ರೀಲ್ಸ್ ಮಾಡಬೇಡ ಎಂದಿದ್ದಕ್ಕೆ ಪ್ರಾಣವನ್ನೇ ಬಿಟ್ಟ ಪ್ರೇಯಸಿ!