ರಾಜಣ್ಣ ಇಂದು ನಗರದಲ್ಲಿ ಆಡಿದ ‘ಆಗಸ್ಟ್ ಕ್ರಾಂತಿ’ಯ ಮಾತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ

ರಾಜಣ್ಣ ಇಂದು ನಗರದಲ್ಲಿ ಆಡಿದ ‘ಆಗಸ್ಟ್ ಕ್ರಾಂತಿ’ಯ ಮಾತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ


ಬೆಂಗಳೂರು, ಜೂನ್ 26: ಮೊನ್ನೆಯಷ್ಟೇ ತಮ್ಮ ಹುಟ್ಟುಹಬ್ಬದ ಅಮೃತ ಮಹೋತ್ಸವ ಆಚರಿಸಿಕೊಂಡ ಸಹಕಾರ ಸಚಿವ ಕೆಎನ್ ರಾಜಣ್ಣ ಕೆಲದಿನಗಳಿಂದ ನಿಲ್ಲಿಸಿದ್ದ ತಮ್ಮ ಮಾತುಗಾರಿಕೆಯನ್ನು ಪುನಃ ಆರಂಭಿಸಿದ್ದಾರೆ. ಇಂದು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ರಾಜ್ಯದಲ್ಲಿ ಆಗಸ್ಟ್ ಕ್ರಾಂತಿ (August Revolution) ಅಗಲಿದೆ ಅಂತ ಹೇಳಿದರು. ಅವರು ಯಾಕೆ ಹಾಗೆ ಹೇಳಿದರು ಅಂತ ಅರ್ಥಮಾಡಿಕೊಳ್ಳುವುದು ಕನ್ನಡಿಗರಿಗೆ ಕಷ್ಟವಾಗುತ್ತಿದೆ. ಯಾವ ಕ್ರಾಂತಿ? ಸರ್ಕಾರದಲ್ಲೋ, ಪಕ್ಷದಲ್ಲೋ ಅಂತ ಕೇಳಿದರೆ ಅವರಿಂದ ಸ್ಪಷ್ಟ ಉತ್ತರವಿಲ್ಲ. ಎಲ್ಲವನ್ನೂ ಈಗಲೇ ಹೇಳಿಬಿಟ್ಟರೆ ಕುತೂಹಲ ನಾಶವಾಗುತ್ತದೆ ಎನ್ನುತ್ತಾರೆ. ಅವರ ‘ಕ್ರಾಂತಿ’ ಯ ಮಾತುಗಳಿಗೆ ವಿರೋಧ ಪಕ್ಷದ ನಾಯಕರು ತಮಗೆ ತೋಚಿದ ವಿಶ್ಲೇಷಣೆಗಳನ್ನು ನೀಡುತ್ತಿದ್ದಾರೆ. ಯಾವುದು ಸರಿ ಯಾವುದು ತಪ್ಪು?

ಇದನ್ನೂ ಓದಿ:  KN Rajanna: ಸಚಿವ ಕೆಎನ್ ರಾಜಣ್ಣ ಚುನಾವಣೆ ರಾಜಕಾರಣಕ್ಕೆ ಗುಡ್​ ಬೈ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *