ಬೆಂಗಳೂರು, ಜೂನ್ 27: ನಮ್ಮ ಸರ್ಕಾರದ ಮಂತ್ರಿ ಮತ್ತು ಶಾಸಕರಲ್ಲಿ ಆಂತರಿಕ ತುಮುಲ, ಬೇಗುದಿ ಎಂಥದ್ದೂ ಇಲ್ಲ, ಯಾವ ಕ್ರಾಂತಿಯೂ ಅಗಲ್ಲ (no revolution), ರಾಜಣ್ಣ ಹೇಳಿದ್ದೊಂದು ಮಾಧ್ಯಮದವರು ಅರ್ಥೈಸಿಕೊಂಡಿರೋದು ಮತ್ತೊಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜಕೀಯ ಬೆಳವಣಿಗೆ ಬಗ್ಗೆ ಅವರು ಮಾತಾಡಿದ್ದಾರೆ, ಹೀಗೆಯೇ ಅಗುತ್ತೆ ಅಂತ ಅವರೇನಾದರೂ ಹೇಳಿದ್ದಾರಾ? ಅವರೇನು ಹೇಳಿದ್ದಾರೆ ಅಂತ ಮಾಧ್ಯಮಗಳ ಹಾಗೆ ತಾನು ವಿಶ್ಲೇಷಣೆ ಮಾಡುತ್ತಾ ಕೂರಲಾರೆ ಎಂದು ಸಿಎಂ ಹೇಳಿದರು. ಹಾಗಾದರೆ ರಾಜಣ್ಣ ಹೇಳಿದ್ದನ್ನು ನೀವು ಹೇಗೆ ಅರ್ಥೈಸಿಕೊಳ್ಳುತ್ತೀರಿ ಎಂದಾಗ ಸಿದ್ದರಾಮಯ್ಯ, ಅವರ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ ಎಂದರು.
ಇದನ್ನೂ ಓದಿ: ಮುಂದೆ ಹೀಗೆ ಆದರೆ ಸಹಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ಬಳಿ ಹೈಕಮಾಂಡ್ ಖಡಕ್ ಸಂದೇಶ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ