
<p>ಮುಂಬೈ: ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲೇಬೇಕು ಅಂತ ಪಣ ತೊಟ್ಟಿರುವ ವೈಭವ್ ಸೂರ್ಯವಂಶಿ ತಮ್ಮ ಜೀವನಶೈಲಿ ಹಾಗೂ ಆಹಾರ ಪದ್ಧತಿಯಲ್ಲಿ ದೊಡ್ಡ ಬದಲಾವಣೆ ಮಾಡಿಕೊಂಡಿದ್ದಾರೆ. ಸದ್ಯ ಐಪಿಎಲ್ಗೆ ಮುನ್ನ ರಾಜಸ್ಥಾನ ರಾಯಲ್ಸ್ ತಂಡದ ಜೊತೆ ಟ್ರೈನಿಂಗ್ನಲ್ಲಿರುವ ವೈಭವ್, ಸಂಪೂರ್ಣವಾಗಿ ಮಾಂಸಾಹಾರ ತ್ಯಜಿಸಿದ್ದಾರೆ.</p><p> </p><img><p>ಕಳೆದ ತಿಂಗಳು ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆದ 19 ವರ್ಷದೊಳಗಿನವರ ವಿಶ್ವಕಪ್ನಲ್ಲಿ ಭಾರತಕ್ಕೆ ಪ್ರಶಸ್ತಿ ಗೆಲ್ಲಿಸಿಕೊಡುವಲ್ಲಿ 14 ವರ್ಷದ ವೈಭವ್ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ವೈಭವ್ ಗುರಿ ಅಷ್ಟಕ್ಕೆ ನಿಂತಿಲ್ಲ.</p><img><p>ಭಾರತದ ಸೀನಿಯರ್ ತಂಡದಲ್ಲಿ ಸ್ಥಾನ ಗಿಟ್ಟಿಸಿ, 2028ರ ಟಿ20 ವಿಶ್ವಕಪ್ ಆಡಬೇಕು ಅನ್ನೋದು ಅವರ ಗುರಿ. ಇದಕ್ಕಾಗಿ ಫಿಟ್ನೆಸ್ ಹೆಚ್ಚಿಸಿಕೊಳ್ಳಲು ಹಾಗೂ ತೂಕ ಇಳಿಸಿಕೊಳ್ಳಲು ಅವರು ಈಗ ಸಂಪೂರ್ಣ ಸಸ್ಯಾಹಾರಿಯಾಗಿದ್ದಾರೆ.</p><img><p>ವೈಭವ್ ತಮ್ಮ ಹೊಸ ಡಯಟ್ ಪ್ಲಾನ್ನಲ್ಲಿ ಚಿಕನ್ ಮತ್ತು ಮಟನ್ ಅನ್ನು ಪೂರ್ತಿಯಾಗಿ ಕೈಬಿಟ್ಟಿದ್ದಾರೆ. ಪ್ರೊಟೀನ್ಗಾಗಿ ಈಗ ಬೇಳೆಕಾಳುಗಳು, ಪನೀರ್ ಮತ್ತು ತರಕಾರಿಗಳನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಂಡಿದ್ದಾರೆ.</p><img><p>ಅಷ್ಟೇ ಅಲ್ಲ, ಈ ಬಾರಿ 10ನೇ ತರಗತಿ ಬೋರ್ಡ್ ಪರೀಕ್ಷೆ ಬರೆಯಬೇಕಿತ್ತು. ಆದರೆ ರಾಜಸ್ಥಾನ ರಾಯಲ್ಸ್ ತರಬೇತಿ ಶಿಬಿರದಲ್ಲಿ ಭಾಗವಹಿಸಬೇಕಿದ್ದ ಕಾರಣ, ಪರೀಕ್ಷೆ ಬರೆಯದಿರಲು ನಿರ್ಧರಿಸಿದ್ದಾರೆ.</p><img><p>ಕ್ರಿಕೆಟ್ ಮೇಲೆ ಸಂಪೂರ್ಣ ಗಮನ ಹರಿಸಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ವೈಭವ್ ತಂದೆ ಸಂಜೀವ್ ಸೂರ್ಯವಂಶಿ ‘ಮಿಡ್-ಡೇ’ ಪತ್ರಿಕೆಗೆ ತಿಳಿಸಿದ್ದಾರೆ. ಮುಂದಿನ ವರ್ಷ ಪರೀಕ್ಷೆ ಬರೆಯಲು ನಿರ್ಧರಿಸಲಾಗಿದೆ.</p><img><p>ಐಪಿಎಲ್ ಮುಗಿಯುವಷ್ಟರಲ್ಲಿ ವೈಭವ್ಗೆ 15 ವರ್ಷ ತುಂಬಲಿದೆ. ಇದು ಅಂತರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಲು ಐಸಿಸಿ ನಿಗದಿಪಡಿಸಿರುವ ಕನಿಷ್ಠ ವಯಸ್ಸು. ಇದರ ನಂತರ ವೈಭವ್ ಭಾರತದ ಸೀನಿಯರ್ ತಂಡಕ್ಕೆ ಆಯ್ಕೆಯಾಗುತ್ತಾರೆ ಎಂದು ಕೋಚ್ ಮನೀಶ್ ಓಜಾ ಭರವಸೆ ವ್ಯಕ್ತಪಡಿಸಿದ್ದಾರೆ.</p>
Source link
ಟೀಂ ಇಂಡಿಯಾಗೆ ಎಂಟ್ರಿ ಕೊಡೋಕೆ ಭರ್ಜರಿ ತಯಾರಿ; ಚಿಕನ್, ಮಟನ್ ಬಿಟ್ಟ ವೈಭವ್ ಸೂರ್ಯವಂಶಿ!