Headlines

Best Indian Movies: ಭಾರತೀಯ ಚಿತ್ರರಂಗದ ದಿಕ್ಕನ್ನೇ ಬದಲಾಯಿಸಿದ ಅತ್ಯುತ್ತಮ ಸಿನಿಮಾಗಳಿವು! ಅದರಲ್ಲಿ ಕನ್ನಡದ್ದೆಷ್ಟು?

Best Indian Movies: ಭಾರತೀಯ ಚಿತ್ರರಂಗದ ದಿಕ್ಕನ್ನೇ ಬದಲಾಯಿಸಿದ ಅತ್ಯುತ್ತಮ ಸಿನಿಮಾಗಳಿವು! ಅದರಲ್ಲಿ ಕನ್ನಡದ್ದೆಷ್ಟು?



Best Indian Movies: ಭಾರತೀಯ ಚಿತ್ರರಂಗದ ದಿಕ್ಕನ್ನೇ ಬದಲಾಯಿಸಿದ ಅತ್ಯುತ್ತಮ ಸಿನಿಮಾಗಳಿವು! ಅದರಲ್ಲಿ ಕನ್ನಡದ್ದೆಷ್ಟು?
<p>ಈ ಕೆಳಗಿನ ಹದಿನೈದು ಸಿನಿಮಾಗಳು ಭಾರತೀಯ ಚಿತ್ರರಂಗಕ್ಕೆ ಹೊಸ ಮೆರುಗು, ಚೈತನ್ಯ ನೀಡಿವೆ. ಅವು ಯಾವುವು?&nbsp;</p><img><p>ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಯ ಸಿನಿಮಾಗಳು ಭಾರತೀಯ ಚಿತ್ರರಂಗದ ದಿಕ್ಕನ್ನೇ ಬದಲಾಯಿಸಿವೆ. ಇವು ಕಮರ್ಷಿಯಲ್‌ ಆಗಿ ಒಂದೇ ಅಲ್ಲದೆ ಭಾರತದ ಕಲಾತ್ಮಕ, ಭಾವನಾತ್ಮಕ ಪ್ರಪಂಚವನ್ನು ತೆರೆದಿಟ್ಟಿವೆ.</p><img><p>ರಿಷಬ್ ಶೆಟ್ಟಿಯವರ ‌ʼಕಾಂತಾರʼ ಸಿನಿಮಾವು ಕನ್ನಡ ಚಿತ್ರರಂಗದ ಹಾಗೂ ನಮ್ಮ ನಾಡಿನ ಕಥೆ ಹೇಳುವಲ್ಲಿ ಒಂದು ಸಾಂಸ್ಕೃತಿಕ ಮೈಲಿಗಲ್ಲು ಎಂದು ಹೇಳಬಹುದು. ದಕ್ಷಿಣ ಕನ್ನಡದ ಸಂಪ್ರದಾಯವನ್ನು ಭೂಮಿ ವಿವಾದ, ಮನರಂಜನೆ ಜೊತೆಗೆ ಸಂಯೋಜಿಸಿದ ಈ ಸಿನಿಮಾವು ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡಿತ್ತು. ಅತಿ ಹೆಚ್ಚು ಗಳಿಕೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಕನ್ನಡ ಚಿತ್ರರಂಗಕ್ಕೆ ನಿಜಕ್ಕೂ ದೊಡ್ಡ ಮನ್ನಣೆಯನ್ನು ತಂದಿತು.</p><img><p>ಜೀತು ಜೋಸೆಫ್‌ರವರ ದೃಶ್ಯಂ 2 ಸಿನಿಮಾವು ಇದರ ಮೊದಲ ಸಿನಿಮಾದ ಯಶಸ್ಸನ್ನು ಮೀರಿಸಿತು. ಮೋಹನ್‌ಲಾಲ್‌ ಅವರ ಜಾರ್ಜ್‌ಕುಟ್ಟಿಯ ಪಾತ್ರವು ಒಂದು ಸಾಮಾನ್ಯ ಕುಟುಂಬದ ಮನುಷ್ಯನ ಜಾಣತನ ಹೇಗಿದೆ ಅಂತ ಹೇಳಿತ್ತು. ಈ ಸಿನಿಮಾವು ಹಿಂದಿಯಲ್ಲಿಯೂ ರಿಮೇಕ್ ಆಗಿ, ಮಲಯಾಳಂ ಚಿತ್ರರಂಗದ ಥ್ರಿಲ್ಲರ್ ಜಾನರ್‌ಗೆ ಶಕ್ತಿ ತುಂಬಿತು.</p><img><p>ಏರ್ ಡೆಕ್ಕನ್ ಸಂಸ್ಥಾಪಕ ಕ್ಯಾಪ್ಟನ್ ಜಿ ಆರ್ ಗೋಪಿನಾಥ್‌ ಅವರ ಬಯೋಗ್ರಫಿ ಆಧಾರಿತ ಸಿನಿಮಾವಾಗಿದೆ. ಇದನ್ನು ಸುಧಾ ಕೊಂಗರಾ ನಿರ್ದೇಶನ ಮಾಡಿದ್ದರು. ನಟ ಸೂರ್ಯ, ಅಪರ್ಣಾ ಬಾಲಮುರಳಿ ಅವರ ನಟನೆಯ ಈ ಸಿನಿಮಾವು ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದು, ತಮಿಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿತ್ತು.</p><img><p>ಪ್ರಶಾಂತ್ ನೀಲ್‌ ಅವರ KGF Movie 1 ಕನ್ನಡ ಚಿತ್ರರಂಗದಲ್ಲಿ ಮೊದಲು ₹250 ಕೋಟಿ ಗಳಿಸಿದ ಸಿನಿಮಾವಾಗಿದೆ. ಯಶ್‌ ಅವರ ರಾಕಿಯ ಪಾತ್ರವು ಐಕಾನಿಕ್ ಆಗಿ, ಈ ಸಿನಿಮಾವು ಕನ್ನಡ ಚಿತ್ರರಂಗವನ್ನು ಪ್ಯಾನ್‌ ಇಂಡಿಯಾ ಮಟ್ಟಕ್ಕೆ ಕರೆದುಕೊಂಡು ಹೋಗಿದೆ.</p><img><p>ಎಸ್ ಎಸ್ ರಾಜಮೌಳಿಯವರ ಬಾಹುಬಲಿ ಸಿನಿಮಾವು ಭಾರತೀಯ ಚಿತ್ರರಂಗದಲ್ಲಿ ಒಂದು ದೃಶ್ಯ ಮಹಾಕಾವ್ಯ. ಈ ಸಿನಿಮಾವು ತನ್ನ ಭವ್ಯವಾದ ದೃಶ್ಯ, ಆಕ್ಷನ್ ದೃಶ್ಯ, ಭಾವನಾತ್ಮಕ ಸ್ಟೋರಿಯೊಂದಿಗೆ ಜಾಗತಿಕ ಮಟ್ಟದಲ್ಲಿ ದಕ್ಷಿಣ ಭಾರತೀಯ ಚಿತ್ರರಂಗಕ್ಕೆ ಮನ್ನಣೆ ಕೊಟ್ಟಿತು.</p><img><p>ಯೋಗರಾಜ್ ಭಟ್‌ರವರ ಮುಂಗಾರು ಮಳೆ ಸಿನಿಮಾ ಕನ್ನಡ ಚಿತ್ರರಂಗದ ಗೋಲ್ಡನ್‌ ಸಿನಿಮಾವಾಗಿದ್ದು, ₹50 ಕೋಟಿಗ ರೂಪಾಯಿಗಳನ್ನು ಕೊಳ್ಳೆ ಹೊಡೆದಿತ್ತು. ಗಣೇಶ್, ಪೂಜಾ ಗಾಂಧಿ, ಯೋಗರಾಜ್‌ ಭಟ್‌ ಕಾಂಬಿನೇಶನ್‌ ನಿಜಕ್ಕೂ ಭಾವನಾತ್ಮಕ ಕಥೆ, ಮ್ಯೂಸಿಕ್‌, ಕ್ಯಾಮರಾ ಕೆಲಸದಿಂದ ಕನ್ನಡ ಚಿತ್ರರಂಗಕ್ಕೆ ಒಂದು ಮೈಲಿಗಲ್ಲಾಯಿತು.</p><img><p>ಪೂರಿ ಜಗನ್ನಾಥ್‌ರವರ ಪೋಕಿರಿ ಸಿನಿಮಾವು ಮಹೇಶ್ ಬಾಬು ಕರಿಯರ್‌ಗೆ ಒಂದು ಟರ್ನಿಂಗ್ ಪಾಯಿಂಟ್ ಆಗಿತ್ತು. ಈ ಆಕ್ಷನ್ ಸಿನಿಮಾವು ತಮಿಳು (ಪೊಕ್ಕಿರಿ), ಹಿಂದಿ, ಕನ್ನಡ (ಪೊರಕಿ), ಬಾಂಗ್ಲಾದೇಶದಲ್ಲಿ ರಿಮೇಕ್ ಆಗಿ ದೊಡ್ಡ ಯಶಸ್ಸನ್ನು ಕಂಡಿದೆ. ಈ ಸಿನಿಮಾವು ತೆಲುಗು ಚಿತ್ರರಂಗದಲ್ಲಿ ಆಕ್ಷನ್ ಜಾನರ್‌ಗೆ ಹೊಸ ಆಯಾಮ ನೀಡಿತು.</p><img><p>ಬಾಲಾ ನಿರ್ದೇಶನದ ಸೇತು ವಿಕ್ರಮ್‌ ಸಿನಿಮಾವಿದು. ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು, ಆ ನಂತರದಲ್ಲಿ ಹಿಂದಿ (ತೇರೆ ನಾಮ್), ತೆಲುಗು, ಕನ್ನಡ, ಒಡಿಯಾ, ಬಂಗಾಳಿಯಲ್ಲಿ ರಿಮೇಕ್ ಆಗಿತು. ತಮಿಳು ಚಿತ್ರರಂಗದಲ್ಲಿ ಭಾವನಾತ್ಮಕ ಸಿಮಿಮಾಗೆ ಹೊಸ ಮಾನದಂಡವನ್ನು ಸೃಷ್ಟಿ ಮಾಡಿತು.</p><img><p>ಮಣಿರತ್ನಂ ಅವರ ಬಾಂಬೆ 1990ರ ದಶಕದಲ್ಲಿ ಮುಂಬೈನಲ್ಲಿ ನಡೆದ ಗಲಭೆಗಳನ್ನು ಹೇಳುವ ಭಾವನಾತ್ಮಕ ಕಥಾಹಂದರ. ಹಿಂದೂ-ಮುಸ್ಲಿಂ ದಂಪತಿಯ ಲವ್‌ಸ್ಟೋರಿ ಮೂಲಕ ಸಾಮಾಜಿಕ ಸಂದೇಶವನ್ನು ನೀಡಿದೆ.</p><img><p>ಮಣಿಚಿತ್ರತಾಳ್ ಒಂದು ಮಾನಸಿಕ ಥ್ರಿಲ್ಲರ್ ಚಿತ್ರವಾಗಿದ್ದು, ವಿಭಿನ್ನ ವ್ಯಕ್ತಿತ್ವದ ಗೊಂದಲದ ಬಗ್ಗೆ ಇದೆ. ಮಾನಸಿಕ ಗೊಂದಲದ ಬಗ್ಗೆ ಭಾರತದಲ್ಲಿ ಮೊದಲು ಪರಿಚಯಿಸಿದ ಸಿನಿಮಾವಿದು. ಈ ಸಿನಿಮಾದಲ್ಲಿ ಮೋಹನ್‌ಲಾಲ್, ಶೋಭನಾ, ಸುರೇಶ್ ಗೋಪಿ ನಟಿಸಿದ್ದರು. ತಮಿಳು, ಕನ್ನಡ, ಬಂಗಾಳಿ, ಹಿಂದಿಯಲ್ಲಿ ಕೂಡ ರಿಮೇಕ್ ಆಗಿ ಕಮರ್ಷಿಯಲ್‌ ಸಕ್ಸಸ್‌ ಕಂಡಿದೆ.</p><img><p>ರಾಮ್ ರಾಮ್ ಸೀತಾರಾಮ್ (ರಾಮ್ಜಿ ರಾವ್ ಸ್ಪೀಕಿಂಗ್) ಸಿದ್ದಿಕ್-ಲಾಲ್ ಜೋಡಿಯ ಒಂದು ಐತಿಹಾಸಿಕ ಕಾಮಿಡಿ ಸಿನಿಮಾ. ಈ ಸಿನಿಮಾವು ಹಿಂದಿಯ ಹೇರಾ ಫೇರಾ ಸೇರಿದಂತೆ ತಮಿಳು, ತೆಲುಗು, ಕನ್ನಡ, ಒಡಿಯಾದಲ್ಲಿ ರಿಮೇಕ್ ಆಗಿತ್ತು. ಈ ಮೂಲಕ ದೊಡ್ಡ ಯಶಸ್ಸನ್ನು ಕಂಡಿದೆ ಈ ಸಿನಿಮಾವು ಮಲಯಾಳಂ ಕಾಮಿಡಿ ಜಾನರ್‌ಗೆ ಹೊಸ ದಾರಿಯನ್ನು ಮಾಡಿಕೊಟ್ಟಿದೆ.</p><img><p>ಖ್ಯಾತ ಲೇಖಕ ಗಿರೀಶ್ ಕಾಸರವಳ್ಳಿಯವರ ಘಟಶ್ರಾದ್ಧ ಎಂಬ ಸಿನಿಮಾವು ಕನ್ನಡ ಚಿತ್ರರಂಗದಲ್ಲಿ ನವ್ಯ ಚಳವಳಿಯ ಆರಂಭವನ್ನು ಗುರುತಿಸಿದೆ. ಬ್ರಾಹ್ಮಣ ಸಮಾಜದಲ್ಲಿ ಬಹಿಷ್ಕಾರದ ವಿಷಯವನ್ನು ಈ ಸಿನಿಮಾ ಹೇಳಿತ್ತು. ಈ ಸಿನಿಮಾವು ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು, ಕನ್ನಡ ಚಿತ್ರರಂಗಕ್ಕೆ ಜಾಗತಿಕ ಮನ್ನಣೆಯನ್ನು ತಂದು ಕೊಟ್ಟಿದೆ.</p><img><p>ಯು ಆರ್ ಅನಂತಮೂರ್ತಿಯವರ ಕಾದಂಬರಿಯನ್ನು ಆಧರಿಸಿದ ಸಂಸ್ಕಾರ ಸಿನಿಮಾಕ್ಕೆ ಪಟ್ಟಾಭಿರಾಮ ರೆಡ್ಡಿಯವರ ನಿರ್ದೇಶನವಿದೆ. ಈ ಚಿತ್ರವು ಕನ್ನಡ ಚಿತ್ರರಂಗದಲ್ಲಿ ಹೊಸ ತರಂಗವನ್ನು ಸೃಷ್ಟಿಸಿತು. ಬ್ರಾಹ್ಮಣ ಸಮಾಜದ ಆಚಾರ-ವಿಚಾರಗಳನ್ನು ಪ್ರಶ್ನಿಸಿದ ಈ ಸಿನಿಮಾವು ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು, ಕನ್ನಡದಲ್ಲಿ ಕಲಾತ್ಮಕ ಚಿತ್ರಗಳಿಗೆ ದಾರಿಮಾಡಿಕೊಟ್ಟಿತು.</p><img><p>ಎಂ ಜಿ ರಾಮಚಂದ್ರನ್ ನಟಿಸಿದ ಈ ಸಿನಿಮಾವು ಒಂದು ಸಾಮಾಜಿಕ ಸಂದೇಶದೊಂದಿಗೆ ವಾಣಿಜ್ಯ ಯಶಸ್ಸನ್ನು ಸಾಧಿಸಿದೆ. ಒಡಹುಟ್ಟಿದವರ ನಡುವಿನ ಬಾಂಧವ್ಯ ಹಾಗೂ ಸಾಮಾಜಿಕ ಶೋಷಣೆಯ ವಿರುದ್ಧದ ಹೋರಾಟವ ಈ ಸಿನಿಮಾದಲ್ಲಿದೆ. ಈ ಸಿನಿಮಾವು ಆಮೇಲೆ ರಾಮ್ ಔರ್ ಶ್ಯಾಮ್ ಎಂಬ ಹಿಂದಿ ರಿಮೇಕ್‌ ಆಗಿದೆ. ಈ ಚಿತ್ರದಲ್ಲಿ ದಿಲೀಪ್ ಕುಮಾರ್ ನಟಿಸಿದ್ದರು. ಇದು ತಮಿಳು ಚಿತ್ರರಂಗದ ಸಾಮಾಜಿಕ ಸಿನಿಮಾಗಳ ಒಂದು ಉದಾಹರಣೆಯಾಯಿತು.</p><img><p>ಕೆವಿ ರೆಡ್ಡಿ ನಿರ್ದೇಶನದ ‘ಮಾಯಾಬಜಾರ್’ ತೆಲುಗು ಇಂಡಸ್ಟ್ರಿಯ ಐತಿಹಾಸಿಕ ಸಿನಿಮಾವಾಗಿದೆ. ಮಹಾಭಾರತದ ಕಥೆಯ ಒಂದು ಭಾಗವನ್ನು ಆಧರಿಸಿದ ಈ ಸಿನಿಮಾವು ತನ್ನ ವಿಶಿಷ್ಟ ವಿಷುಯಲ್ ಎಫೆಕ್ಟ್ಸ್, ಸಂಗೀತ, ಎನ್.ಟಿ. ರಾಮರಾವ್, ಎಸ್.ವಿ. ರಂಗರಾವ್ ಅವರ ನಟನೆಯಿಂದ ಗಮನ ಸೆಳೆದಿದೆ. ಈ ಸಿನಿಮಾವು ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಫ್ಯಾಂಟಸಿ ಜಾನರ್‌ಗೆ ಒಂದು ಮಾನದಂಡವನ್ನು ಹಾಕಿಕೊಟ್ಟಿತು.</p>



Source link

Leave a Reply

Your email address will not be published. Required fields are marked *