Headlines

ಮೈಸೂರು ಕಾಡಂಚಿನಲ್ಲಿ 20 ಹುಲಿಗಳ ಓಡಾಟ: ಸಾರ್ವಜನಿಕರಿಗೆ ಡಿಸಿಎಫ್ ಕೊಟ್ಟ ಸಲಹೆ ಸೂಚನೆ ಏನು ನೋಡಿ

ಮೈಸೂರು ಕಾಡಂಚಿನಲ್ಲಿ 20 ಹುಲಿಗಳ ಓಡಾಟ: ಸಾರ್ವಜನಿಕರಿಗೆ ಡಿಸಿಎಫ್ ಕೊಟ್ಟ ಸಲಹೆ ಸೂಚನೆ ಏನು ನೋಡಿ


ಮೈಸೂರು, ನವೆಂಬರ್ 15: ಮೈಸೂರು ಜಿಲ್ಲೆಯಲ್ಲಿ ಮಾನವ ಮತ್ತು ಕಾಡುಪ್ರಾಣಿಗಳ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇದುವರೆಗೆ 30ಕ್ಕೂ ಹೆಚ್ಚು ಜಾನುವಾರುಗಳು ಹುಲಿ ದಾಳಿಗೆ ಬಲಿಯಾಗುತ್ತವೆ. ಮೂವರು ಮನುಷ್ಯರು ಸಾವನ್ನಪ್ಪಿದ್ದಾರೆ. ಈ ಪರಿಸ್ಥಿತಿಯ ಕುರಿತು ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಎಸ್‌ಎಫ್) ಪರಮೇಶ್ ಅವರು ಮಾತನಾಡಿ, ಈವರೆಗೆ ಐದು ಹುಲಿಗಳನ್ನು ಹಿಡಿಯಲಾಗಿದೆ. ಹುಲಿಗಳು ಕಾಡಿನಿಂದ ಹೊರಬರಲು ಮಾನವ ಹಸ್ತಕ್ಷೇಪ, ಚಿಕಿತ್ಸೆಯ ಅವಧಿ, ಗಾಯಗಳು ಅಥವಾ ಪ್ರಾದೇಶಿಕ ಕಲಹಗಳೇ ಪ್ರಮುಖ ಕಾರಣ ಎಂದು ಡಿಸಿಎಫ್ ವಿವರಿಸಿದರು. ಹುಲಿಗಳನ್ನು ನರಹಂತಕ ಎಂದು ಕರೆಯುವುದು ತಪ್ಪು. ಯಾವುದೇ ಪ್ರಾಣಿ ಉದ್ದೇಶಪೂರ್ವಕವಾಗಿ ನರಭಕ್ಷಕವಲ್ಲ. ಇದನ್ನು ಒಪ್ಪಿಕೊಳ್ಳಲಾಗಿಲ್ಲ ಎಂದು ಹೇಳಿದರು. ಅರಣ್ಯ ಇಲಾಖೆಯು ಎನ್‌ಟಿಸಿಎ ಮಾರ್ಗಸೂಚಿಗಳ ಅಡಿಯಲ್ಲಿ ಕ್ಯಾಮೆರಾ ಟ್ರ್ಯಾಪ್‌ಗಳು, ಸಾಕಾನೆಗಳು ಮತ್ತು ಥರ್ಮಲ್ ಡ್ರೋನ್‌ಗಳಂತಹ ತಂತ್ರಜ್ಞಾನಗಳನ್ನು ಬಳಸಿ ಕಾರ್ಯಾಚರಣೆ ನಡೆಸುತ್ತಿದೆ. ಸಾರ್ವಜನಿಕ ಸಹಕಾರ ಮತ್ತು ಜಾಗೃತಿ ಕಾರ್ಯಕ್ರಮಗಳ ಮೂಲಕ ಸಂಘರ್ಷವನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಡಿಸಿಎಫ್ ಪರಮೇಶ್ ಅವರು ನಡೆಸಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *