Headlines

ಇರಾನ್-ಇಸ್ರೇಲ್ ಸಂಘರ್ಷ: ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ, ಬರಬೇಕಿದ್ದ 21 ವಿಮಾನಗಳು ರದ್ದು

ಇರಾನ್-ಇಸ್ರೇಲ್ ಸಂಘರ್ಷ: ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ, ಬರಬೇಕಿದ್ದ 21 ವಿಮಾನಗಳು ರದ್ದು


ಇರಾನ್-ಇಸ್ರೇಲ್ ಸಂಘರ್ಷ: ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ, ಬರಬೇಕಿದ್ದ 21 ವಿಮಾನಗಳು ರದ್ದು

ಬೆಂಗಳೂರು, ಮಾರ್ಚ್ 9: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೀವ್ರಗೊಂಡಿರುವ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ಪರಿಣಾಮ ಬೀರುತ್ತಿದೆ. ಇದರ ಪರಿಣಾಮವಾಗಿ ಬೆಂಗಳೂರಿನ (ಬೆಂಗಳೂರು) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ) ಮಾರ್ಚ್ 9 ರಂದೂ ಸಹ ಹಲವು ವಿಮಾನಗಳ ಹಾರಾಟ ರದ್ದುಗೊಂಡಿದೆ. ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಮತ್ತು ಅಲ್ಲಿಂದ ಆಗಮಿಸಬೇಕಿದ್ದ ಒಟ್ಟು 21 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ವಾಯುಪ್ರದೇಶದ ಅನಿಶ್ಚಿತತೆಯ ವಿಮಾನಯಾನ ಕಂಪನಿಗಳು ಈ ನಿರ್ಧಾರ ಕೈಗೊಂಡಿವೆ.

ಅಧಿಕೃತ ಮಾಹಿತಿ ಪ್ರಕಾರ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿವಿಧ ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ 11 ವಿಮಾನಗಳ ಹಾರಾಟ ರದ್ದಾಗಿದೆ. ಅದೇ ರೀತಿ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 10 ವಿಮಾನಗಳು ರದ್ದುಗೊಂಡಿವೆ.

ಒಟ್ಟು 21 ವಿಮಾನಗಳ ಹಾರಾಟದ ಕಾರಣ, ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿದೆ. ವಿಮಾನ ರದ್ದಾದ ಸಂಬಂಧಿತ ಏರ್‌ಲೈನ್ ಸಂಸ್ಥೆಗಳು ಪ್ರಯಾಣಿಕರಿಗೆ ಮುಂಚಿತವಾಗಿ ಮಾಹಿತಿ ನೀಡುತ್ತಿದೆ.

ಇರಾನ್–ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಇಲ್ಲದಿರುವುದರಿಂದ ಮುಂದಿನ ದಿನಗಳಲ್ಲಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮಧ್ಯಪ್ರಾಚ್ಯ ದೇಶಗಳತ್ತ ಹೋಗುವವರು ತಮ್ಮ ವಿಮಾನಗಳನ್ನು ಮುಂಚಿತವಾಗಿ ಪರಿಶೀಲಿಸುವಂತೆ ಅಧಿಕಾರಿಗಳು ಸಲಹೆ ನೀಡುತ್ತಾರೆ.

ಹೆಚ್ಚುತ್ತಿರುವ ಇರಾನ್-ಇಸ್ರೇಲ್ ಸಂಘರ್ಷ ಮತ್ತು ಪಶ್ಚಿಮ ಏಷ್ಯಾದಲ್ಲಿ ವಾಯು ಮಾರ್ಗಗಳು ಮುಚ್ಚುವಿಕೆಯಿಂದಾಗಿ ಕಳೆದ ವಾರದಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ತೀವ್ರವಾಗಿ ಅಸ್ತವ್ಯಸ್ತಗೊಂಡಿವೆ. ಮಾರ್ಚ್ 1 ರಿಂದ ಮಾರ್ಚ್ 9 ರ ನಡುವೆ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ 200 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ವಾರದ ಆರಂಭದಲ್ಲಿ ಅತ್ಯಂತ ಗಮನಾರ್ಹವಾದವುಗಳು ಸಂಭವಿಸಿದವು. ಮಾರ್ಚ್ 2 ರಂದು 72 ವಿಮಾನ ಹಾರಾಟ ಸ್ಥಗಿತ ಮತ್ತು ಮಾರ್ಚ್ 4 ರಂದು 34 ರಂದು ವಿಮಾನ ಹಾರಾಟ ಸ್ಥಗಿತಗೊಂಡಿದೆ.

ಇದನ್ನೂ: ದುಬೈನಲ್ಲಿ ಸಿಲುಕಿದ್ದ ಮತ್ತಷ್ಟು ಕನ್ನಡಿಗರು ತಾಯ್ನಾಡಿಗೆ ವಾಪಸ್: ಬೆಂಗಳೂರಿಗೆ ಬಂದಿಳಿದ 288 ಪ್ರಯಾಣಿಕರು

ವಿಮಾನಯಾನ ಸಂಸ್ಥೆಗಳು ಸೀಮಿತವಾಗಿ ಕಾರ್ಯಾಚರಣೆಗಳನ್ನು ಪುನರಾರಂಭಿಸಲು ಪ್ರಯತ್ನಿಸಿದರೂ, ಮಾರ್ಚ್ 9 ರಂದು ಮತ್ತೆ 21 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇದು ಸಾವಿರಾರು ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *