Chikkaballapur: ಅಕ್ರಮ ಸಂಬಂಧಕ್ಕಾಗಿ 38ರ ಆಂಟಿ ಕಾಟ: ಕೆರೆ ಬಳಿ ಪ್ರಾಣ ಕಳೆದುಕೊಂಡು 19ರ ಯುವಕ

Chikkaballapur: ಅಕ್ರಮ ಸಂಬಂಧಕ್ಕಾಗಿ 38ರ ಆಂಟಿ ಕಾಟ: ಕೆರೆ ಬಳಿ ಪ್ರಾಣ ಕಳೆದುಕೊಂಡು 19ರ ಯುವಕ



Chikkaballapur: ಅಕ್ರಮ ಸಂಬಂಧಕ್ಕಾಗಿ 38ರ ಆಂಟಿ ಕಾಟ: ಕೆರೆ ಬಳಿ ಪ್ರಾಣ ಕಳೆದುಕೊಂಡು 19ರ ಯುವಕ
ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ 19 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಮಗನ ಸಾವಿಗೆ 38 ವರ್ಷದ ಮಹಿಳೆಯ ಅಕ್ರಮ ಸಂಬಂಧದ ಒತ್ತಡವೇ ಕಾರಣ ಎಂದು ಯುವಕನ ಪೋಷಕರು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.<img><p>38 ವರ್ಷದ ಇಬ್ಬರು ಮಕ್ಕಳ ತಾಯಿಯ ಕಾಟಕ್ಕೆ ನೊಂದ 19 ವರ್ಷದ ಯುವಕ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.</p><img><p>ನಿಖಿಲ್ ಕುಮಾರ್ ಆಂಟಿ ಕಾಟಕ್ಕೆ ನೊಂದು ಆತ್ಮ*ಹತ್ಯೆಗೆ ಶರಣಾದ ಯುವಕ. ತಮ್ಮ ಮಗನ ಸಾವಿಗೆ ಶಾರದಾ ಎಂಬ ಮಹಿಳೆಯೇ ಕಾರಣ ಎಂದು ನಿಖಿಲ್ ಕುಮಾರ್ ಪೋಷಕರು ಆರೋಪಿಸಿದ್ದಾರೆ. ಪೋಷಕರ ಕಣ್ಣು ತಪ್ಪಿಸಿ ನಿಖಿಲ್ ಜೊತೆ ಶಾರದಾ ಊರಿನಿಂದ ಹೊರಗಡೆ ಕರೆದುಕೊಂಡು ಹೋಗುತ್ತಿದ್ದಳು ಎಂಬ ಗಂಭೀರ ಆರೋಪ ಕೇಳಿ ಬಂದಿದೆ.</p><img><p>ಗಂಡನಿಂದ ವಿಚ್ಚೇದನ ಪಡೆದುಕೊಂಡಿದ್ದ ಶಾರದಾಗೆ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಳು. ಹಲವು ವರ್ಷಗಳಿಂದ ಗಂಡನಿಂದ ದೂರವಾಗಿದ್ದ ಶಾರದಾ, ತನಗಿಂತ 19 ವರ್ಷ ಚಿಕ್ಕವನಾಗಿರುವ ನಿಖಿಲ್ ಕುಮಾರ್ ಮೇಲೆ ಕಣ್ಣಾಕಿದ್ದಳು. ನಿಖಿಲ್ ಕುಮಾರ್ ಜೊತೆ ಶಾರದಾ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಪೋಷಕರು ಆರೋಪಿಸಿದ್ದಾರೆ.</p><img><p>ನಿಖಿಲ್ ಕುಮಾರ್ ಮೇಲೆ ಅಕ್ರಮ ಸಂಬಂಧಕ್ಕಾಗಿ ಶಾರದಾ ಒತ್ತಡ ಹಾಕುತ್ತಿದ್ದಳು. ಪೋಷಕ ವಿರೋಧದ ನಡುವೆಯೂ ಇಬ್ಬರ ಸಂಬಂಧ ಮುಂದುವರಿದಿತ್ತು. ಇದೀಗ ನಿಖಿಲ್ ಕುಮಾರ್ ಶವ ಚಿಂತಾಮಣಿಯ ಕಾಚಹಳ್ಳಿ ಕೆರೆ ಬಳಿ ಪತ್ತೆಯಾಗಿದೆ. ನೇಣು ಬಿಗಿದುಕೊಂಡು ನಿಖಿಲ್ ಕುಮಾರ್ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ.</p><p><strong>ಇದನ್ನೂ ಓದಿ: </strong><strong>ಎಲ್ಲರೂ ದೀಪಾವಳಿ ಆಚರಿಸ್ತಿದ್ರೆ, ರಾತ್ರಿ 35ರ ಆಂಟಿ ಜೊತೆ ಕಾಡಿನೊಳಗೆ ಹೋದ 19ರ ಯುವಕ</strong></p><img><p>ನಿಖಿಲ್ ಕುಮಾರ್ ಸಾವಿನ ಸಂಬಂಧ ಪೋಷಕರು ಶಾರದಾ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಿಖಿಲ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.</p><p><strong>ಇದನ್ನೂ ಓದಿ: </strong><strong>ಬೆಂಗಳೂರಿನಲ್ಲಿ ಪುತ್ತೂರು ಯುವಕನ ಸಾವಿನ ಪ್ರಕರಣಕ್ಕೆ ಸ್ಪೋಟಕ ತಿರುವು; ಪೋಸ್ಟ್‌ ಮಾರ್ಟ್ಂ ವರದಿಯಲ್ಲೇನಿದೆ?</strong></p>



Source link

Leave a Reply

Your email address will not be published. Required fields are marked *