ಕನ್ನಡ ಕಿರುತೆರೆ ಲೋಕದಲ್ಲಿ ಹೆಸರು ಮಾಡಿ, ತಮಿಳಿನ ‘ಗೌರಿ’ (ಗೌರಿ ಸೀರಿಯಲ್) ಧಾರಾವಾಹಿಯಲ್ಲಿ ದ್ವಿಪಾತ್ರ ಮಾಡುತ್ತಿರುವ ನಟಿ ನಂದಿನಿ ಸಿಎಂ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿಸೆಂಬರ್ 28 ರಾತ್ರಿ ಈ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ನಂದಿನಿ ಸಿಎಂ ಅವರು ಆತ್ಮಹತ್ಯೆ ಮಾಡಿಕೊಂಡರು. ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’, ‘ಅಣ್ಣ-ತಂಗಿ’ ಮುಂತಾದ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ನಂದಿನಿ ಸಿಎಂ (Nandini CM) ಬಗ್ಗೆ ಅವರ ಸ್ನೇಹಿತೆ ತನುಜಾ ಪ್ರತಿಕ್ರಿಯೆ.
‘ನಿಜವಾದ ಕಾರಣ ಏನು ಎಂಬುದು ಗೊತ್ತಿಲ್ಲ. ಅವರ ತಂದೆ ತೀರಿಸಿಕೊಂಡರು. ತಂದೆಯ ಸರ್ಕಾರಿ ಕೆಲಸ ಅವಳಿಗೆ ಬಂದಿತ್ತು. ಆದರೆ ಆ ಕೆಲಸ ಮಾಡಲು ನಂದಿನಿಗೆ ಇಷ್ಟ ಇರಲಿಲ್ಲ. 10 ವರ್ಷದಿಂದ ಕಷ್ಟಪಟ್ಟು ನಟನೆಯಲ್ಲಿ ಈ ಸ್ಥಾನಕ್ಕೆ ಬಂದಿದ್ದಳು. ಯಾವುದೇ ಸರ್ಕಾರಿ ಕೆಲಸ ಬೇಡ ಅಂತ ಹೇಳಲು. ಸರ್ಕಾರಿ ಕೆಲಸಕ್ಕೆ ಸೇರು ಕುಟುಂಬದವರು ಹೇಳಿದ್ದರು. ಚಿತ್ರರಂಗ ಬೇಡ ಅಂತ ಮನೆಯವರು ಹೇಳಿದ್ದರು. ಆ ಬಗ್ಗೆ ಮಾತುಕಥೆ ನಡೆಯುತ್ತಿತ್ತು. ಯಾವುದೇ ಖಿನ್ನತೆಯಲ್ಲಿ ಇದ್ದಳು’ ಎಂದು ತನುಜಾ ಹೇಳಿದ್ದಾರೆ.
‘ಯಾಕೆ ಈ ಮಾಡಿಕೊಂಡಳು ಎಂಬುದು ಗೊತ್ತಿಲ್ಲ. ನಾನು ಅವಳ ಜೊತೆ ಮಾತನಾಡಿ 3 ದಿನ ಆಯಿತು. ನಾನು ಮಡಿಕೇರಿಯಲ್ಲಿ ಇದ್ದಾಗ ಸಾವಿನ ಸುದ್ದಿ ಬಂತು. ನಾನು ಹೊರಟು ಬಂದೆ. ತಾಯಿ ಹಾಗೂ ಕುಟುಂಬದ ಸದಸ್ಯರು ಬಂದು ಮೃತದೇಹವನ್ನು ಹುಟ್ಟೂರಿಗೆ ತೆಗೆದುಕೊಂಡರು. ನನಗೆ ಕಳೆದ 5 ವರ್ಷದಿಂದ ಗೊತ್ತಿದ್ದ ಹುಡುಗಿ. ಯಾಕೆ ಈ ನಿರ್ಧಾರ ತೆಗೆದುಕೊಂಡಳೋ ಗೊತ್ತಿಲ್ಲ. ಕೊನೆ ಬಾರಿ ನನಗೆ ಅವಳು ಕರೆ ಮಾಡಬಹುದಿತ್ತು’ ಎಂದು ತನುಜಾ.
‘ಇನ್ನೂ ಒಳ್ಳೆಯ ಪ್ರಾಜೆಕ್ಟ್ ಮಾಡಬೇಕು ಎಂಬ ಗುರಿ ಅವಳಿಗೆ ಇತ್ತು. ಆತ್ಮಹತ್ಯೆಯೇ ಎಲ್ಲದಕ್ಕೂ ಪರಿಹಾರ ಅಲ್ಲ. ಅವಳು ಇರಬಹುದಿತ್ತು. ಈಗ ಏನು ಸಾಧಿಸಿದಂತೆ ಆಯಿತು? ಏನೂ ಸಾಧನೆ ಮಾಡಿದಂತೆ ಆಗಲೇ ಇಲ್ಲ. ಬದುಕುವ ಮನಸ್ಸು ಮಾಡಬಹುದಿತ್ತು’ ಎಂದು ನಂದಿನಿ ಸ್ನೇಹಿತೆ ತನುಜಾ ಅವರು ತೋಡಿದ್ದಾರೆ.
ಇದನ್ನೂ ಓದಿ: ‘ಗೌರಿ’ ಧಾರಾವಾಹಿ ನಟಿ ನಂದಿನಿ ನಿಧನ: ಬೆಂಗಳೂರಿನಲ್ಲಿ ದುರಂತ ಅಂತ್ಯ
ಡಿಸೆಂಬರ್ 29 ರಂದು ಬೆಳಗಿನ ಜಾವ ಆರ್ ಆರ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಯಿತು. ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಕ್ಕಾಗಿ. ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರಾದ ನಂದಿನಿ ವೈಯುಕ್ತಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಕೇಳಿಬಂದಿದೆ. ಅವರಿಗೆ ಆರೋಗ್ಯ ಸಮಸ್ಯೆ ಇತ್ತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.