ಝೀರೋ ಟ್ರಾಫಿಕ್​​ನಲ್ಲಿ ಕರೆತಂದರೂ ಬದುಕಲಿಲ್ಲ ಜೀವ: ಚಿಕಿತ್ಸೆ ಫಲಿಸದೆ ಕಂದಮ್ಮ ಕೊನೆಯುಸಿರು

ಝೀರೋ ಟ್ರಾಫಿಕ್​​ನಲ್ಲಿ ಕರೆತಂದರೂ ಬದುಕಲಿಲ್ಲ ಜೀವ: ಚಿಕಿತ್ಸೆ ಫಲಿಸದೆ ಕಂದಮ್ಮ ಕೊನೆಯುಸಿರು


ಕೊಪ್ಪಳ, ಡಿಸೆಂಬರ್ 30: ಹೆರಿಗೆ ವೇಳೆ ನವಜಾತ ಶಿಶುವಿನ ಕರುಳು ಹೊರಗೆ ಬಂದಿದ್ದ ಕೇಸ್ ಸಂಬಂಧ ವೈದ್ಯರ ಪ್ರಯತ್ನ ಕೊನೆಗೂ ಫಲಪ್ರದವಾಗಿಲ್ಲ. ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ನವಜಾತ ಶಿಶುವಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿಶುವನ್ನು ಕೊಪ್ಪಳದಿಂದ ಹುಬ್ಬಳ್ಳಿಗೆ ಕರೆತರಲಾಯಿತು, ಆದರೆ ನಿನ್ನೆ ರಾತ್ರಿ ಮಗು ಪ್ರಾಣ ಬಿಟ್ಟಿದೆ.

ಕುಕನೂರ ತಾಲೂಕಿನ ಗುತ್ತೂರ ನಿವಾಸಿಗಳಾದ ಮಲ್ಲಪ್ಪ, ವಿಜಯಲಕ್ಷ್ಮೀ ದಂಪತಿಗೆ ಶನಿವಾರ ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗು ಜನಿಸಿತ್ತು. ಆದರೆ ದುರ್ದೈವ ಎಂಬಂತೆ ಹುಟ್ಟುವ ವೇಳೆಯೇ ಮಗುವಿನ ಕರುಳೆಲ್ಲ ಹೊರಗೆ ಬಂದಿದ್ದ ಕಾರಣ ತುರ್ತಾಗಿ ಆಪರೇಷನ್ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಕೊಪ್ಪಳದಿಂದ ತಾಯಿ ಮತ್ತು 5 ಆಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿಗೆ ಝೀರೋ ಟ್ರಾಫಿಕ್ ಅನ್ನು ರವಾನಿಸಲಾಗಿದೆ.

ಇದನ್ನೂ ಓದಿ: ಪ್ರತ್ಯೇಕ ಅಪಘಾತ; ತಮ್ಮದಲ್ಲದ ತಪ್ಪಿಗೆ ಮಗು ಸೇರಿ ನಾಲ್ವರು ದಾರುಣವಾಗಿ ಸಾವು

ನವಜಾತ ಶಿಶುವಿಗೆ ಕಿಡ್ನಿ ಸಮಸ್ಯೆ ಕೂಡ ಇರುವ ಬಗ್ಗೆ ವೈದ್ಯರು ತಿಳಿಸಿದ ಕಾರಣ ಹತ್ತು ಗಂಟೆಯ ಹಿಂದೆ ಜನಿಸಿದ ಮಗುವನ್ನ ಆಂಬ್ಯುಲೆನ್ಸ್ ಚಾಲಕ ಪ್ರಕಾಶ್ ಝೀರೋ ಟ್ರಾಫಿಕ್ ನಲ್ಲಿ ಹುಬ್ಬಳ್ಳಿಗೆ ಕರೆದುಕೊಂಡು ಬಂದಿದ್ದರು. ನವಜಾತ ಶಿಶು ಪ್ರಾಣ ಉಳಿಸಲು ಕೂಡ ಸಾಥ್ ನೀಡಿದ್ದರು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಶಿಶುವನ್ನು ಉಳಿಸಲು ಕಿಮ್ಸ್ ವೈದ್ಯರು ಸಾಕಷ್ಟು ಪ್ರಯತ್ನ ನಡೆಸಿದ ಮಗು ಅಸುನೀಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 3:37 pm, ಮಂಗಳವಾರ, 30 ಡಿಸೆಂಬರ್ 25



Source link

Leave a Reply

Your email address will not be published. Required fields are marked *