‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (ಬಿಬಿಕೆ 12) ಮೂರು ತಿಂಗಳು ಇದ್ದ ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿ ಹೊರ ಬಂದರು. ಅವರು ಈಗ ನಮಗೆ ತೆರಳಿದ್ದಾರೆ. ಅಲ್ಲಿಯೂ ಮಾಧ್ಯಮಗಳಿಗೆ ಸಂದರ್ಶನ ನೀಡಲಾಗುತ್ತಿದೆ. ಈಗ ಅವರಿಗೆ ತಪ್ಪಿನ ಅರಿವಾಗಿದೆಯೇ ಎಂಬ ಪ್ರಶ್ನೆ ಮೂಡಿದೆ. ಏಕೆಂದರೆ ಮೊದಲು ಯಾರು ಗೆದ್ದರೂ ಒಪ್ಪಿಕೊಳ್ಳುವುದಿಲ್ಲ ಎನ್ನುತ್ತಿದ್ದ ಅವರು ಈಗ, ‘ಗಿಲ್ಲಿ ಕಪ್ ಗೆಲ್ಲಬಹುದು’ ಎಂದು ಹೇಳಿದ್ದಾರೆ. ಅವರ ಹೇಳಿಕೆ ಅಚ್ಚರಿ ಮೂಡಿಸಿದೆ.
ಈ ಮೊದಲು ಟಿವಿ9 ಕನ್ನಡದ ಜೊತೆ ಮಾತನಾಡಿದ್ದ ಮಾಳು ಅವರು, ‘ಈ ಸೀಸನ್ ಅಲ್ಲಿ ಯಾರೇ ಗೆದ್ದರೂ ಅದನ್ನು ಒಪ್ಪಿಕೊಳ್ಳೋದಿಲ್ಲ’ ಎಂದು ಹೇಳಿದ್ದರು. ತಾವೇ ಕಪ್ ಗೆಲ್ಲುತ್ತೇನೆ ಎಂಬ ನಂಬಿಕೆಯಲ್ಲಿ ಇದ್ದ ಅವರು, ‘ಮನೆಯಲ್ಲಿ ಯಾರಿಗೂ ಕಪ್ ಗೆಲ್ಲಲು ಅರ್ಹತೆ ಇಲ್ಲ’ ಎಂದು ನೇರವಾಗಿ ಹೇಳಿದ್ದರು. ಅವರ ಮಾತು ಚರ್ಚೆಗೆ ಕಾರಣ.
ಪ್ರತಿ ಸಂದರ್ಶನದಲ್ಲಿ ಮಾತನಾಡುವಾಗ, ‘ಕಪ್ ಯಾರು ಗೆಲ್ತಾರೆ’ ಎಂದು ಕೇಳಿದಾಗ ಅವರು ಇದಕ್ಕೆ ಸೂಕ್ತ ಉತ್ತರ ನೀಡಲಿಲ್ಲ. ‘ಯಾರು ಗೆಲ್ತಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಏನು ಬೇಕಾದರೂ ಆಗಬಹುದು’ ಎಂದು ಉತ್ತರ ನೀಡಿದ್ದರು. ಈಗ ಮಾಳು ಅವರು ಬದಲಾಗಿದ್ದಾರೆ. ಗಿಲ್ಲಿ ಕಪ್ ಗೆಲ್ಲುವ ಸಾಧ್ಯತೆ ಇದೆ.
ಮಾಧ್ಯಮ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಳು, ‘ನಮ್ಮ ಇಬ್ಬರ ಮಧ್ಯೆ ಹೋಲಿಸಲು ಸಾಧ್ಯವಿಲ್ಲ. ಇಬ್ಬರ ಹಾದಿ, ವ್ಯಕ್ತಿತ್ವ ಬೇರೆ. ಇಬ್ಬರ ನಡುವೆ ಹೋಲಿಕೆ ಸಾಧ್ಯವಿಲ್ಲ. ಗಿಲ್ಲಿ ಕೆಟ್ಟವನಲ್ಲ. ಎಲ್ಲರನ್ನೂ ನಗಿಸುತ್ತಾರೆ. ಟಾಸ್ಕ್ ಚೆನ್ನಾಗಿ ಆಡಲ್ಲ ಅನ್ನೋದಷ್ಟೇ ನನಗೆ ಅವರಲ್ಲಿ ಕಂಡ ಕೊರತೆ. ಅವರು ತಪ್ಪು ತಿದ್ದುಕೊಂಡರೆ ಫಿನಾಲೆ ತಲುಪಿ ಕಪ್ ಗೆಲ್ಲಬಹುದು’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೀ ಕೊಡೋದ್ರಲ್ಲಿ ಮಾಸ್ಟರ್; ಗಿಲ್ಲಿ ಮಾತಿಗೆ ಉರಿದುರಿದು ಬಿದ್ದ ಧ್ರುವಂತ್-ಅಶ್ವಿನಿ
ಇದಕ್ಕೆ ನಾನಾ ರೀತಿಯ ಕಮೆಂಟ್ ಬಂದಿದೆ. ‘ಗಿಲ್ಲಿ ಹವಾ ಏನು ಎಂಬುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಮಾಳು ಬದಲಾಗಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ. ಇತ್ತೀಚೆಗೆ ಮಾಳು ವೇದಿಕೆ ಏರಿದಾಗ ‘ಗಿಲ್ಲಿ ಗಿಲ್ಲಿ’ ಎಂದು ಕೂಗಿದ್ದರು. ಇದರಿಂದ ಅವರಿಗೆ ಮುಜುಗರ ಆಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.