
2026ರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಪ್ರಾಯೋಜಕತ್ವ ನೀಡಲು ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಆಸಕ್ತಿ ತೋರಿದೆ. ಈ ಮೂಲಕ ಅಮುಲ್ಗೆ ಪೈಪೋಟಿ ನೀಡಲು ಸಜ್ಜಾಗಿದ್ದು, ವಿರಾಟ್ ಕೊಹ್ಲಿ ಬಳಸಿ ನಂದಿನಿ ಉತ್ಪನ್ನಗಳನ್ನು ರಾಷ್ಟ್ರಮಟ್ಟದಲ್ಲಿ ಪ್ರಚಾರ ಮಾಡಲು ಯೋಜಿಸಿದೆ.<img><p>ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (ಕೆಎಂಎಫ್), 2026ರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಜೊತೆ ಪ್ರಾಯೋಜಕತ್ವ ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ತೋರಿದೆ. ಕಳೆದ ಆವೃತ್ತಿಯಲ್ಲಿ ಗುಜರಾತ್ನ ಅಮೂಲ್ ಸಂಸ್ಥೆ ಆರ್ಸಿಬಿಗೆ ಪ್ರಾಯೋಜಕತ್ವ ನೀಡಿತ್ತು. ಈ ವರ್ಷ ಅಮುಲ್ ಜೊತೆ ಕೆಎಂಎಫ್ ಪೈಪೋಟಿಗೆ ಇಳಿಯುವ ಸಾಧ್ಯತೆ ಇದೆ.</p><img><p>ಆರ್ಸಿಬಿಗೆ ಪ್ರಾಯೋಜಕರಾಗಲು ಪ್ರಯತ್ನಿಸುತ್ತಿರುವ ಕೆಎಂಎಫ್, ಒಪ್ಪಂದಕ್ಕೆ ಸಹಿ ಹಾಕಲು ಅಗತ್ಯವಿರುವ ಪ್ರಕ್ರಿಯೆಗಳನ್ನು ನಿರ್ವಹಿಸಲು ಏಜೆನ್ಸಿವೊಂದರ ಸಹಾಯ ಪಡೆಯಲು ನಿರ್ಧರಿಸಿದೆ. ಇದಕ್ಕಾಗಿ ಈಗಾಗಲೇ ಇತ್ತೀಚೆಗೆ ಟೆಂಡರ್ ಸಹ ಕರೆದಿದೆ.</p><img><p>ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ, ‘ಆರ್ಸಿಬಿ, ಐಪಿಎಲ್ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ತಂಡ. ಜೊತೆಗೆ ಸಾಮಾಜಿಕ ತಾಣದಲ್ಲಿ ಬೃಹತ್ ಸಂಖ್ಯೆಯಲ್ಲಿ ಹಿಂಬಾಲಕರನ್ನು ಹೊಂದಿದೆ ಎಂದು ಹೇಳಿದ್ದಾರೆ.</p><img><p>ನಾವು ವಿರಾಟ್ ಕೊಹ್ಲಿ ಹಾಗೂ ಇನ್ನಿಬ್ಬರು ಆಟಗಾರರನ್ನು ಬಳಿಸಿಕೊಂಡು ನಮ್ಮ ನಂದಿನಿ ಉತ್ಪನ್ನಗಳ ಪ್ರಚಾರ ಕಾರ್ಯ ನಡೆಸಲು ಯೋಜಿಸಿದ್ದೇವೆ. ಇದು ದೆಹಲಿ, ಮುಂಬೈ, ಉತ್ತರ ಪ್ರದೇಶಗಳಲ್ಲಿ ನಂದಿನಿ ಮಾರುಕಟ್ಟೆಯನ್ನು ವಿಸ್ತರಿಸಲು ಸಹಕಾರಿಯಾಗಲಿದೆ’ ಎಂದಿದ್ದಾರೆ.</p><img><p>ಜೊತೆಗೆ ಪ್ರಸ್ತಾವಿತ ಒಪ್ಪಂದದಲ್ಲಿ, ನಂದಿನಿ ಉತ್ಪನ್ನಗಳ ಜಾಹೀರಾತುಗಳಲ್ಲಿ ಕೊಹ್ಲಿ ಹಾಗೂ ಇನ್ನಿಬ್ಬರು ಆಟಗಾರರ ಭಾವಚಿತ್ರಗಳನ್ನು ಬಳಸಿಕೊಳ್ಳುವ ಬಗ್ಗೆಯೂ ಉಲ್ಲೇಖಿಸಲಾಗಿದೆ.</p><img><p>ಅಮುಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಯೆನ್ ಮೆಹ್ತಾ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದು, ‘ಕಳೆದ ವರ್ಷ ನಾವು 9 ತಂಡಗಳಿಗೆ ಪ್ರಾಯೋಜಕತ್ವ ನೀಡಿದ್ದೆವು. ಈ ವರ್ಷ ಪ್ರಾಯೋಜಕತ್ವ ಬಗ್ಗೆ ಸದ್ಯದಲ್ಲೇ ಘೋಷಣೆ ಮಾಡಲಿದ್ದೇವೆ’ ಎಂದಿದ್ದಾರೆ.</p>
Source link
ಆರ್ಸಿಬಿ ಅಂಗಳದಲ್ಲಿ ಕರುನಾಡಿನ ನಂದಿನಿ ಎಂಟ್ರಿ? ಕೆಎಂಎಫ್ನ ಹೊಸ ಲೆಕ್ಕಾಚಾರ ಏನು?