ಬೆಂಗಳೂರು, ಜನವರಿ 3: ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರ ನಡೆಸುತ್ತಿರುವ ಕೋಗಿಲು ಲೇಔಟ್ನ ಕಟ್ಟಡ ಧ್ವಂಸ ಕಾರ್ಯಾಚರಣೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲಿಯ ನಿವಾಸಿಗಳನ್ನು ಸ್ಥಳಾಂತರಿಸುವ ಮೊದಲು ಅವರ ನಿವಾಸಕ್ಕೆ ನೋಟೀಸ್ ಮತ್ತು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.
ಕೇರಳದ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ಕರ್ನಾಟಕ ಸರ್ಕಾರ ಕೋಗಿಲು ಲೇಔಟ್ನಲ್ಲಿ ಧ್ವಂಸ ಕಾರ್ಯಾಚರಣೆಯನ್ನು ಮುಂದುವರಿಸಲು ಎರಡು ಕಾರಣಗಳನ್ನು ಪಟ್ಟಿ ಮಾಡಲಾಗಿದೆ. “ಮೊದಲನೆಯದಾಗಿ, ಭೂಮಿ ಸರ್ಕಾರಕ್ಕೆ ಸೇರಿದ್ದು, ಜನರು ಅಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದರು.
ಇದನ್ನೂ ಓದಿ: ಕೋಗಿಲು ಲೇಔಟ್: ಒತ್ತುವರಿ ಮಾಡಿಕೊಂಡವರಲ್ಲಿ ಮುಸ್ಲಿಂ ಕುಟುಂಬಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ
ಕೋಗಿಲು ಬಡಾವಣೆಯ ನಿವಾಸಿಗಳಿಗೆ ಸರಿಯಾದ ಸಮಯಕ್ಕೆ ನೋಟಿಸ್ಗಳನ್ನು ನೀಡಲಾಗಿದೆ. ಅಲ್ಲಿನ ಜನರು ಬಡವರು ಎಂಬ ಒಂದೇ ಕಾರಣಕ್ಕೆ ಈ ಸಮಸ್ಯೆ ರಾಜಕೀಯವಾಗಿ ಬಿಂಬಿಸುವುದರಲ್ಲಿ ಅರ್ಥವಿಲ್ಲ ಎಂದು ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ. ಕೋಗಿಲು ಲೇಔಟ್ ನಿವಾಸಿಗಳಿಗೆ ಸರ್ಕಾರ ತಾತ್ಕಾಲಿಕ ವಸತಿ ಒದಗಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. 5 ರಿಂದ 6 ತಿಂಗಳವರೆಗೆ ಶಾಶ್ವತ ವಸತಿ ಭರವಸೆ ನೀಡಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 2:57 pm, ಶನಿ, 3 ಜನವರಿ 26