
ಹಿಂದೆ ನನ್ನ ಬೈದವರೆಲ್ಲ ಚೆಂದಾಗಿರಲಿ
ಮುಂದೆ ನನ್ನ ಬಯ್ಯುವರೆಲ್ಲ ಅಂದಣವೇರಲಿ
ಕುಂದು ಇಟ್ಟವರೆಲ್ಲ ಕುದುರೆಯ ಕಟ್ಟಿ ಬಾಳಲಿ
ಬಂದು ಒದ್ದವರಿಗೆ ಭತ್ತದ ಗದ್ದೆ ಬೆಳೆಯಲಿ
ಜನರೊಳಗೆ ಮಾನಭಂಗ ಮಾಡಿದವರಿಗೆ
ಜೇನುತುಪ್ಪ ಸಕ್ಕರೆ ಊಟ ಆಗಲಿ ಅವರಿಗೆ
ಹಾನಿ ಬಾರದಂತಹ ಲೋಕ ಆಗಲಿ ಅವರಿಗೆ
ಮಹಾನುಭಾವ ಮುಕ್ತಿಯ ಕೊಡುವ
ನೆಲೆಯಾದಿಕೇಶವ…
ಎನ್ನುತ್ತಾ ಆ್ಯಂಕರ್ ಅನುಶ್ರೀ (Anchor Anushree) ಕನಕದಾಸರ ಪದ್ಯವನ್ನು ಹೇಳುವ ಮೂಲಕ ತಮ್ಮನ್ನು ಟ್ರೋಲ್ ಮಾಡುವವರಿಗೆ ಖಡಕ್ ಉತ್ತರ ಕೊಟ್ಟಿದ್ದಾರೆ.