Headlines

ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ: ಶಮಿ ಸೇರಿ ಐವರಿಗೆ ಶಾಕ್ ಕೊಟ್ಟ ಬಿಸಿಸಿಐ ಆಯ್ಕೆ ಸಮಿತಿ!

ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ: ಶಮಿ ಸೇರಿ ಐವರಿಗೆ ಶಾಕ್ ಕೊಟ್ಟ ಬಿಸಿಸಿಐ ಆಯ್ಕೆ ಸಮಿತಿ!



ಕಿವೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ: ಶಮಿ ಸೇರಿ ಐವರಿಗೆ ಶಾಕ್ ಕೊಟ್ಟ ಬಿಸಿಸಿಐ ಆಯ್ಕೆ ಸಮಿತಿ!
<p>ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಶನಿವಾರ ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ಆದರೆ ತಂಡಕ್ಕೆ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದ ಐವರಿಗೆ ಬಿಸಿಸಿಐ ಸೆಲೆಕ್ಷನ್ ಕಮಿಟಿ ಶಾಕ್ ನೀಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ.</p><p>&nbsp;</p><img><p>ಇದೇ ಜನವರಿ 11ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ಶುಭ್‌ಮನ್ ಗಿಲ್ ಹಾಗೂ ಉಪನಾಯಕ ಶ್ರೇಯಸ್ ಅಯ್ಯರ್ ಭಾರತ ಏಕದಿನ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.</p><img><p>ಇನ್ನು ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಬುಮ್ರಾ ಅನುಪಸ್ಥಿತಿಯಲ್ಲಿ ತಂಡಕ್ಕೆ ಕಮ್‌ಬ್ಯಾಕ್ ನೀಡುವ ನಿರೀಕ್ಷೆಯಲ್ಲಿದ್ದ ಮೊಹಮ್ಮದ್ ಶಮಿಗೆ ಬಿಸಿಸಿಐ ಆಯ್ಕೆ ಸಮಿತಿ ಶಾಕ್ ನೀಡಿದೆ.</p><img><p>ಅನುಭವಿ ವೇಗಿ ಮೊಹಮ್ಮದ್ ಶಮಿ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿ 11 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹೀಗಿದ್ದೂ ಶಮಿಗೆ ಆಯ್ಕೆ ಸಮಿತಿಗೂ ಶಮಿಗೆ ಮಣೆ ಹಾಕದೇ ಇರುವುದು ಅಚ್ಚರಿಗೆ ಕಾರಣವಾಗಿದೆ.</p><img><p>ಇನ್ನು ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ ಫೈನಲ್‌ನಲ್ಲಿ ಶತಕ ಸಿಡಿಸಿ ಜಾರ್ಖಂಡ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಇಶಾನ್ ಕಿಶನ್‌ಗೂ ಕೂಡಾ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಇಶಾನ್ ಕಿಶನ್ ಕಿವೀಸ್ ಎದುರಿನ ಟಿ20 ಸರಣಿ ಹಾಗೂ ಟಿ20 ವಿಶ್ವಕಪ್‌ಗೆ ಆಯ್ಕೆಯಾಗಿದ್ದಾರೆ.</p><img><p>ಪುಣೆ ಮೂಲದ ಪ್ರತಿಭಾನ್ವಿತ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಅವರನ್ನು ಆಯ್ಕೆ ಸಮಿತಿ ಕೈಬಿಟ್ಟಿದೆ. ಗಾಯಕ್ವಾಡ್ ಭಾರತ ಪರ ಕಳೆದ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದರು. ಹೀಗಿದ್ದೂ ಋತುರಾಜ್‌ಗೆ ಆಯ್ಕೆ ಸಮಿತಿ ತಂಡದಿಂದ ಕೈಬಿಟ್ಟು ಶಾಕ್ ನೀಡಿದೆ.</p><img><p>ಭಾರತದ ಪ್ರತಿಭಾನ್ವಿತ ಆಲ್ರೌಂಡರ್ ಅಕ್ಷರ್ ಪಟೇಲ್ ಅವರನ್ನು ಮತ್ತೊಮ್ಮೆ ಆಯ್ಕೆ ಸಮಿತಿ ಏಕದಿನ ಸರಣಿಯಿಂದ ಕೈಬಿಟ್ಟಿದೆ. ಅಕ್ಷರ್ ಪಟೇಲ್ ಏಕಾಂಗಿಯಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಪಂದ್ಯದ ದಿಕ್ಕು ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.</p><img><p>ಇನ್ನು ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕಳೆದ 5 ಪಂದ್ಯಗಳ ಪೈಕಿ ನಾಲ್ಕು ಪಂದ್ಯಗಳಲ್ಲಿ ಆಕರ್ಷಕ ಶತಕ ಸಿಡಿಸಿ ಗಮನ ಸೆಳೆದಿದ್ದ ಕನ್ನಡಿಗ ದೇವದತ್ ಪಡಿಕ್ಕಲ್ ಅವರಿಗೂ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಪಡಿಕ್ಕಲ್ ಪ್ರದರ್ಶನ ಗಮನಿಸಿದರೆ, ಭಾರತ ತಂಡದಲ್ಲಿ ಈ ಬಾರಿ ಅವಕಾಶ ಸಿಗಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ.</p>



Source link

Leave a Reply

Your email address will not be published. Required fields are marked *