ಬಳ್ಳಾರಿ, ಜನವರಿ 05: ಬ್ಯಾನರ್ ಅಳವಡಿಕೆ ವಿಚಾರಕ್ಕೆ ನಡೆದ ಘರ್ಷಣೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ 50ಕ್ಕೂ ಹೆಚ್ಚು ದೊಣ್ಣೆಗಳು ಇವೆ. ಗಲಾಟೆಯ ಸಂದರ್ಭದಲ್ಲಿ ರೆಡ್ಡಿ ಬೆಂಬಲಿಗರಿಂದ ದೊಣ್ಣೆಗಳ ಬಳಕೆ ಮಾಡಿರುವ ಆರೋಪ ಕೇಳಿಬಂದಿತ್ತು. ಅದಕ್ಕೆ ಪೂರಕವೆಂಬಂತೆ ಈಗ ರಾಶಿ ರಾಶಿ ದೊಣ್ಣೆಗಳು ಇವೆ. ಕೇವಲ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ಕಡೆಯವರಿಂದಲೂ ಹಲ್ಲೆ ನಡೆಸಿದ್ದಾರೆ. ಕಾಂಗ್ರೆಸ್ ನವರು ಕಲ್ಲೆಸೆದರೆ, ಬಿಜೆಪಿಯವರು ದೊಣ್ಣೆಗಳಿಂದ ಹೊಡೆದು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.