ಬೆಂಗಳೂರು, ಜನವರಿ 05: ಮಲ್ಲೇಶ್ವರಂನ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಕೋಗಿ ಲೇಔಟ್ ನಲ್ಲಿ ಅಕ್ರಮ ಮನೆಗಳ ತೆರವು, ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದಿರುವ ಮಾರಾಮಾರಿ, ಪರಿಷತ್ ಚುನಾವಣೆ ಮತ್ತು ವಿಧಾನಸಭಾ ಬೈ ಎಲೆಕ್ಷನ್ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ನಾಯಕರು ಸಮಾಲೋಚನೆ ನಡೆಸಿದರು. ಪಕ್ಷದ ಮುಂದಿನ ನಡೆ ಬಗ್ಗೆಯೂ ಸಭೆಯಲ್ಲಿ ರೂಪುರೇಷೆ ಸಿದ್ಧಪಡಿಸಲಾಗಿದೆ.
ಸಭೆಯ ತೀರ್ಮಾನಗಳೇನು?
ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗಲಾಟೆ ವಿಚಾರದಲ್ಲಿ ಬಳ್ಳಾರಿಯಲ್ಲಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಕೋಗಿಲು ಲೇಔಟ್ನಲ್ಲಿ ಅಕ್ರಮ ಮನೆಗಳ ತೆರವು ಸಂಬಂಧ ರಾಜ್ಯವ್ಯಾಪಿ ಹೋರಾಟದ ಜೊತೆಗೆ ಕೋರ್ಟ್ ಮೊರೆ ಹೋಗಲು ಬಿಜೆಪಿ ತೀರ್ಮಾನಿಸಿದೆ. ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಹಿನ್ನೆಲೆ ಮೈತ್ರಿ ಪಕ್ಷ ಜೆಡಿಎಸ್ ಜತೆ ಚರ್ಚಿಸಿ, ಹೈಕಮಾಂಡ್ಗೆ ಸಂಭಾವ್ಯ ಪಟ್ಟಿಯನ್ನು ಕಳುಹಿಸಲು ನಿರ್ಧರಿಸಲಾಗಿದೆ. ಬಾಗಲಕೋಟೆ, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರಗಳ ಬೈಎಲೆಕ್ಷನ್ ಕುರಿತು 2 ವೀಕ್ಷಕರ ಸಮಿತಿ ರಚನೆಗೆ ತೀರ್ಮಾನ ಆಗಿದ್ದು, ಬಳ್ಳಾರಿ ಘರ್ಷಣೆ ವಿಚಾರದಲ್ಲಿ ತನಿಖೆಗೆ ಪ್ರಕರಣ ಕೂಡ ಕೇಸರಿ ಪಡೆ ನಿರ್ಧರಿಸಿದೆ.
ಇದನ್ನೂ ಓದಿ: ಕೋಗಿಲು ನಿವಾಸಿಗಳ ಪಟ್ಟಿ ಸಿದ್ಧ; ಲೇಔಟ್ಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಸಭೆಯಲ್ಲಿ ಯಾರೆಲ್ಲ ಭಾಗಿ?
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕೋರ್ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ @ಬಿವೈ ವಿಜಯೇಂದ್ರ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSYBJP ಶ್ರೀ @ಡಿ.ವಿ.ಸದಾನಂದಗೌಡ ಕೇಂದ್ರ ಸಚಿವರಾದ ಶ್ರೀ @ಜೋಶಿ ಪ್ರಲ್ಹಾದ್ ರಾಜ್ಯ ಸಹ ಉಸ್ತುವಾರಿಗಳಾದ ಶ್ರೀ @ರೆಡ್ಡಿ ಸುಧಾಕರ್21 ಪ್ರತಿಪಕ್ಷ ನಾಯಕರಾದ… pic.twitter.com/R2rqGkemcj
– ಬಿಜೆಪಿ ಕರ್ನಾಟಕ (@BJP4Karnataka) ಜನವರಿ 5, 2026
ರಾಜ್ಯ ಬಿಜೆಪಿ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಡಿವಿ.ಸದಾನಂದಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಗೋವಿಂದ ಕಾರಜೋಳ, ವಿಪಕ್ಷ ನಾಯಕರಾದ ಅಶೋಕ್, ಛಲವಾದಿ ನಾರಾಯಣಸ್ವಾಮಿ, ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಾಸಕ ಡಾ. ಅಶ್ವತ್ಥ್ ನಾರಾಯಣ, ಪರಿಷತ್ ಸದಸ್ಯ ಸಿ.ಟಿ. ರವಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಕೋರ್ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 7:25 pm, ಸೋಮ, 5 ಜನವರಿ 26