ನವೀನ, ಜನವರಿ 06: ಕೇಂದ್ರದ ಮಾಜಿಸ ಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್ವಾನೆಯಲ್ಲಿರುವ ಕಲ್ಮಾಡಿ ಹೌಸ್ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುತ್ತದೆ. ಮಧ್ಯಾಹ್ನ 3.30ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿದೆ.
ಅವರು ಭಾರತೀಯ ಆಸ್ಪತ್ರೆ ಅಸೋಸಿಯೇಷನ್ನ ಮಾಜಿ ಅಧ್ಯಕ್ಷರಾಗಿದ್ದರು. ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ಸುರೇಶ್ ಕಲ್ಮಾಡಿ ಮೇ 1, 1944 ರಂದು ಜನಿಸಿದ್ದರು.ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಅವರು ಆರು ವರ್ಷಗಳ ಕಾಲ ಭಾರತೀಯ ವಾಯುಪಡೆಯಲ್ಲಿ ಪೈಲಟ್ ಆಗಿ ಸೇವೆ ಸಲ್ಲಿಸಿದ್ದರು.
ವಾಯುಪಡೆಯಿಂದ ನಿವೃತ್ತರಾದ ನಂತರ, ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಅವರು ಪುಣೆಯಿಂದ ಸಂಸತ್ ಸದಸ್ಯ ಮತ್ತು ಪಿ.ವಿ. ನರಸಿಂಹರಾವ್ ಸರ್ಕಾರದಲ್ಲಿ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಬಜೆಟ್ ಮಂಡಿಸಿದ ಏಕೈಕ ರಾಜ್ಯ ಸಚಿವ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 8:35 am, ಮಂಗಳವಾರ, 6 ಜನವರಿ 26