Headlines

ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಪಾಸ್‌ಪೋರ್ಟ್ ಕಚೇರಿಗೂ ಬಂತು ಇ-ಮೇಲ್

ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಪಾಸ್‌ಪೋರ್ಟ್ ಕಚೇರಿಗೂ ಬಂತು ಇ-ಮೇಲ್


ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ

ಮೈಸೂರು/ ಬಾಗಲಕೋಟೆ, ಜನವರಿ 06: ಕಳೆದ ತಿಂಗಳು ಕೋಲಾರ, ಗದಗ ಸೇರಿದಂತೆ ರಾಜ್ಯದ ಹಲವು ಕಡೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಆತಂಕ ಸೃಷ್ಟಿಸಿತ್ತು. ಇದೀಗ ಮತ್ತೊಮ್ಮೆ ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ ಹಳೆ ಕೋರ್ಟ್ ಹಾಗೂ ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಬಂದಿದ್ದು, ತಪಾಸಣೆ ನಡೆಸಲಾಗಿದೆ.

ಆತ್ಮಾಹುತಿ ದಾಳಿ ಮಾಡುವುದಾಗಿ ಬೆದರಿಕೆ

ಮೈಸೂರಿನಲ್ಲಿ ಮಧ್ಯಾಹ್ನ 1.55ಕ್ಕೆ ಮೂರು ಆರ್‌ಡಿಎಕ್ಸ್ ಬಾಂಬ್ ಇಟ್ಟ, ಆತ್ಮಹತ್ಯಾ ದಾಳಿ ಬೆದರಿಕೆ ಇತ್ತು. ಸಂದೇಶದಲ್ಲಿ ನ್ಯಾಯಾಧೀಶರನ್ನು ಸ್ಥಳಾಂತರಿಸುವಂತೆ ಸೂಚಿಸಲಾಗಿದೆ. ಮಾಹಿತಿ ಸ್ವೀಕರಿಸಿರುವ ನ್ಯಾಯಾಧೀಶರು, ಕಕ್ಷಿದಾರರು, ವಕೀಲರು ತಕ್ಷಣ ಕೋರ್ಟ್ ಆವರಣದಿಂದ ಹೊರಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ತಂಡ ತಕ್ಷಣ ಹೋಗಿ ಪರಿಶೀಲನೆ ನಡೆಸಿದೆ.

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೂ ಮಧ್ಯಾಹ್ನ ಇ-ಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ನಿಮ್ಮ ಜಿಲ್ಲಾ ನ್ಯಾಯಾಲಯದ ಕ್ರಿಟಿಕಲ್ ಸ್ಥಳಗಳಲ್ಲಿ ಬಾಂಬ್ ಇಟ್ಟಿದ್ದೇವೆ, ಮಧ್ಯಾಹ್ನದ ಊಟದ ಸಮಯದಲ್ಲಿ ಸ್ಫೋಟ ಎಂಬ ಎಚ್ಚರಿಕೆ ನೀಡಲಾಯಿತು. ಈ ವಿಷಯ ತಿಳಿದ ನ್ಯಾಯವಾದಿಗಳು, ಕಕ್ಷಿದಾರರು, ನೌಕರರು ಮತ್ತು ಸಾರ್ವಜನಿಕರು ಭಯಭೀತರಾಗಿ ಹೊರಬಂದಿದ್ದಾರೆ. ಪೊಲೀಸ್ ದಳ, ಬಾಂಬ್ ನಿಷ್ಕ್ರಿಯ ದಳಗಳು ಸ್ಥಳಕ್ಕೆ ತೆರಳಿ ಕಟ್ಟಡ ಹಾಗೂ ಆವರಣದ ಸಂಪೂರ್ಣ ತಪಾಸಣೆ ನಡೆಸುತ್ತಿದೆ.

ಇದನ್ನೂ ಓದಿ ಗದಗ, ಮಂಗಳೂರು ಆಯ್ತು ಈಗ ಭಟ್ಕಳದ ತಹಶೀಲ್ದಾರ್ ಕಚೇರಿಗೂ ಬಾಂಬ್ ಬೆದರಿಕೆ!

ಪಾಸ್‌ಪೋರ್ಟ್ ಕಚೇರಿಗೂ ಬಾಂಬ್ ಥ್ರೆಟ್

ಬೆಂಗಳೂರಿನ ಲಾಲ್‌ಬಾಗ್ ರಸ್ತೆಯಲ್ಲಿರುವ ಪಾಸ್‌ಪೋರ್ಟ್ ಕಚೇರಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿರುವುದು ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಬಾಂಬ್ ಇಟ್ಟಿರುವ ಬೆದರಿಕೆ ಹಾಕಿದ್ದು, ಮಾಹಿತಿ ತಿಳಿದ ವಿಲ್ಸನ್ ಗಾರ್ಡನ್ ಹಾಗೂ ಎಸ್.ಆರ್.ನಗರ ಠಾಣೆಗೆ ಧಾವಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸಿಬ್ಬಂದಿಯಿಂದ ಪಾಸ್‌ಪೋರ್ಟ್ ಕಚೇರಿ ತಪಾಸಣೆ ನಡೆಸಲಾಗಿದೆ.

ಇದೆ ಮೊದಲೇನಲ್ಲ ಹುಸಿ ಬೆದರಿಕೆ

ಡಿ.12ರಂದು ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಂದ ಬಾಂಬ್ ಬೆದರಿಕೆ ಇಮೇಲ್ ಕೆಲಕಾಲ ಆತಂಕ ಸೃಷ್ಟಿಸಿತ್ತು. ಆರೋಪಿ ಹಾಗೂ ತಕ್ಷಣ ಕಾರ್ಯಪ್ರವೃತ್ತರಾಗಿ ಶೋಧ ನಡೆಸಿದ್ದು, ತಮಿಳುನಾಡಿನ 13 ವರ್ಷದ ಬಾಲಕಿಯಿಂದ ಬಂದ ಹುಸಿ ಬೆದರಿಕೆ ಎಂದು ತಿಳಿದು ಬಂದಿದೆ. ಡಿ.15ರಂದು ಗದಗ ಭವನ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ, ಪಾಕ್ನ ಐಎಸ್ ಐ ಮತ್ತು ಎಲ್ ಟಿಟಿಐ ಕಾರ್ಯಕರ್ತರ ಜೊತೆ ಸೇರಿ 5 ಬಾಂಬ್ ಗಳಿಂದ ಕಟ್ಟಡ ಭವನ ಸ್ಫೋಟಿಸುವ ಕಿಡಿಗೇಡಿಗಳು ಧಮ್ಕಿ ಹಾಕಿದ್ದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *