20 ದಿನ ಸಾವು ಬದುಕಿನ ನಡುವೆ ಹೋರಾಡಿದರೂ ಉಳಿಯಲಿಲ್ಲ ಜೀವ! ಚಿಕಿತ್ಸೆ ಫಲಿಸದೆ ಸಾವು

20 ದಿನ ಸಾವು ಬದುಕಿನ ನಡುವೆ ಹೋರಾಡಿದರೂ ಉಳಿಯಲಿಲ್ಲ ಜೀವ! ಚಿಕಿತ್ಸೆ ಫಲಿಸದೆ ಸಾವು


ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ್ದ ಕೇಸ್; ಚಿಕಿತ್ಸೆ ಫಲಿಸದೆ ತಾಯಿ ಗೀತಾ ಸಾವು

ಬೆಂಗಳೂರು, ಜನವರಿ 07: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿ ಗೀತಾಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರು ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿತ್ತು. ತೀವ್ರವಾಗಿ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಗೀತಾ ಕೊನೆಯುಸಿರೆಳೆದಿದ್ದಾರೆ.

20 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ

ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದಾಗ, ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ ಮುತ್ತು ಎಂಬ ಯುವಕನನ್ನು ಸಂಪರ್ಕಿಸಲಾಗಿತ್ತು. ಒಬ್ಬರಿಗೊಬ್ಬರು ಪರಿಚಯವಾದ ಬಳಿಕ, ಗೀತಾ, ಆಕೆ 19 ವರ್ಷದ ಮಗಳು ಹಾಗೂ ಮುತ್ತು ಒಂದೇ ಮನೆಯಲ್ಲಿ ವಾಸವಿದ್ದರು. ಈ ವೇಳೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಮುತ್ತು ಗೀತಾಳ ಮೇಲೆ ಒತ್ತಡ ಹೇರುತ್ತಿದ್ದ ಆರೋಪಿ. ಆದರೆ ಗೀತಾ ಇದಕ್ಕೆ ಸ್ಪಷ್ಟವಾಗಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಘಟನೆಯ ನಂತರ ಆರೋಪಿ ಪರಾರಿಯಾಗಿದ್ದ. ತೀವ್ರವಾಗಿ ಅನಾರೋಗ್ಯದ ಗೀತಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ಕೊಡಿಸಲಾಯಿತು.

ಇದನ್ನೂ ಓದಿ ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!

ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಅತ್ತ ಶೇ.50ಕ್ಕಿಂತ ಹೆಚ್ಚು ಸುಟ್ಟಗಾಯಗಳಿಂದ ಬಳಲುತ್ತಿದ್ದ ಗೀತಾ, 20 ದಿನಗಳ ಕಾಲ ಸಾವು ಬದುಕಿನ ಹೋರಾಟ ನಡೆಸುತ್ತಿದ್ದರು. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಕೊಲೆಯತ್ನ ಪ್ರಕರಣವನ್ನು ಕೊಲೆ ಕೇಸ್ ಆಗಿ ಪರಿವರ್ತಿಸಿ ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *