ಹುಬ್ಬಳ್ಳಿ, (ಜನವರಿ 07): ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್, ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಹಲ್ಲೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಮಹಿಳೆಯೇ ವಿವಸ್ತ್ರಗೊಂಡು ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ವಿರುದ್ಧ ಆರೋಪ ಪ್ರತ್ಯಾರೋಪ ಜೋರಾಗಿದ್ದರೆ, ಇದರ ನಡುವೆ ಮಹಿಳೆಯ ತಾಯಿ ಮಾಧ್ಯಮಗಳಿಗೆ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿ ಕಣ್ಣೀರಿಟ್ಟಿದ್ದಾರೆ.