ಬೆಳಗಾವಿ, (ಜನವರಿ 07): ಸಕ್ಕರೆ ಕಾರ್ಖಾನೆಯಲ್ಲಿ (ಸಕ್ಕರೆ ಕಾರ್ಖಾನೆ) ಸ್ಫೋಟಗೊಂಡ (ಬಾಯ್ಲರ್ ಬ್ಲಾಸ್ಟ್) ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಕಾರ್ಮಿಕರಿಗೆ ಗಂಭೀರವಾದ ಘಟನೆ ಬೆಳಗಾವಿ (ಬೆಳಗಾವಿ) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ. ಅಕ್ಷಯ ತೋಪಡೆ(45), ದೀಪಕ್ ಮುನವಳ್ಳಿ(31), ಸುದರ್ಶನ ಬನೋಶಿ(25) ಮೃತ ದುರ್ದೈವಿಗಳು.
ಗ್ರಾಮದ ಹೊರವಲಯದಲ್ಲಿರುವ ವಿಕ್ರಮ ಇನಾಮದಾರ ಎಂಬವರಿಗೆ ಸೇರಿದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಗಂಭೀರ ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ ಐವರು ಜನರನ್ನು ಝೀರೋ ಟ್ರಾಫಿಕ್ನಲ್ಲಿಯೇ ಬೈಲಹೊಂಗಲದಿಂದ ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಸಚಿವೆ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ: ಜೀವ ಉಳಿಸಿದ ಐಪಿಎಸ್ ಅಧಿಕಾರಿ
ಕಾರ್ಖಾನೆಯ ನಂಬರ್ 1 ಕಂಪಾರ್ಟಮೆಂಟ್ ನಲ್ಲಿ ರಿಪೇರಿ ಮಾಡೋ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಸದ್ಯಕ್ಕೆ ಬೆಳಗಾವಿ ಎಸ್ಪಿ ಕೆ.ರಾಮರಾಜನ್, ಭೇಟಿ ನೀಡಿ ಮಾಹಿತಿ ನೀಡಿದ್ದಾರೆ.
ಈ ಘಟನೆ ಸಂಬಂಧ ಬೆಳಗಾವಿಯಲ್ಲಿ ಎಸ್ಪಿ ಕೆ ರಾಮರಾಜನ್ ಒಂದು ಘಟನೆ, ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದೆ. 8 ಜನರಿಗೆ ಬಿಸಿ ಪದಾರ್ಥ (ಮಲ್ಲಿ) ಮೈ ಮೇಲೆ ಬಿದ್ದು ಗಾಯವಾಗಿದೆ. ಒಬ್ಬರನ್ನು ಬೈಲಹೊಂಗಲ ಆಸ್ಪತ್ರೆಗೆ ರವಾನಿಸಿದ್ದು, ಇನ್ನುಳಿದವರನ್ನು ಬೆಳಗಾವಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಝೀರೋ ಟ್ರಾಫಿಕ್ನಲ್ಲಿ ಗಾಯಾಳುಗಳನ್ನು ಬದಲಾಯಿಸಲಾಗಿದೆ. ದೂರು ನೀಡಿದರು ತನಿಖೆ ನಡೆಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.