Breaking News: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸಿಲಿಂಡರ್ ಸ್ಫೋಟ; ಸ್ಫೋಟದ ತೀವ್ರತೆಗೆ ನಡುಗಿದ ರಸ್ತೆ! | Massive Fire In Electronic City Cylinder Blast At Laundry Shop

Breaking News: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸಿಲಿಂಡರ್ ಸ್ಫೋಟ; ಸ್ಫೋಟದ ತೀವ್ರತೆಗೆ ನಡುಗಿದ ರಸ್ತೆ! | Massive Fire In Electronic City Cylinder Blast At Laundry Shop



Breaking News: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸಿಲಿಂಡರ್ ಸ್ಫೋಟ; ಸ್ಫೋಟದ ತೀವ್ರತೆಗೆ ನಡುಗಿದ ರಸ್ತೆ! | Massive Fire In Electronic City Cylinder Blast At Laundry Shop

ಎಲೆಕ್ಟ್ರಾನಿಕ್ ಸಿಟಿಯ ಶಾಂತಿಪುರದಲ್ಲಿನ ಲಾಂಡ್ರಿ ಅಂಗಡಿಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಈ ಘಟನೆ ಅಂಗಡಿ ಮತ್ತು ವಾಹನಗಳಿಗೆ ಹಾನಿಯಾಗಿದ್ದು, ಮೂವರಿಗೆ ಸಣ್ಣಪುಟ್ಟ ಗಾಯ.. ಅಗ್ನಿಶಾಮಕ ದಳವು ಬೆಂಕಿ ನಂದಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ (ಜ. 7): ಐಟಿ ಹಬ್ ಎಲೆಕ್ಟ್ರಾನಿಕ್ ಸಿಟಿಯ ಶಾಂತಿಪುರದಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡ ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಲಾಂಡ್ರಿ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಭಾರೀ ಹಾನಿ ಸಂಭವಿಸಿದೆ.

ಶಾಂತಿಪುರ ರಸ್ತೆಯಲ್ಲಿ ಬೆಂಕಿಯ ಕೆನ್ನಾಲಗೆ

ಎಲೆಕ್ಟ್ರಾನಿಕ್ ಸಿಟಿ ಫೇಸ್ 2 ರ ವ್ಯಾಪ್ತಿಯಲ್ಲಿರುವ ಶಾಂತಿಪುರ ರಸ್ತೆಯ ಲಾಂಡ್ರಿ ಮತ್ತು ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಸಂಜೆ 7:30ರ ಸುಮಾರಿಗೆ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಅಂಗಡಿಯಾದ್ಯಂತ ವ್ಯಾಪಿಸಿದೆ.

ಸಿಲಿಂಡರ್ ಸ್ಫೋಟದ ತೀವ್ರತೆಗೆ ನಡುಗಿದ ರಸ್ತೆ

ಬೆಂಕಿ ಹರಡಿದ ರಭಸಕ್ಕೆ ಲಾಂಡ್ರಿ ಅಂಗಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಅಂಗಡಿಯ ಗೋಡೆಗಳು ಛಿದ್ರಗೊಂಡಿವೆ. ಗೋಡೆಯ ಟೈಲ್ಸ್‌ಗಳು ಪುಡಿಯಾಗಿ ರಸ್ತೆಗೆ ಸಿಡಿದಿದ್ದು, ರಸ್ತೆಯಲ್ಲಿ ಚಲಿಸುತ್ತಿದ್ದ ಹಾಗೂ ನಿಲ್ಲಿಸಿದ್ದ ವಾಹನಗಳಿಗೂ ಹಾನಿಯಾಗಿದೆ. ಸ್ಫೋಟದ ಶಬ್ದಕ್ಕೆ ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದರು.

ಮೂವರಿಗೆ ಗಾಯ, ತಪ್ಪಿದ ದೊಡ್ಡ ಅನಾಹುತ

ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ, ಸ್ಫೋಟದ ರಭಸಕ್ಕೆ ಸಿಡಿದ ವಸ್ತುಗಳಿಂದಾಗಿ ರಸ್ತೆಯಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಧಾವಿಸಿವೆ. ಸಿಬ್ಬಂದಿ ಸತತ ಪರಿಶ್ರಮ ವಹಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಬೆಂಕಿ ಸಂಪೂರ್ಣವಾಗಿ ನಂದಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ.

ಸ್ಥಳದಲ್ಲಿ ಪೊಲೀಸರಿಂದ ರಕ್ಷಣಾ ಕಾರ್ಯ

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಜನಜಂಗುಳಿ ಸೇರದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸರು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



Source link

Leave a Reply

Your email address will not be published. Required fields are marked *