ದಳಪತಿ ವಿಜಯ್ (ತಲಪತಿ ವಿಜಯ್) ನಟನೆಯ ‘ಜನ ನಾಯಕನ್’ ಸಿನಿಮಾ ನಾಳೆ (ಜನವರಿ 09) ಬಿಡುಗಡೆಯಾಗಬೇಕಿತ್ತು. ಆದರೆ ಸಿಬಿಎಫ್ ಸಿ ಪ್ರಮಾಣ ಪತ್ರ ಸಿಗದ ಕಾರಣ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ. ‘ಜನ ನಾಯಕನ್’ ಎದುರಾಗಿ ಶಿವಕಾರ್ತಿಕೇಯನ್, ಶ್ರೀಲೀಲಾ ನಟನೆಯ ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಗುತ್ತಿದೆ. ಆದರೆ ಈಗ ಅದು ಸಹ ಸಂಕಷ್ಟದಲ್ಲಿ ಸಿಲುಕಿದೆ. ಸಿನಿಮಾಕ್ಕೆ ಬರೋಬ್ಬರಿ 23 ಕಟ್ಗಳನ್ನು ಸಿಬಿಎಫ್ಸಿ ಸೂಚಿಸಿದ್ದು, ‘ಪರಾಶಕ್ತಿ’ ನಿರ್ಮಾಪಕರು ಸಿಬಿಎಫ್ಸಿ ವಿರುದ್ಧ ನ್ಯಾಯಾಲಯಕ್ಕೆ ಮೊರೆ ಹೋಗುವ ಸಾಧ್ಯತೆ ಇದೆ.
ಶಿವಕಾರ್ತಿಕೇಯನ್ ಮತ್ತು ಶ್ರೀಲೀಲಾ ನಟಿಸಿದ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕಿ ಸುಧಾ ಕೊಂಗರ ನಿರ್ದೇಶನದ ‘ಪರಾಶಕ್ತಿ’ ಸಿನಿಮಾ ತಮಿಳುನಾಡಿನಲ್ಲಿ ನಡೆದ ಹಿಂದಿ ವಿರೋಧಿ ಚಳವಳಿಯ ಕಥೆಯನ್ನು ಹೊಂದಿದ್ದು, ಸಿನಿಮಾ ಜನವರಿ 10 ರಂದು ಬಿಡುಗಡೆಯಾಯಿತು, ಆದರೆ ಸಿನಿಮಾಕ್ಕೆ ಇದೀಗ ಸಿಬಿಎಫ್ಸಿ ಸಮಸ್ಯೆ ಎದುರಾಗಿದೆ. ವಿಶೇಷವೆಂದರೆ ಜನವರಿ 09 ರಂದು ಬಿಡುಗಡೆ ಆಗಲಿದ್ದ ‘ಜನ ನಾಯಕನ್’ ಸಿನಿಮಾಕ್ಕೂ ಸಿಬಿಎಫ್ ಸಿ ಸಮಸ್ಯೆ ಎದುರಾಗಿದೆ. ಈಗ ‘ಪರಾಶಕ್ತಿ’ ಸಿನಿಮಾಕ್ಕೂ CBF ಸಿ ಕಠಿಣ ನಿಯಮಗಳು ಹೇರಿವೆ.
‘ಪರಾಶಕ್ತಿ’ ಸಿನಿಮಾಕ್ಕೆ ಸಿಬಿಎಫ್ಸಿ ಬರೋಬ್ಬರಿ 23 ಕಟ್ಗಳನ್ನು ಸೂಚಿಸಲಾಗಿದೆ. ಇದು ಸಿನಿಮಾ ತಂಡಕ್ಕೆ ತಂದಿದೆ. ಹಿಂದಿ ವಿರೋಧಿ ಚಳವಳಿಯ ಬಗ್ಗೆ ಸಿನಿಮಾ ಆಗಿರುವ ಕಾರಣ ಖಂಡಿತ ಸಿನಿಮಾದಲ್ಲಿ ರಾಜಕೀಯ ಅಂಶವೂ ಇತ್ತು, ಇದು ಸಿಬಿಎಫ್ ಸಿಯ ಅವಕೃಪೆಗೆ ಕಾರಣವಾಗಿದೆ. ರಾಷ್ಟ್ರಪ್ರಶಸ್ತಿ ವಿಜೇತ ‘ಸೂರರೈ ಪೋಟ್ರು’ ಸಿನಿಮಾ ನಿರ್ದೇಶಿಸಿರುವ ಸುಧಾ ಕೊಂಗರಗೆ ಇದು ಸಹನೀಯವಾಗಿಲ್ಲ ಎನ್ನಲಾಗುತ್ತಿದ್ದು, ಚಿತ್ರತಂಡ ಸಿಬಿಎಫ್ ಸಿಯ ನಿರ್ಣಯಕ್ಕೆ ನ್ಯಾಯಾಲಯದ ಮೆಟ್ಟಿಲೇರುವ ಸಾಧ್ಯತೆ ಇದೆ.
ಇದನ್ನೂ ಓದಿ:ವಿಜಯ್ ಹಿಟ್ ಸಾಂಗ್ ನ ಕೆಟ್ಟದಾಗಿ ಹಾಡಿ ಟ್ರೋಲ್ ಆದ ಮಮಿತಾ ಬೈಜು
‘ಪರಾಶಕ್ತಿ’ ಸಿನಿಮಾದ ನಿರ್ಮಾಪಕರು ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆಗಳಿಗೆ ಆಪ್ತರಾಗಿದ್ದರೆ, ಡಿಎಂಕೆಗೆ ವಿಪಕ್ಷವಾಗಿ ಉದಯವಾಗುತ್ತಿರುವ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಕನ್’ ಗೆ ರಾಜಕೀಯ ದಾಳವಾಗಿ ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಮಾಡಲಾಗಿದ್ದರೂ ನಂಬಲರ್ಹವಾಗಿದೆ. ‘ಜನ ನಾಯಕನ್’ ಸಿನಿಮಾಕ್ಕೆ ಸಿಬಿಎಫ್ ಸಿ ಪ್ರಮಾಣ ಪತ್ರ ನೀಡದೆ ಡಿಎಂಕೆಯ ಕೈವಾಡವೂ ಇದೆ ಎನ್ನಲಾಗುತ್ತಿದೆ. ಆದರೆ ಈಗ ಲಭ್ಯವಿರುವ ‘ಪರಾಶಕ್ತಿ’ ಸಿನಿಮಾಕ್ಕೂ ಸಹ ಸಿಬಿಎಫ್ಸಿ 23 ಕಟ್ ಸೂಚಿಸಿದ್ದು, ಚಿತ್ರತಂಡಕ್ಕೆ ನೀಡಿದೆ.
‘ಪರಾಶಕ್ತಿ’ ಸಿನಿಮಾ ಶಿವಕಾರ್ತಿಕೇಯನ್ ಅವರ 25ನೇ ಸಿನಿಮಾ ಆಗಿದ್ದು, ಶ್ರೀಲೀಲಾಗೆ ಇದು ಮೊದಲ ತಮಿಳು ಸಿನಿಮಾ. ಸಿನಿಮಾವನ್ನು 125 ಕೋಟಿ ಬಜೆಟ್ನಲ್ಲಿ ನಿರ್ಮಾಣ ಮಾಡಲಾಗಿದೆ, ಸಿನಿಮಾದ ಮೇಲೆ ಶಿವಕಾರ್ತಿಕೇಯನ್ಗೆ ಭಾರಿ ನಿರೀಕ್ಷೆ ಇತ್ತು. ಆದರೆ ಈಗ ಸಿನಿಮಾದ ಬಿಡುಗಡೆಯೇ ಇಕ್ಕಟ್ಟಿಗೆ ಸಿಲುಕಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ