ಮೇಷ ರಾಶಿ:
ನೀವು ದೈಹಿಕ ಪೀಡೆಯಿಂದ ಬಳಲುತ್ತಿದ್ದರೆ ಆಗಬಹುದು. ಸಾಮಾಜಿಕ ಚಟುವಟಿಕೆಗಳಲ್ಲಿ ಇರುವುದು. ಮಕ್ಕಳ ಕಡೆಯಿಂದ ಸಂತೋಷದ ಸುದ್ದಿ ಇರುತ್ತದೆ. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಳ್ಳುವ ಸಂಭವವಿದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೇ ಸರಿಯಾಗಿ ಗೊತ್ತಿಲ್ಲದೇ ಹೋಗಬಹುದು. ಮಕ್ಕಳ ಶುಭವಾರ್ತೆಯು ಸಂತಸಕೊಡಬಹುದು. ಬಂಗಾರದ ಮೇಲೆ ಹೂಡಿಕೆ ಮಾಡುವಿರಿ. ನಿಮ್ಮ ಮೇಲೆ ಯಾವುದಾದರೊಂದು ವಿಷಯ, ವ್ಯಕ್ತಿಗಳ ಪ್ರಭಾವ ಬೀರಬಹುದು. ಸಮಾಜವು ನಿಮ್ಮನ್ನು ಸ್ವಾರ್ಥಿಯಂತೆ ನೋಡಬಹುದು. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾಯಿತು. ಸಿಟ್ಟಾಗಿ ಮನೆಯಿಂದ ಹೊರ ನಡೆಯುವ ಪ್ರಸಂಗವು ಬರಬಹುದು. ಮನಸ್ಸಿಗೆ ಬಾರದ ಕಾರ್ಯವನ್ನು ಮಾಡಲು ಧೈರ್ಯ ಸಾಲದು.
ವೃಷಭ ರಾಶಿ:
ಪ್ರೇಮವು ನೀವಂದುಕೊಂಡಂತೆ ಮುಕ್ತಾಯವಾಗುವುದು ನಿಮಗೆ ಖುಷಿಕೊಡುವುದು. ಅಂದುಕೊಂಡಂತೆ ಆಗಿದ್ದಕ್ಕೆ ಸಂತೋಷವು ಇರಲಿದೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುವಿರಿ. ಗೌಪ್ಯವಾಗಿ ವ್ಯವಹಾರವನ್ನು ನಡೆಸುವಿರಿ. ಪ್ರೀತಿಯನ್ನು ತೋರ್ಪಡಿಸುವ ರೀತಿ ಬೇರೆ ರೀತಿಯದ್ದು. ನೀವು ಇತರರ ಒಳ್ಳೆಯದನ್ನು ಯೋಚಿಸುವಿರಿ ಹಾಗೂ ಒಳ್ಳೆ ಮನಸ್ಸಿನಿಂದ ಸೇವೆ ಮಾಡುತ್ತೀರಿ. ನಿಮ್ಮ ಮಕ್ಕಳ ಮನೋಭಾವವನ್ನು ಅವರಿಗೆ ಇಷ್ಟವಾಗುವುದನ್ನು ಮಾಡಿರಿ. ಇಂದಿನ ವ್ಯಾಪಾರದಿಂದ ಆರ್ಥಿಕತೆಯು ಬಲವಾಗುವುದು. ಮಕ್ಕಳು ಆರ್ಥಿಕತೆಯ ದುರ್ಬಲತೆಯಿಂದ ವಿದ್ಯಾಭ್ಯಾಸವನ್ನು ನಿಲ್ಲಿಸಬೇಕಾದೀತು. ಸ್ತ್ರೀಯರಿಂದ ಸಹಾಯ ಪಡೆದರೂ ನೋಡುಗರು ಅದನ್ನು ಅಪಾರ್ಥ ಮಾಡಿಕೊಳ್ಳಬಹುದು. ನಿಮ್ಮ ಹೇಳಿಕೆಗಳು ಮಹತ್ತ್ವದ್ದಾಗಿರಲಿಲ್ಲ.
ಮಿಥುನ ರಾಶಿ:
ನಿಮ್ಮ ಕಠಿಣ ಪರಿಶ್ರಮದಿಂದ ನೀವು ಉತ್ತಮ ಫಲಿತಾಂಶವನ್ನು ಪಡೆಯುತ್ತೀರಿ. ಇಂದು ತಾಯಿಯ ಕಡೆಯಿಂದ ಪ್ರೀತಿ ಮತ್ತು ವಿಶೇಷ ಬೆಂಬಲದ ಸಾಧ್ಯತೆಯಿದೆ. ಮೋಜಿಗಾಗಿ ಹಣವನ್ನು ಖರ್ಚು ಮಾಡುತ್ತೀರಿ. ಇದು ನಿಮ್ಮ ಶತ್ರುಗಳನ್ನು ಅಸಮಾಧಾನಗೊಳಿಸುತ್ತದೆ. ಇಂದು ಪೋಷಕರ ಬಗ್ಗೆ ವಿಶೇಷ ಕಾಳಜಿ ವಹಿಸಿ. ಅಪರಿಚಿತರ ಮಾತನ್ನು ನೀವು ನಂಬುವಿರಿ. ಪರೀಕ್ಷೆಯ ಸಿದ್ಧತೆಯಲ್ಲಿ ಗೊಂದಲವಿದೆ. ಬಂಧುಗಳ ವಿಯೋಗವೂ ಆಗಬಹುದು. ವಿವಾಹೇತರ ಸಂಬಂಧದಿಂದ ನಿಮಗೆ ಬೇಸರವಾಗುವುದು. ನಿಮ್ಮ ಮಾತಿನಿಂದ ಯಾವ ಲಾಭವೂ ಆಗದು ಎಂಬುದು ತಿಳಿಯುತ್ತದೆ. ಸ್ವಂತ ಉದ್ಯೋಗವನ್ನು ಮಾಡಬೇಕು ಎಂದು ಅನ್ನಿಸುವುದು.
ಕರ್ಕಾಟಕ ರಾಶಿ:
ತಾಳ್ಮೆ ಮತ್ತು ಪ್ರತಿಭೆಯಿಂದ ಶತ್ರು ಗೆಲ್ಲುವಲ್ಲಿ ನೀವು ಯಶಸ್ಸನ್ನು ಗಳಿಸುವಿರಿ. ನಿಮ್ಮ ಆಲೋಚನೆ, ಕಾರ್ಯದಿಂದ ಯಶಸ್ಸನ್ನು ಪಡೆಯಲು ನೀವು ಬಹಳ ಸಮಯ ಕಾಯಬೇಕಾಗಬಹುದು. ಸಣ್ಣ ವಿಷಯಕ್ಕೆ ಸ್ನೇಹಿತರ ಜೊತೆಗಿನ ಸಂಬಂಧವು ಹಾಳಾಗಬಹುದು. ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡು ಕೈ ಬಿಡಬಹುದು. ಅಂದುಕೊಂಡಂತೆ ಆಗಿದ್ದಕ್ಕೆ ಸಂತೋಷವು ಇರಲಿದೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುವಿರಿ. ಮುಸುಕಿನ ಗುದ್ದಾಟದಿಂದ ಮೈಕೈ ನೋವಾಗುವುದು ಅಷ್ಟೇ. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆ ಅಚ್ಚರಿ ಆಗಬಹುದು. ಕಳೆದುಹೋದುದನ್ನು ಮರಳಿ ಪಡೆಯುವುದು ಕಷ್ಟ. ವಾಹನದಿಂದ ಆರ್ಥಿಕ ಸ್ಥಿತಿಗೆ ಹೊಡೆತ.
ಸಿಂಹ ರಾಶಿ:
ಸ್ನೇಹಿತರ ಜೊತೆ ಸುತ್ತಾಟ ಮತ್ತು ಉತ್ತಮ ಭೋಜನವನ್ನು ಮಾಡುವಿರಿ. ನಿಮ್ಮದು ನಿಮಗೇ ಸಿಕ್ಕರೂ ಸಂತೃಪ್ತಿ ಇರದು. ಹಠದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಎಲ್ಲವನ್ನೂ ನಕಾರಾತ್ಮಕವಾಗಿಯೇ ನೋಡುವಿರಿ. ನಿಮ್ಮ ಭಾವನೆಗಳನ್ನು ಇತರರ ಬಳಿ ಹೇಳುಕೊಳ್ಳುವಿರಿ. ಭೂಮಿಯಿಂದ ಇಂದು ಸಂಪತ್ತು ಕಳೆದುಕೊಳ್ಳಬೇಕಾಗುವುದು. ಹಿರಿಯರ ಮಾತುಗಳು ಪೂರ್ಣವಾಗಿ ಇಷ್ಟವಾಗುವುದು. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸುವುದು ಮುಖ್ಯವಾದೀತು. ಯಾವುದನ್ನೇ ಆದರೂ ಚಿಂತಿಸಿ ಮಾತನಾಡಿ. ಹೊಸ ಮನೆಯನ್ನು ಕಟ್ಟುವ ಯೋಚನೆಯನ್ನು ಕಾರಣಾಂತರಗಳಿಂದ ನಿಲ್ಲಿಸುವಿರಿ. ಭೂಮಿಯ ಉತ್ಪನ್ನದಿಂದ ಲಾಭ.
ಕನ್ಯಾ ರಾಶಿ:
ಇಂದು ನಿಮಗೆ ಏಕಾಂತವೇ ಹೆಚ್ಚು ಸುಖವನ್ನು ಕೊಡುವುದು. ನಿಮ್ಮಲ್ಲಿ ಇಂದು ದಾನ, ಧರ್ಮದ ಬಗ್ಗೆ ವರ್ಧಿಸಬಹುದು. ಧಾರ್ಮಿಕ ಆಚರಣೆಗಳಲ್ಲಿ ಶ್ರದ್ಧೆಯಿಂದ ಪಾಲ್ಗೊಳ್ಳುವಿರಿ. ಆರ್ಥಿಕ ಪರಿಸ್ಥಿತಿ ಬಲ ಇದೆ. ಹೊಟ್ಟೆಯ ಸ್ವಾಸ್ಥ್ಯವು ಕೆಡುವ ಸಾಧ್ಯತೆಯಿದೆ. ಜಾಗರೂಕರಾಗಿರಿ ಮತ್ತು ಆಹಾರದ ಮೇಲೆ ಸಂಯಮವಿರಿಸಿ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿ ಇರಲಿದೆ ವಿದ್ಯಾಭ್ಯಾಸಕ್ಕೆ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಿ. ಮಕ್ಕಳ ವಿವಾಹದಿಂದ ಚಿಂತೆ ದೂರವಾಗುವುದು. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾಯಿತು. ಮನೆಯಿಂದ ಹೊರ ನಡೆಯುವ ಪ್ರಸಂಗವು ಬರಬಹುದು.
ತುಲಾ ರಾಶಿ:
ಕೃತಜ್ಞತೆಯಿಂದ ನಿಮ್ಮ ವ್ಯವಹಾರವು ಇರಲಿ. ಸಂಪತ್ತಿಗಾಗಿ ನೀವು ಬಹಳ ಶ್ರಮಪಡುವಿರಿ. ಆರ್ಥಿಕತೆಯ ಅಭಿವೃದ್ಧಿಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗುವುದು. ಆದಾಯಕ್ಕೆ ಸ್ವಪ್ರಯತ್ನವು ಸ್ವಲ್ಪವಾದರೂ ಇರಲಿ. ದಿನವನ್ನು ಮನೆಯ ಕೆಲಸದ ಜೊತೆ ಕಳೆಯುವಿರಿ. ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು. ಹಗುರವಾಗಿ ಯಾರ ಬಗ್ಗೆಯೂ ಮಾತನಾಡುವುದು ಬೇಡ. ನಿಮ್ಮ ವ್ಯಕ್ತಿತ್ವದ ಪೂರ್ಣಪರಿಚಯವು ಆಗುವುದು. ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚಿರಲಿ. ಭೇಟಿಯನ್ನು ಮಾಡಲು ಕಾದು ಸಮಯವನ್ನು ವ್ಯರ್ಥಮಾಡಿಕೊಳ್ಳುವಿರಿ. ತಾಳ್ಮೆಯಿಂದ ವರ್ತಿಸಲು ನಿಮ್ಮವರಿಂದ ಸಲಹೆ ಸಿಗುವುದು. ವೈವಾಹಿಕ ಜೀವನದಲ್ಲಿ ಶೈಕ್ಷಣಿಕ ತುಲನೆ ನಡೆಯಬಹುದು.
ವೃಶ್ಚಿಕ ರಾಶಿ:
ನೀವು ಯಾವುದೇ ಹೊಸ ಕೆಲಸದಲ್ಲಿ ಹೂಡಿಕೆ ಮಾಡಬೇಕಾದರೆ, ತಕ್ಷಣವೇ ಮಾಡಿ, ಭವಿಷ್ಯದಲ್ಲಿ ಪ್ರಯೋಜನವಿದೆ. ಅಲ್ಪವನ್ನು ಮಾತ್ರ ಮಾಡಿದರೆ ನಿಮಗೂ ಹೊರೆಯಾಗದು. ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ. ಇತರರು ಕೊಡುವ ತೊಂದರೆಯಿಂದ ನೀವು ಬೇಸತ್ತುಹೋಗಬಹುದು. ವ್ಯವಹಾರಕ್ಕೆ ಇಂದು ದೂರಪ್ರಯಾಣ ಮಾಡುವಿರಿ. ನಿಮ್ಮ ಮಾತಿನಿಂದ ಯಾವ ಲಾಭವೂ ಆಗದು ಎಂಬುದು ತಿಳಿಯುತ್ತದೆ. ಸ್ವಂತ ಉದ್ಯೋಗವನ್ನು ಮಾಡಬೇಕು ಎಂದು ಅನ್ನಿಸುವುದು. ನಿಮ್ಮನ್ನೇ ಒಮ್ಮೆ ನೋಡಿಕೊಳ್ಳಿ. ಇಂದು ಕಲಹವಾಗುವಾಗ ಅಪರಿಚಿತರ ಸಹಾಯವು ಸಿಗಲಿದೆ. ಭಾಗ್ಯದ ಬಾಗಿಲು ತೆಗೆಯುವ ನಿರೀಕ್ಷೆಯಲ್ಲಿ ಇರುವಿರಿ.
ಧನು ರಾಶಿ:
ಭೂಮಿಯಿಂದ ಇಂದು ಸಂಪತ್ತು ಸಿಗಬಹುದು. ಹಿರಿಯರ ಮಾತುಗಳು ಪೂರ್ಣವಾಗಿ ಇಷ್ಟವಾಗುವುದು. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸುವುದು ಮುಖ್ಯವಾಗಬೇಕು. ಯಾರ ಬಳಿಯೇ ಆದರೂ ಚಿಂತಿಸಿ ಮಾತನಾಡಿ. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುತ್ತೀರಿ. ನಿಮ್ಮ ಸ್ವಭಾವದಲ್ಲಿ ಬದಲಾವಣೆ ಇರಲಿದೆ ಇತರರಿಗೆ ಇದು ಅನಿರೀಕ್ಷಿತವೂ ಆಗಬಹುದು. ಕುಟುಂಬವು ನಿಮ್ಮ ವಿವಾಹದ ಸಂತೋಷದಲ್ಲಿ ಇರಲಿದೆ. ಕೃತಜ್ಞತೆಯಿಂದ ನಿಮ್ಮ ವ್ಯವಹಾರವು ಇರಲಿ. ಸಂಗಾತಿಯ ಪ್ರೀತಿಯು ಕಡಿಮೆ ಆದೀತು. ಸ್ವಂತ ಕೆಲಸಕ್ಕೆ ಸಮಯವು ಸಿಗದೇ ಎಲ್ಲವನ್ನೂ ಉಳಿಸಿಕೊಳ್ಳಿ. ಆರ್ಥಿಕ ವಿಚಾರದಲ್ಲಿ ಸರಿಯಾದ ಹೊಂದಾಣಿಕೆ ಸಿಗದೇ ಕಷ್ಟವಾಗಬಹುದು.
ಮಕರ ರಾಶಿ:
ಕುಟುಂಬದ ಸದಸ್ಯರಿಗೆ ನೀವು ವಿಶ್ವಾಸದ್ರೋಹಿ ಆಗುವ ಸಾಧ್ಯತೆಯಿದೆ. ಸಹಾಯ ಸಿಗುವುದಿಲ್ಲ ಬೇಡಿದರೆ ಉತ್ತಮ. ಹಳೆಯ ಸ್ನೇಹಿತನನ್ನು ಯಾವುದಾದರೂ ರೀತಿಯಲ್ಲಿ ಭೇಟಿಯಾಗುವಿರಿ. ಮನೆಯನ್ನು ಬಿಟ್ಟು ಹೋಗಲು ಚೋರ ಭಯವು ಕಾಡಬಹುದು. ಸ್ನೇಹಿತರು ನಿಮ್ಮ ನಿರ್ಲಕ್ಷ್ಯದ ಕಾರಣದಿಂದ ದೂರವಾಗಬಹುದು. ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು. ಹಗುರವಾಗಿ ಯಾರ ಬಗ್ಗೆಯೂ ಮಾತನಾಡುವುದು ಬೇಡ. ನಿಮ್ಮ ವ್ಯಕ್ತಿತ್ವದ ಪೂರ್ಣಪರಿಚಯವು ಆಗುವುದು. ಆತ್ಮವಂಚನೆಯೇ ನಿಮ್ಮನ್ನು ಬಹಳ ಕಾಡುವುದು. ಇಂದೂ ಕೂಡ ಮನೆಯಿಂದ ಕಛೇರಿಯ ಕೆಲಸ ಮಾಡುವಿರಿ. ಎಲ್ಲವೂ ಇದ್ದರೂ ಅದನ್ನು ಬಳಸುವ ಕಲೆಯೂ ಗೊತ್ತಿರಬೇಕಾಗುವುದು.
ಕುಂಭ ರಾಶಿ:
ಮಾತಿನಲ್ಲಿ ಮಾಧುರ್ಯ ಇಲ್ಲದಿದ್ದರೆ ಸಂಬಂಧದಲ್ಲಿ ಕಹಿಯಾದೀತು. ವಿವಿಧ ಮೂಲಗಳಿಂದ ನಿಮಗೆ ಆದಾಯ ಬರಲಿದೆ ಹೂಡಿಕೆಯ ಕಡೆ ನಿಮ್ಮ ಗಮನ ಇರುವುದು. ನಿಮ್ಮ ಆಲಸ್ಯವನ್ನು ಹಿತಶತ್ರುಗಳು ಅವಕಾಶವಾಗಿ ತೆಗೆದುಕೊಳ್ಳುತ್ತಾರೆ. ಯಾರನ್ನೂ ನೀವು ಒಮ್ಮೆ ನಂಬುವುದು ಕಷ್ಟವಾದರೂ ಇಂದು ನಂಬಿಕೆ ಅನಿವಾರ್ಯ ಆದೀತು. ನಿಮ್ಮ ಸ್ಥಿರಮತಿಯಿಂದ ಕಷ್ಟದ ಸಂದರ್ಭವನ್ನು ಹಿಡಿತಕ್ಕೆ ತರುವಿರಿ. ಸಂಗಾತಿಗೆ ಉಡುಗೊರೆಯನ್ನು ನೀಡಿ ಕೋಪವು ಕಡಿಮೆ ಮಾಡುವಿರಿ. ಇಷ್ಟಪಟ್ಟರ ಜೊತೆ ಸಮಯ ಕಳೆಯಲು ಆಗದು. ಅದಕ್ಕೆ ಅವರಿಗೆ ಬೇಸರವೂ ಆಗುವುದು. ನಿಮ್ಮ ಕಾರ್ಯರೂಪಕ್ಕೆ ತರಲು ಬಯಸುವಿರಿ. ಪ್ರಣಯದಲ್ಲಿ ಇಂದು ಅತಿಯಾದ ಆಸಕ್ತಿಯು ಇರುವುದು.
ಮೀನ ರಾಶಿ:
ನೀವು ಸದಾ ಸಂತೋಷದಿಂದ ಇರುವ ಕಾರಣ ಜನರು ನಿಮ್ಮೊಂದಿಗೆ ಸಂಬಂಧ ಹೊಂದಲು ಪ್ರಯತ್ನಿಸುತ್ತಾರೆ. ಸಾಮಾಜಿಕ ಗೌರವವನ್ನು ಪಡೆಯುವುದರಿಂದ ನಿಮ್ಮ ಸ್ಥಿರ ಸ್ಥಿತಿ. ಮನಸ್ಸಿನಲ್ಲಿ ನಾನಾ ಬಗೆಯ ಗೊಂದಲವಿರುವುದು. ವಿದೇಶ ಪ್ರಯಾಣಕ್ಕೆ ಮಿತ್ರನ ಸಹಕಾರವನ್ನು ಅಪೇಕ್ಷಿಸುತ್ತದೆ. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿ ಇರುವುದು. ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿಯು ಬರಬಹುದು. ಆಪ್ತರ ಜೊತೆಗಿದ್ದು ವ್ಯವಹಾರದ ಚಾತುರ್ಯವನ್ನು ನೀವು ಇಂದು ಅರಿತುಕೊಳ್ಳುವಿರಿ. ನಿಮ್ಮ ವಸ್ತುವೇ ಆದರೂ ಅದರ ಮೇಲೆ ಅಧಿಕಾರ ಚಲಾಯಿಸಲಾಗದು. ಆಪ್ತರ ಮೇಲೆ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ.
ಜನವರಿ 10, 2026ರ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಕಾರ್ಯಕ್ರಮ : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ ನಿತ್ಯನಕ್ಷತ್ರ : ಹಸ್ತಾ ಯೋಗ : ಅತಿಗಂಡ, ಕರಣ : ಬವ, ಸೂರ್ಯೋದಯ 5 – 0, 1 – 1 pm ಇಂದಿನ ಶುಭಾಶುಭ ಕಾಲ : ರಾಹು ಕಾಲ 09-42 – 11:07, ಯಮಗಂಡ ಕಾಲ 13:57 – 15:22, ಗುಳಿಕ ಕಾಲ 06:53 – 08:18
-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)