
<p>ಢಾಕಾ: ಭಾರತ ಹಾಗೂ ಬಾಂಗ್ಲಾದೇಶ ನಡುವಿನ ತಿಕ್ಕಾಟ ಇದೀಗ ಮತ್ತೊಂದು ಹಂತ ತಲುಪಿದ್ದು, ಟಿ20 ವಿಶ್ವಕಪ್ ಟೂರ್ನಿಯಾಡಲು ನಾವು ಭಾರತಕ್ಕೆ ಬರುವುದಿಲ್ಲ ಎಂದು ಬಾಂಗ್ಲಾದೇಶ ಪಟ್ಟು ಹಿಡಿದಿದೆ. ಹೀಗಿರುವಾಗಲೇ ಬಾಂಗ್ಲಾದೇಶ ಮಾಜಿ ನಾಯಕನ ಮೇಲೆ ನಜ್ರುಲ್ ಇಸ್ಲಾಂ ಗಂಭೀರ ಆರೋಪ ಮಾಡಿದ್ದಾರೆ.</p><img><p>ಬಿಸಿಸಿಐ ಸೂಚನೆ ಮೇರೆಗೆ ಮುಸ್ತಾಫಿಜುರ್ ರಹಮಾನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು ರಿಲೀಸ್ ಮಾಡಿದ ಬೆನ್ನಲ್ಲೇ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಭಾರತದಾಚೆ ಸ್ಥಳಾಂತರಿಸುವಂತೆ ಐಸಿಸಿ ಬಳಿ ಪಟ್ಟು ಹಿಡಿದಿದೆ.</p><img><p>2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಮುಂಬರುವ ಫೆಬ್ರವರಿ 07ರಿಂದ ಆರಂಭವಾಗಲಿದ್ದು, ಭಾರತ ಹಾಗೂ ಶ್ರೀಲಂಕಾ ಜಂಟಿ ಅತಿಥ್ಯ ವಹಿಸಿವೆ. ಬಾಂಗ್ಲಾದೇಶದ ಗ್ರೂಪ್ ಹಂತದ ಎಲ್ಲಾ ಪಂದ್ಯಗಳು ಭಾರತದ ಈಡನ್ ಗಾರ್ಡನ್ಸ್ ಹಾಗೂ ವಾಂಖೇಡೆ ಮೈದಾನದಲ್ಲಿ ನಿಗದಿಯಾಗಿವೆ.</p><img><p>ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದಿರುವ ಬಾಂಗ್ಲಾ ಕ್ರಿಕೆಟ್ ಮಂಡಳಿಗೆ ಬಾಂಗ್ಲಾದ ಮಾಜಿ ನಾಯಕ ತಮೀಮ್ ಇಕ್ಬಾಲ್ ಕಿವಿ ಮಾತು ಹೇಳಿದ್ದಾರೆ.</p><img><p>‘ರಾಜಕೀಯ ಅಜೆಂಡಾಗೆ ಬಲಿಯಾಗಬೇಡಿ. ವಿಶ್ವಕಪ್ನಲ್ಲಿ ಆಡಲು ಭಾರತಕ್ಕೆ ಹೋಗುವುದಿಲ್ಲ ಎನ್ನುವ ಮೊದಲು ಕ್ರಿಕೆಟ್ ಜಗತ್ತಿನಲ್ಲಿ ಬಾಂಗ್ಲಾದೇಶದ ಸ್ಥಾನ ಏನು ಎನ್ನುವುದು ನಮಗೆ ತಿಳಿದಿರಬೇಕು’ ಎಂದು ತಮೀಮ್ ಹೇಳಿದ್ದಾರೆ.</p><img><p>ಇದಕ್ಕೆ ಪ್ರತಿಕ್ರಿಯಿಸಿರುವ ಬಿಸಿಬಿ ನಿರ್ದೇಶಕ ನಜ್ರುಲ್ ಇಸ್ಲಾಂ, ತಮೀಮ್ ಒಬ್ಬ ಭಾರತೀಯ ಏಜೆಂಟ್ ಎಂದು ಕಿಡಿಕಾಡಿದ್ದಾರೆ.</p><img><p>ಇದಕ್ಕೆ ಬಾಂಗ್ಲಾದ ಹಲವು ಕ್ರಿಕೆಟಿಗರು ಆಕ್ಷೇಪ ವ್ಯಕ್ತಪಡಿಸಿದ್ದು, 15 ವರ್ಷ ದೇಶಕ್ಕಾಗಿ ಆಡಿದ ಆಟಗಾರನ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.</p><img><p>ಬಾಂಗ್ಲಾದೇಶ ತಂಡದ ಮಾಜಿ ಹಾಗೂ ಹಾಲಿ ಕ್ರಿಕೆಟಿಗರಾದ ಟಸ್ಕಿನ್ ಅಹಮದ್, ಮೊಮಿನುಲ್ ಹಕ್ ಹಾಗೂ ತೈಜುಲ್ ಇಸ್ಲಾಂ ಸೇರಿದಂತೆ ಹಲವು ಕ್ರಿಕೆಟಿಗರು ಬಿಸಿಬಿ ನಿರ್ದೇಶಕ ನಜ್ರುಲ್ ಇಸ್ಲಾಂ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.</p><img><p>36 ವರ್ಷದ ತಮಿಮ್ ಇಕ್ಬಾಲ್, ಬಾಂಗ್ಲಾದೇಶ ಪರ 70 ಟೆಸ್ಟ್, 243 ಏಕದಿನ ಹಾಗೂ 78 ಟಿ20 ಪಂದ್ಯಗಳನ್ನಾಡಿದ್ದು, ಹಲವಾರು ಪಂದ್ಯಗಳಲ್ಲಿ ಏಕಾಂಗಿಯಾಗಿ ಬಾಂಗ್ಲಾದೇಶ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.</p>
Source link
ಬಾಂಗ್ಲಾದೇಶ ಮಾಜಿ ನಾಯಕನನ್ನು 'ಭಾರತದ ಏಜೆಂಟ್' ಎಂದು ಕರೆದ ನಜ್ರುಲ್ ಇಸ್ಲಾಂ! ಬಾಂಗ್ಲಾ ಮಂಡಳಿ ವಿರುದ್ದವೇ ತಿರುಗಿಬಿದ್ದ ಆಟಗಾರರು