ಬಿಗ್ಬಾಸ್ ಕನ್ನಡ ಸೀಸನ್ 12ರ (ಬಿಗ್ ಬಾಸ್ ಕನ್ನಡ) ಫಿನಾಲೆ ವಾರ ಚಾಲ್ತಿಯಲ್ಲಿದೆ. ಇದೇ ಭಾನುವಾರ ವಿನ್ನರ್ ಘೋಷಣೆ ಆಗಲಿದೆ, ವೋಟ್ ಲೈನ್ಗಳು ತೆರೆದುಕೊಳ್ಳುತ್ತವೆ. ಬಿಗ್ಬಾಸ್ ಮನೆಯಲ್ಲಿ ಪ್ರಸ್ತುತ ಏಳು ಮಂದಿ ಸದಸ್ಯರಿದ್ದಾರೆ. ಅಶ್ವಿನಿ, ಗಿಲ್ಲಿ, ರಘು, ರಕ್ಷಿತಾ, ಕಾವ್ಯಾ, ಧ್ರುವಂತ್ ಮತ್ತು ಧನುಶ್. ಎಲ್ಲರ ಅಭಿಮಾನಿಗಳು ಸಹ ತಮ್ಮ ಮೆಚ್ಚಿನ ಸ್ಪರ್ಧಿಯ ಪರವಾಗಿ ಓಟು ಹಾಕಲು ಆರಂಭಿಸಿದ್ದು, ಕೆಲವರಂತೂ ಅಭಿಯಾನವನ್ನೇ ಮಾಡುತ್ತಿದ್ದಾರೆ. ಇದೀಗ ಗಿಲ್ಲಿ ಪರವಾಗಿ ಅವರ ಕ್ಷೇತ್ರದ ಶಾಸಕರೇ ಮತ ಕೇಳಿದ್ದಾರೆ. ಗಿಲ್ಲಿಗೆ ಓಟು ಹಾಕಿರೆಂದು ಮಂಡ್ಯ ಜಿಲ್ಲೆ ಮಳವಳ್ಳಿ ಕ್ಷೇತ್ರದ ಶಾಸಕ ನರೇಂದ್ರ ಸ್ವಾಮಿ ಅವರು ಮತ ಯಾಚನೆ ಮಾಡಿದ್ದಾರೆ. ಶಾಸಕ ಹೇಳಿರುವುದೇನು? ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ