
<p>ರಾಜ್ಕೋಟ್: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ, ಸದ್ಯ ರೆಡ್ ಹಾಟ್ ಫಾರ್ಮ್ನಲ್ಲಿದ್ದು, ನ್ಯೂಜಿಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲೇ ಭರ್ಜರಿ ಬ್ಯಾಟಿಂಗ್ ನಡೆಸುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಇದೀಗ ಕೊಹ್ಲಿಯ ಬಗ್ಗೆ ಮಾಜಿ ನಾಯಕ ಅಜಿಂಕ್ಯ ರಹಾನೆ ಮನಬಿಚ್ಚಿ ಮಾತನಾಡಿದ್ದಾರೆ.</p><p> </p><img><p>ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ನ್ಯೂಜಿಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ 93 ರನ್ ಸಿಡಿಸುವ ಮೂಲಕ ಹೊಸ ವರ್ಷದ ಮೊದಲ ಪಂದ್ಯದಲ್ಲೇ ತಮ್ಮ ಮಿಂಚಿನ ಆಟವನ್ನು ಮುಂದುವರೆಸಿದ್ದಾರೆ.</p><img><p>ಇನ್ನು ಮೈದಾನದೊಳಗೆ ಸದಾ ಆಕ್ರಮಣಾಕಾರಿ ಮನೋಭಾವ ಹೊಂದಿರುವ ವಿರಾಟ್ ಕೊಹ್ಲಿಗೆ ವಿಪರೀತ ಸೊಕ್ಕು ಇದೆ ಎನ್ನುವ ಆರೋಪ ಆಗಾಗ ಅವರ ಮೇಲೆ ಕೇಳಿ ಬರುತ್ತಲೇ ಇರುತ್ತದೆ.</p><img><p>ಈ ವಿಚಾರವಾಗಿ ವಿರಾಟ್ ಕೊಹ್ಲಿಯ ಸ್ನೇಹಿತ ಹಾಗೂ ಟೀಂ ಇಂಡಿಯಾ ಮಾಜಿ ನಾಯಕ ಅಜಿಂಕ್ಯ ರಹಾನೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಅಂದಹಾಗೆ ಅಜಿಂಕ್ಯ ರಹಾನೆ ತಮ್ಮ ಬಹುತೇಕ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ವಿರಾಟ್ ಕೊಹ್ಲಿ ಜತೆಗೆ ಆಡಿದ್ದಾರೆ.</p><img><p>ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಪದೇ ಪದೇ ಚರ್ಚೆಯಾಗುವ ಕೊಹ್ಲಿಯ ಅಹಂಕಾರದ ಕುರಿತಂತೆ ಮುಂಬೈ ಮೂಲದ ರಹಾನೆ ಮೊದಲ ಬಾರಿಗೆ ಬಹಿರಂಗವಾಗಿಯೇ ಸ್ಪಷ್ಟನೆ ನೀಡಿದ್ದಾರೆ.</p><img><p>ಕ್ರಿಕ್ಬಜ್ ಜತೆಗಿನ ಮಾತುಕತೆಯ ವೇಳೆ ರಹಾನೆ, ‘ವಿರಾಟ್ ಕೊಹ್ಲಿಯ ಬಗ್ಗೆ ನಾವು ಎಷ್ಟು ಮಾತನಾಡಿದರೂ ಕಡಿಮೆಯೇ. ಯಾಕೆಂದರೆ ನಾನು ವಿರಾಟ್ ಕೊಹ್ಲಿಯನ್ನು ನಾನು ತುಂಬಾ ಹತ್ತಿರದಿಂದ ನೋಡಿದ್ದೇನೆ’ ಎಂದಿದ್ದಾರೆ.</p><img><p>’ಅವರು ಬ್ಯಾಟಿಂಗ್ ಮಾಡಲು ಇಳಿದಾಗ ನಾವು ಅವರ ಕ್ರಿಕೆಟ್ ಫ್ಯಾಷನ್ ಹಾಗೂ ಪಂದ್ಯ ಗೆಲ್ಲಿಸಬೇಕೆಂಬ ತುಡಿತವನ್ನು ಪ್ರತಿ ಬಾರಿಯು ನೋಡುತ್ತೇವೆ. ಆದರೆ ನನಗೆ ಅವರ ಆ್ಯಟಿಟ್ಯೂಡ್ ಇವೆಲ್ಲದಕ್ಕಿಂತ ಅದ್ಭುತ ಎಂದೆನಿಸುತ್ತದೆ’ ಎಂದು ಅಜಿಂಕ್ಯ ರಹಾನೆ ಹೇಳಿದ್ದಾರೆ.</p><img><p>’ಕಲಿಯಬೇಕೆಂಬ ಆ್ಯಟಿಟ್ಯೂಡ್, ಕೊನೆಯ ಕ್ಷಣದವರೆಗೂ ಹೋರಾಡಬೇಕು ಎನ್ನುವ ಆ್ಯಟಿಟ್ಯೂಡ್ಗೆ ಸಾಟಿಯೇ ಇಲ್ಲ. ಜನರು ಕೊಹ್ಲಿಯನ್ನು ಅಹಂಕಾರಿ ಎನ್ನಬಹುದು. ಆದರೆ ಆತ ಹಾಗಿಲ್ಲ’ ಎಂದು ಅಜಿಂಕ್ಯ ರಹಾನೆ ಹೇಳಿದ್ದಾರೆ.</p><img><p>ಅವರು ಮಹತ್ವದ ಪಂದ್ಯಕ್ಕೂ ಎರಡು ದಿನಗಳ ಮೊದಲಿನಿಂದಲೇ ಜನರ ಜತೆ ಹಾಗೂ ಸಹ ಆಟಗಾರರ ಜತೆ ಹೆಚ್ಚು ಮಾತನಾಡುವುದಿಲ್ಲ. ಇದಕ್ಕೇ ಅಹಂ ಅಂದುಕೊಂಡರೆ ಅದು ತಪ್ಪಾಗುತ್ತದೆ. ಅದು ಅವರ ಸಿದ್ದತೆಯ ಭಾಗ ಎಂದು ಅಜಿಂಕ್ಯ ರಹಾನೆ ಸ್ಪಷ್ಟನೆ ನೀಡಿದ್ದಾರೆ. </p><img><p>2008ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ ವಿರಾಟ್ ಕೊಹ್ಲಿ, ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಟ್ಟಾರೆ 28,068 ರನ್ ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿಹೆಚ್ಚು ರನ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ.</p>
Source link
ವಿರಾಟ್ ಕೊಹ್ಲಿ ನಿಜಕ್ಕೂ ಅಹಂಕಾರಿನಾ? ಕೊನೆಗೂ ಸತ್ಯ ಬಾಯ್ಬಿಟ್ಟ ಟೀಂ ಇಂಡಿಯಾ ಮಾಜಿ ನಾಯಕ!