ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ: ಕಲ್ಲು ತೂರಾಟ, ಮನೆ ಧ್ವಂಸ

ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ: ಕಲ್ಲು ತೂರಾಟ, ಮನೆ ಧ್ವಂಸ


ಬೆಳಗಾವಿ, ಜನವರಿ 15: ಸರ್ಕಾರಿ ಜಾಗದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ ನಡೆದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೇಶದೂರ ಗ್ರಾಮದಲ್ಲಿ ನಡೆದಿದೆ. ವೇಳೆ ಕಲ್ಲು ತೂರಾಟ ಕೂಡ ನಡೆದಿದ್ದು, ಸಮಯಕ್ಕೆ ಸರಿಯಾಗಿ ಪೊಲೀಸರ ಮಧ್ಯ ಪ್ರವೇಶದಿಂದ ದೊಡ್ಡ ಅನಾಹುತ ತಪ್ಪಿದೆ. ಘಟನೆ ಸಂಬಂಧ ದೂರು ಮತ್ತು ಪ್ರತಿದೂರುಗಳು ದಾಖಲಾಗಿವೆ.

ವಾಲ್ಮೀಕಿ ಭವನ ನಿರ್ಮಾಣ ಸಂಬಂಧ ಸರ್ವೇ ಕಾರ್ಯಕ್ಕೆ ಬಂದ ವೇಳೆ ಎಸ್ಸಿ ಅವರ ಮನೆ ಬಳಿ ಯಾಕೆ ಎಂದು ಗ್ರಾಮದ ಸದಾಶಿವ ಭಜಂತ್ರಿ ಕುಟುಂಬ ತಕರಾರು ತೆಗೆದಿದೆ. ಇದೇ ವಿಚಾರಕ್ಕೆ ವಾಗ್ವಾದ ಕೂಡ ಆರಂಭಿಸಿದ್ದು, ಆರಂಭದಲ್ಲಿ ಎಸ್ ಭಜಂತ್ರಿ ಕುಟುಂಬದವರು ಸಮುದಾಯದವರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಇದೇ ಕಾರಣಕ್ಕೆ ಆಕ್ರೋಶಗೊಂಡ ಸಮುದಾಯದ ಜನರು ಗುಂಪು ಕಟ್ಟಿಕೊಂಡು ಬಂದು ಸದಾಶಿವ ಭಜಂತ್ರಿ ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ಅಡಗಿ ಕುಳಿತರೂ ಬಿಡದೆ ಮನೆ ಮೇಲೆ ಕಲ್ಲು ತೂರಿ, ಕಟ್ಟಿಗೆಯಿಂದ ಬಾಗಿಲಿಗೆ ಹೊಡೆದು ಮುರಿಸಿದ್ದಾರೆ. ಈ ವೇಳೆ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿರುವ ಮಹಿಳೆಯರಿಗೆ ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ತರಕಾರಿ ಮಾರಿ ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಬೆಳ್ಳಿ ಬಾಗಿಲು ಮಾಡಿದ ದಾನಜ್ಜಿ ಅಣ್ಣನ ಮಕ್ಕಳಿಂದಲೇ ಬರ್ಬರ ಹತ್ಯೆ

ಅಷ್ಟಕ್ಕೂ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಮಾಡಲು ಉದ್ದೇಶಿಸಿರುವ ಜಾಗ ಭಜಂತ್ರಿ ಕುಟುಂಬಕ್ಕೆ ಸೇರಿಲ್ಲ. ಸರ್ಕಾರಿ ಗೈರಾಣು ಜಾಗದಲ್ಲಿ ಕಾಮಗಾರಿ ನಡೆಸಲು ಮುಂದಾಗಿದ್ದರೂ ವಿರೋಧ ಮಾಡ್ತಿರೋದು ಸಮುದಾಯದ ಆಕ್ರೋಶಕ್ಕೆ ಕಾರಣವಾಗಿ ಗಲಾಟೆಯಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಬಿದ್ದ ಸ್ಥಳಕ್ಕೆ ಬಂದ ನೇಸರಗಿ ಠಾಣೆ ಪೊಲೀಸರು ಹೆಚ್ಚಿನ ಅನಾಹುತ ತಡೆಯುವಲ್ಲಿ ಸಫಲರಾಗಿದ್ದಾರೆ. ವಿಷಯ ತಿಳಿಯಬೇಕೆಂದು ಎಸ್ಪಿ ಕೆ. ರಾಮರಾಜನ್ ಕೂಡ ಗ್ರಾಮಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ್ದಾರೆ.

ಇನ್ನು ಗಲಾಟೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಆರಂಭವಾಯಿತು, ಎರಡು ಕೆಎಸ್ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಹೀಗಿದ್ದರೂ ಪೊಲೀಸರ ಸಮ್ಮುಖದಲ್ಲೇ ಉದ್ರಿಕ್ತರು ಸದಾಶಿವ ಭಜಂತ್ರಿ ವಿರುದ್ಧ ಕ್ರಮ ಆಗಬೇಕು ಅಂತಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು ಕಡೆಯಿಂದ ದೂರು ದಾಖಲಾಗಿದ್ದು, ಗಲಾಟೆಯ ವಿಡಿಯೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಗ್ರಾಮದ ಸ್ಥಿತಿ ಸದ್ಯ ಬೂದಿ ಮುಚ್ಚಿದ ಕೆಂಡದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *