ಎಲ್ಲರ ಚಿತ್ತ ಲಕ್ಕುಂಡಿಯತ್ತ: ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಆರಂಭ

ಎಲ್ಲರ ಚಿತ್ತ ಲಕ್ಕುಂಡಿಯತ್ತ: ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಆರಂಭ


ಗದಗ, ಜ.16: ಜಿಲ್ಲೆಯ ಇತಿಹಾಸ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಇಂದಿನಿಂದ ಪ್ರಾರಂಭವಾಯಿತು. ಸಿದ್ಧರಕೊಳ್ಳ ಎಂಬ ಸ್ಥಳದಲ್ಲಿ ಕೇವಲ 10 ಮೀಟರ್ ಎತ್ತರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಕ್ಕುಂಡಿಯು ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು ಮತ್ತು ಹೊಯ್ಸಳರು ಸೇರಿದಂತೆ ಅನೇಕ ರಾಜ ಮಹಾರಾಜರ ಆಳ್ವಿಕೆಗೆ ಒಳಪಟ್ಟಿದ್ದು, ಬಾದಾಮಿಗಿಂತ ಹೆಚ್ಚು ಪ್ರಸಿದ್ಧಿಯನ್ನು ಹೊಂದಿದೆ ಎಂದು ಶಾಸನಗಳಲ್ಲಿ ಉಲ್ಲೇಖವಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿದರೆ ಅಪಾರ ಪ್ರಮಾಣದ ಇತಿಹಾಸ ಬರಲಿದೆ ಎಂಬ ನಂಬಿಕೆ ಇದೆ. ದೇವಸ್ಥಾನದ 50 ಮೀಟರ್ ನಾಣ್ಯಗಳನ್ನು ತಯಾರಿಸುತ್ತಿದ್ದ ಟಂಕಸಾಲೆ ಅಥವಾ ನಾಣ್ಯಗಾರರ ಕುಟುಂಬದ ಕುರುಹುಗಳು, ಅಕ್ಕಸಾಲಿಗರ ಮನೆತನಕ್ಕೆ ಸಂಬಂಧಿಸಿದ ಅವಶೇಷಗಳು ಕಂಡುಬಂದಿವೆ. ಈ ಸಂಪದ್ಭರಿತ ನಾಡಿನಲ್ಲಿ ಹಿಂದೆಯೂ ಅನೇಕ ಕಡೆ ಉತ್ಖನನ ನಡೆದಾಗ ವಜ್ರ, ವೈಡೂರ್ಯ, ಮುತ್ತು, ರತ್ನ ಮತ್ತು ಆಭರಣಗಳು ದೊರೆತಿವೆ. ಲಕ್ಕುಂಡಿಯು 101 ದೇವಸ್ಥಾನಗಳು ಮತ್ತು 101 ಬಾವಿಗಳನ್ನು ಹೊಂದಿರುವ ಪವಿತ್ರ ಸ್ಥಳವಾಗಿದೆ. ಉತ್ಖನನಕ್ಕಾಗಿ ಅಧಿಕಾರಿಗಳು ಸ್ಥಳವನ್ನು ಗುರುತಿಸಿ, ಅಳತೆ ಕಾರ್ಯವನ್ನು ನಡೆಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಇತರ ಗುರುತಿಸಲಾದ ಪ್ರದೇಶಗಳಿಗೆ ಉತ್ಖನನ ಕಾರ್ಯ ಪ್ರಾರಂಭವಾಗಲಿದೆ. ಈ ಉತ್ಖನನದಲ್ಲಿ ಹಲವು ವಾಸ್ತುಶಿಲ್ಪಗಳು, ಅಮೂಲ್ಯ ರತ್ನಗಳು, ಆಭರಣಗಳು ಸಿಗುವ ನಿರೀಕ್ಷೆಯಿದೆ. ಗದಗ ಜಿಲ್ಲೆಯ ಜನರ ಚಿತ್ತ ಈಗ ಲಕ್ಕುಂಡಿಯತ್ತ ನೆಟ್ಟಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *