‘ಬಿಗ್ ಬಾಸ್ ಕನ್ನಡ ಸೀಸನ್ 12’ (ಬಿಗ್ ಬಾಸ್ ಕನ್ನಡ ಸೀಸನ್ 12) ರಿಯಾಲಿಟಿ ಶೋ ಟ್ರೋಫಿ ಗೆದ್ದಿರುವ ಗಿಲ್ಲಿ ನಟ ಅವರು ಹುಟ್ಟೂರಿಗೆ ಮರಳಿದ್ದಾರೆ. ಅವರ ಸ್ವಾಗತಕ್ಕೆ ಅಪಾರ ಜನರು ಸೇರಿದ್ದಾರೆ. ಅಲ್ಲಿಂದಾಗಿ ರಸ್ತೆಗಳು ಜಾಮ್ ಆಗಿವೆ. ಅಷ್ಟರಮಟ್ಟಿಗೆ ಕ್ರೇಜ್ ಹೆಚ್ಚಿದೆ. ಈ ವೇಳೆ ಕಿಕ್ಕಿರಿದು ಸೇರಿದ ಜನರ ನಡುವೆ TV9 ಜೊತೆ ಗಿಲ್ಲಿ ನಟ (ಗಿಲ್ಲಿ ನಟ) ಅವರು ಮಾತನಾಡಿದ್ದಾರೆ. ಹುಟ್ಟೂರಿನಲ್ಲಿ ತಮಗೆ ಸಿಗುತ್ತಿರುವ ಪ್ರೀತಿಯ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
‘ನಾನು ಕೆ.ಎಂ. ದೊಡ್ಡಿಯಲ್ಲಿ ಐಟಿಐ ಓದಿದ್ದು. ಇದೇ ರಸ್ತೆಯಲ್ಲಿ ಇತ್ತು. ಸರ್ಕಾರಿ ಬಸ್ನಲ್ಲಿ ಪಾಸ್ ತೋರಿಸಿದೆ. ನಾನು ಕನಸು ಮನಸ್ಸಿನಲ್ಲೂ ಅಂದುಕೊಂಡಿರಲಿಲ್ಲ. ಈಗ ಇದೇ ರಸ್ತೆಯಲ್ಲಿ ಕಪ್ ಹಿಡಿದುಕೊಂಡು, ಕಾರಿನಲ್ಲಿ ಬರುತ್ತೇನೆ ಅಂತ ಇರಲಿಲ್ಲ. ನಮ್ಮೂರಿಗೆ ನಾವು ವಾಪಸ್ ಬಂದಾಗ ಸಿಕ್ಕಾಪಟ್ಟೆ ಖುಷಿಯಾಗುತ್ತದೆ’ ಎಂದು ಗಿಲ್ಲಿ ನಟ ಅವರು ಹೇಳಿದ್ದಾರೆ.
‘ಜನರ ಪ್ರೀತಿ ಜಾಸ್ತಿ ಆಗುತ್ತಿದೆ. ಅದರಿಂದ ಜವಾಬ್ದಾರಿ ಮತ್ತು ಭಯ ಹೆಚ್ಚಾಗುತ್ತಿದೆ. ಖುಷಿಯಿಂದ ಭಯ ಜಾಸ್ತಿ ಆಗಿದೆ. ಎಲ್ಲಾದರೂ ಎಡವಿಬಿಟ್ಟರೆ ಏನು ಮಾಡೋದು? ಇಷ್ಟು ಜನರ ಪ್ರೀತಿ ಸಂಪಾದಿಸಿದ ಮೇಲೆ ಆ ಭಯ ಯಾವಾಗಲೂ ಇರುತ್ತದೆ’ ಎಂದು ಗಿಲ್ಲಿ ನಟ. ಅವರು ಹೋದ ಕಡೆಗಳಲ್ಲೆಲ್ಲ ಜನರು ಕಿಕ್ಕಿರಿದು ಸೇರುತ್ತಿದ್ದಾರೆ.
ಅಂಬರೀಷ್ ಅವರ ಹುಟ್ಟೂರಾದ ದೊಡ್ಡಅರಸಿನ ಕೆರೆ ಗೇಟ್ ಬಳಿ ಗಿಲ್ಲಿ ಬಂದಾಗ ಅಂಬರೀಷ್ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ. ಆ ಬಗ್ಗೆ ಗಿಲ್ಲಿ ನಟ ಪ್ರತಿಕ್ರಿಯೆ ನೀಡಿದ್ದಾರೆ. ‘ಅಂಬರೀಷಣ್ಣನವರ ಕಾಲಿನ ಧೂಳಿಗೂ ನಾನು ಸಮನಲ್ಲ. ನಮ್ಮನ್ನು ಹೋಲಿಸಿಕೊಳ್ಳಲು ಆಗಲ್ಲ. ಅವರ ಬಳಿ ನಮಗೆ ಇರುವುದು ನಮ್ಮ ಅದೃಷ್ಟ’ ಎಂದು ಗಿಲ್ಲಿ ನಟ.
ಇದನ್ನೂ ಓದಿ: ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಹೋದಲ್ಲೆಲ್ಲ ಜನಜಾತ್ರೆ: ಮುಗಿಬಿದ್ದ ಮದ್ದೂರು ಫ್ಯಾನ್ಸ್
ಗಿಲ್ಲಿ ನಟ ಅವರು ಈ ಮಟ್ಟಕ್ಕೆ ಬೆಳೆಯುತ್ತಾರೆ ಎಂದು ಜಗ್ಗೇಶ್ ಈ ಮೊದಲೇ ತಿಳಿದಿದ್ದರು. ಒಂದು ವರ್ಷ ಕಳೆಯುವುದರಲ್ಲಿ 4 ಜನ ಬಾಡಿಗಾರ್ಡ್ ಇಟ್ಟುಕೊಂಡು ಅವರು ಭವಿಷ್ಯ ನುಡಿದಿದ್ದರು. ಆ ಮಾತು ನಿಜವಾಗಿದೆ. ಈಗ ಪೊಲೀಸ್ ಭದ್ರತೆಯಲ್ಲಿ ಗಿಲ್ಲಿ ನಟ ಅವರು ತೆರಳಿದ್ದಾರೆ. ‘ಜಗ್ಗೇಶ್ ಅವರ ಆಶೀರ್ವಾದದಿಂದ ಈ ರೀತಿ ಆಗಿದೆ’ ಎಂದು ಗಿಲ್ಲಿ ನಟ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.