ಇಂದು, ಜನವರಿ 19: ಭಾರತಕ್ಕೆ ಭೇಟಿ ನೀಡಿದ ಯುಇಐ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಪ್ರಧಾನಿ ನರೇಂದ್ರ ಮೋದಿ (ಪ್ರಧಾನಿ ನರೇಂದ್ರ ಮೋದಿ) ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಅಪ್ಪುಗೆಯ ಮೂಲಕ ಯುಎಇ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ ವಿಮಾನ ನಿಲ್ದಾಣದಿಂದ ಹೊರಡುವ ಮುನ್ನ ಭಾರತೀಯ ಸಾಂಪ್ರದಾಯಿಕ ನೃತ್ಯ, ಡೋಲು ವಾದ್ಯಗಳ ಮೂಲಕ ಯುಎಇ ಅಧ್ಯಕ್ಷರನ್ನು ಸ್ವಾಗತಿಸಲಾಯಿತು.
ಯುಎಇ ಅಧ್ಯಕ್ಷರು ಕೇವಲ 2 ಗಂಟೆಗಳ ಕಾಲ ದೆಹಲಿಯಲ್ಲಿ ಇರಲಿದ್ದಾರೆ, ನಂತರ ವಾಪಾಸ್ ತೆರಳಲಿದ್ದಾರೆ. ಇರಾನ್-ಯುಎಸ್ ಸಂಬಂಧಗಳು ಹದಗೆಟ್ಟಿರುವುದು, ಗಾಜಾದಲ್ಲಿ ನಡೆಯುತ್ತಿರುವ ಅಸ್ಥಿರತೆ, ಸೌದಿ ಅರೇಬಿಯಾ ಮತ್ತು ಯುಎಇ ಒಳಗೊಂಡಿರುವ ಯೆಮೆನ್ನಲ್ಲಿ ಹರಿಯದ ಸಂಘರ್ಷದಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ ಈ ಸಮಯದಲ್ಲಿ ಈ ಭೇಟಿಯ ಮಹತ್ವ ಪಡೆದಿದೆ.
ಪ್ರಧಾನಿ ಮೋದಿಯವರೊಂದಿಗೆ ಪ್ರಮುಖ ಮಾತುಕತೆಗಾಗಿ ದೆಹಲಿಯಲ್ಲಿ ಯುಎಇ ಅಧ್ಯಕ್ಷರು
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಸೋಮವಾರ ನವದೆಹಲಿಗೆ ಆಗಮಿಸಿದರು
ಈ ಭೇಟಿಯು ಪ್ರಧಾನಿ ಮೋದಿಯವರ ಆಹ್ವಾನದ ಮೇರೆಗೆ ಮತ್ತು ಎರಡೂ ದೇಶಗಳ ನಡುವೆ ಇತ್ತೀಚಿನ ಉನ್ನತ ಮಟ್ಟದ ವಿನಿಮಯವನ್ನು ನಿರ್ಮಿಸುತ್ತದೆ
ದ್ವಿಪಕ್ಷೀಯ… pic.twitter.com/Kh1vfkGweT
— ನಬಿಲಾ ಜಮಾಲ್ (@nabilajamal_) ಜನವರಿ 19, 2026
ಇಂದು ಸಂಜೆ ಪ್ರಧಾನಿ ಮೋದಿ ಮತ್ತು ಯುಎಇ ಅಧ್ಯಕ್ಷರು ದೆಹಲಿಯ ಪ್ರಧಾನಿ ನಿವಾಸದಲ್ಲಿ ವಿಶೇಷವಾದ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆಯ ಸಮಯದಲ್ಲಿ ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಮತ್ತು ಹಲವಾರು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಯಿದೆ.
ಇದನ್ನೂ ಓದಿ: ಅಸ್ಸಾಂನಲ್ಲಿ ಪ್ರಧಾನಿ ಮೋದಿ ಮುಂದೆ 10 ಸಾವಿರ ಕಲಾವಿದರಿಂದ ಬಾಗುರುಂಬಾ ನೃತ್ಯ ಪ್ರದರ್ಶನ
ನನ್ನ ಸಹೋದರರಾದ ಯುಇಐ ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಸ್ವಾಗತಿಸಲು ದೆಹಲಿ ವಿಮಾನ ನಿಲ್ದಾಣಕ್ಕೆ ಹೋಗಿದ್ದೆ. ಅವರ ಭೇಟಿ ಅವರು ಭಾರತ-ಯುಎಐ ಸ್ನೇಹಕ್ಕೆ ನೀಡುವ ಮಹತ್ವವನ್ನು ತೋರಿಸಿದ್ದಾರೆ. ನಮ್ಮ ಚರ್ಚೆಗಳಿಗಾಗಿ ಎದುರು ನೋಡುತ್ತಿದ್ದೇನೆ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಬರೆದಿದ್ದಾರೆ.
ನನ್ನ ಸಹೋದರ, ಯುಎಇ ಅಧ್ಯಕ್ಷ ಹಿಸ್ ಹೈನೆಸ್ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಹೋದೆ. ಅವರ ಭೇಟಿಯು ಬಲವಾದ ಭಾರತ-ಯುಎಇ ಸ್ನೇಹಕ್ಕೆ ಅವರು ನೀಡುವ ಪ್ರಾಮುಖ್ಯತೆಯನ್ನು ವಿವರಿಸುತ್ತದೆ. ನಮ್ಮ ಚರ್ಚೆಗಳಿಗಾಗಿ ಎದುರುನೋಡುತ್ತಿದ್ದೇವೆ.@ಮೊಹಮ್ಮದ್ ಬಿನ್ ಝಾಯೆದ್ pic.twitter.com/Os3FRvVrBc
– ನರೇಂದ್ರ ಮೋದಿ (@narendramodi) ಜನವರಿ 19, 2026
ಯುಇಐ ಅಧ್ಯಕ್ಷರಾದ ನಂತರ ಅಲ್ ನಹ್ಯಾನ್ ಅವರು ಭಾರತಕ್ಕೆ ನೀಡುತ್ತಿರುವ ಮೂರನೇ ಅಧಿಕೃತ ಭೇಟಿಯಾಗಿದೆ. ಒಟ್ಟಾರೆಯಾಗಿ, ಭಾರತಕ್ಕೆ ಇದು ಅವರ 5ನೇ ಭೇಟಿ. ಇರಾನ್ನಲ್ಲಿ ನಡೆದ ಬೃಹತ್ ಪ್ರತಿಭಟನೆಗಳು 5,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ನಂತರ ಉದ್ವಿಗ್ನತೆ ಹೆಚ್ಚಿರುವ ಬೆನ್ನಲ್ಲೇ ಅಲ್ ನಹ್ಯಾನ್ ಭಾರತಕ್ಕೆ ಇಂದು ಭೇಟಿ ನೀಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ