Headlines

ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಪರೋಕ್ಷವಾಗಿ ಸಿಎಂಗೆ ಟಾಂಗ್ ಕೊಟ್ರಾ ಡಿಕೆ ಸುರೇಶ್!

ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಪರೋಕ್ಷವಾಗಿ ಸಿಎಂಗೆ ಟಾಂಗ್ ಕೊಟ್ರಾ ಡಿಕೆ ಸುರೇಶ್!


ಬೆಂಗಳೂರು, ಜನವರಿ 20: ಡಿಸಿಎಂ ಡಿಕೆ ಶಿವಕುಮಾರ್ ಅವರ ಪಕ್ಷ ನಿಷ್ಠೆ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ಮಾತು ಕೊಟ್ಟಿದ್ದಾರೆ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು, ಶಿವಕುಮಾರ್ ಅವರು ಯಾವಾಗಲೂ ಪಕ್ಷಕ್ಕೆ ನಿಷ್ಠರಾಗಿರುತ್ತಾರೆ. ಪಕ್ಷ ಅಧಿಕಾರದಲ್ಲಿದ್ದಾಗ ಅಥವಾ ಇಲ್ಲದಿದ್ದಾಗಲೂ ಅವರು ಪಕ್ಷದ ಜೊತೆ ನಿಂತಿದ್ದಾರೆ ಮತ್ತು ಎಲ್ಲವನ್ನೂ ತಾಳ್ಮೆಯಿಂದ ಗಮನಿಸುತ್ತಿದ್ದಾರೆ ಎಂದು ಹೇಳಿದರು.

ಪಂಚಾಯಿತಿ ಚೇರ್ಮನ್‌ಗಳ ಉದಾಹರಣೆಯನ್ನು ನೀಡಿ ಮಾತನಾಡಿದ ಸುರೇಶ್, ಆರಂಭದಲ್ಲಿ ಚೇರ್ಮನ್ ಸ್ಥಾನ ಬೇಡ ಎನ್ನುತ್ತಾರೆ. ಆ ಸ್ಥಾನಕ್ಕೆ ಅರ್ಹತೆ ಪಡೆದ ನಂತರ ಅಥವಾ ಲಭ್ಯವಾಗುವಾಗ ‘ಬೇಕೇ ಬೇಕು’ ಎಂದು ಪಟ್ಟು ಹಿಡಿಯುತ್ತಾರೆ. ಮಾತನ್ನು ಕೊಟ್ಟು ಹುದ್ದೆ ಪಡೆದ ನಂತರ ಅದನ್ನು ಬಿಟ್ಟುಕೊಡುವುದು ಅಥವಾ ಇತರರನ್ನು ಮನವೊಲಿಸುವುದು ಒಮ್ಮೆ ಬಹಳ ಕಷ್ಟಕರವಾಗಿದೆ. ಇದು ರಾಜಕಾರಣದಲ್ಲಿ ನಂಬಿಕೆಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದೆ. ತಾವು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಬೆಳವಣಿಗೆಗಳನ್ನು ಮಾತ್ರ ಉಲ್ಲೇಖಿಸಿದ್ದೇವೆ ಎಂದು ಸುರೇಶ್ ಸ್ಪಷ್ಟಪಡಿಸಿದರು. ಸುರೇಶ್ ಅವರು ಪಂಚಾಯಿತಿ ಚೇರ್ಮನ್ ಹುದ್ದೆಗಳ ವಿಚಾರ ಪ್ರಸ್ತಾಪಿಸಿ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯಗೇ ಟಾಂಗ್ ಕೊಟ್ಟರಾ ಎಂಬ ಪ್ರಶ್ನೆ ಈಗ ಮೂಡಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *