ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣ ಇಲ್ಲಿದೆ

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣ ಇಲ್ಲಿದೆ


ದಯಾಮರಣ ಕೋರಿ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ

ಗದಗ, ಜನವರಿ 20: ನೌಕರರ ಮೇಲೆ ಅಧಿಕಾರಿಗಳು ಕಿರುಕುಳಇತ್ತೀಚಿನ ದಿನಗಳಲ್ಲಿ ಗಂಭೀರ ಸಮಸ್ಯೆಯಾಗಿದೆ. ಕೆಲ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ನೌಕರರ ಮೇಲೆ ಅನಗತ್ಯ ಒತ್ತಡ, ಮಾನಸಿಕ ಹಿಂಸೆ, ಬೆದರಿಕೆ ಹಾಗೂ ಅವಮಾನಕರ ವರ್ತನೆ ತೋರುವ ಘಟನೆಗಳು ಹೆಚ್ಚುತ್ತಿವೆ. ಈ ನಡುವೆ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಗ್ರಾಮ ಲೆಕ್ಕಾಧಿಕಾರಿಯೋರ್ವ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಮುಂಡರಗಿ ತಾಲೂಕಿನ ಡಂಬಳ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ಕುರಹಟ್ಟಿ ಅಧಿಕಾರಿಗಳ ಮೇಲೆ ವಿನಾ ಕಾರಣ ಕಿರುಕುಳ ಆರೋಪ ಮಾಡಿದ್ದು, ತನ್ನ ವೇತನವನ್ನೂ ತಡೆಹಿಡಿಯಲಾಗಿದೆ ಎಂದು ದೂರಿದ್ದಾರೆ. ಜೀವನೋಪಾಯ ನಿರ್ವಹಣೆ ಕಷ್ಟವಾದ ಕಾರಣ ತನಗೆ ದಯಾಮರಣ ನೀಡಿ ಎಂದು ಪತ್ರ ಮುಖೇನ ಕಾಣಿಸಿಕೊಂಡಿದ್ದಾರೆ. ಇಲಾಖೆಯ ಇಲಾಖೆ ತಾಲೂಕಾಡಳಿತ ವ್ಯವಸ್ಥೆ ಹಾಗೂ ಮೇಲಧಿಕಾರಿಗಳು ಇಲಾಖೆ ಕೆಲಸ ಸಮರ್ಪಕವಾಗಿ ನಿರ್ವಹಿಸಿದರೂ ಕಿರುಕುಳ ನೀಡಲಾಗುತ್ತಿದೆ. ವಿನಾಕಾರಣ ಮೇಲಿಂದ ಮೇಲೆ ನೋಟಿಸ್ ನೀಡದೆ, ಕಳೆದ 2 ತಿಂಗಳ ವೇತನ ತಡೆಹಿಡಿಯಲಾಗಿದೆ. ಅನಾರೋಗ್ಯ ಪೀಡಿತ ತಾಯಿ ಇದ್ದಾರೆ, ಜೊತೆಗೆ ತಾನು ಅನಾರೋಗ್ಯ ಪೀಡಿತನಾಗಿರೋದ್ರಿಂದ ಜೀವನ ಕಷ್ಟ ಎಂಬುದು ಯೋಗೇಶ್ ಅಳಲು.

ಇದನ್ನೂ ಓದಿ: ಜಾಗಿಂಗ್ ಹೋಗುತ್ತಿದ್ದ ಮಹಿಳೆಯ ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ ಬಾಲಕರು

ರಾಷ್ಟ್ರಪತಿಗೆ ಬರೆದ ಪತ್ರದಲ್ಲೇನಿದೆ?

ಪೂರ್ಣ ಶ್ರಮದಿಂದ ಕೆಲಸ ಮಾಡಿದರೂ ಸರಿಯಾಗಿ ಸಂಬಳ ಸಿಗುತ್ತಿಲ್ಲ. ತನಗೆ ವೃದ್ಧ ತಾಯಿ ಇದ್ದು, ಅವರನ್ನು ಪೋಷಿಸುವ ಜವಾಬ್ದಾರಿಯೂ ನನ್ನ ಮೇಲಿದೆ. ಸರ್ಕಾರದ ಕೆಲಸದಲ್ಲಿದ್ದರೂ, ನನಗೆ ಸರಿಯಾಗಿ ಸಂಬಳ ದೊರಕದೆ ಬಹಳ ಕಷ್ಟ ಅನುಭವಿಸುತ್ತಿದ್ದೇನೆ. ಈ ಪರಿಸ್ಥಿತಿಯಿಂದ ಜೀವನ ಸಾಗಿಸುವುದು ಅತೀವ ಕಠಿಣವಾಗಿದ್ದು, ಮಾನಸಿಕವಾಗಿ ಮತ್ತು ದೈಹಿಕವಾಗಿ ತುಂಬಾ ಸಂಕಟವನ್ನು ಅನುಭವಿಸುತ್ತಿದೆ. ಆದ್ದರಿಂದ ದಯವಿಟ್ಟು ನನಗೆ ದಯಾಮರಣ ನೀಡುವ ಮೂಲಕ ಈ ದುಃಸ್ಥಿತಿಯಿಂದ ಮುಕ್ತಿಗೊಳಿಸಬೇಕೆಂದು ಪ್ರಾರ್ಥಿಸುವಂತೆ ಯೋಗೇಶ್ ಪ್ರತದಲ್ಲಿ ಉಲ್ಲೇಖಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *