ತಪಾಸಣೆ ನೆಪದಲ್ಲಿ ವಿದೇಶಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿ ತಬ್ಬಿಕೊಂಡ ವಿಮಾನ ನಿಲ್ದಾಣ ಸಿಬ್ಬಂದಿಯ ಬಂಧನ

ತಪಾಸಣೆ ನೆಪದಲ್ಲಿ ವಿದೇಶಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿ ತಬ್ಬಿಕೊಂಡ ವಿಮಾನ ನಿಲ್ದಾಣ ಸಿಬ್ಬಂದಿಯ ಬಂಧನ


ಬೆಂಗಳೂರು, ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ವಿದೇಶಿ ಮಹಿಳೆಗೆ ತಪಾಸಣೆ ನೆಪದಲ್ಲಿ ಕಿರು ವರದಿಕುಳ ನೀಡಿದ ಗಂಭೀರ ಘಟನೆಯಾಗಿದೆ. ಕೊರಿಯಾಗೆ ತೆರಳಲು ವಿಮಾನಕ್ಕೆ ಬಂದಿದ್ದ ವಿದೇಶಿ ಮಹಿಳೆಗೆ ಏರ್‌ಪೋರ್ಟ್ ಸಿಬ್ಬಂದಿ ಅಪಾನ್ ಅಹ್ಮದ್ ಎಂಬ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಆತನ ಬಂಧನವಾಗಿದೆ.

ಟಿಕೆಟ್ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್‌ನಿಂದ ಬೀಪ್ ಸೌಂಡ್ ಬರುತ್ತಿದೆ ಎಂದು ಅಪಾನ್ ಅಹ್ಮದ್, ಪ್ರತ್ಯೇಕವಾಗಿ ತಪಾಸಣೆ ನಡೆಸುವಂತೆ ತಿಳಿಸಿದ್ದಾನೆ. ಚೆಕಿಂಗ್ ಕೌಂಟರ್‌ಗೆ ಹೋದರೆ ವಿಮಾನಕ್ಕೆ ತಡವಾಗುತ್ತದೆ ಎಂದು ನಂಬಿಸಿ, ಮಹಿಳೆಯನ್ನು ಪುರುಷರ ಶೌಚಾಲಯಕ್ಕೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ತಪಾಸಣೆ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿ, ಬಲವಂತವಾಗಿ ತಬ್ಬಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಮಹಿಳೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟರಲ್ಲಿ ಆರೋಪಿಯು, ‘ಓಕೆ ಥ್ಯಾಂಕ್ ಯು’ ಎಂದು ಹೇಳಿ ಅಲ್ಲಿಂದ ಹೊರನಡೆದಿದ್ದಾನೆ. ಬಳಿಕ ವಿದೇಶಿ ಮಹಿಳೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ದೂರು ನೀಡಿದ್ದು, ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ವಿದೇಶಿ ಮಹಿಳೆಯ ದೂರಿನ ಆರೋಪಿ ಕೆಂಪೇಗೌಡ ಏರ್‌ಪೋರ್ಟ್ ಪೊಲೀಸ್ ಠಾಣೆ ಅಪಾನ್ ಅಹ್ಮದ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಆರೋಪಿ ಬಂಧನವಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.

ಗಣರಾಜ್ಯೋತ್ಸವ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ಭದ್ರತೆ

ಗಣರಾಜ್ಯೋತ್ಸವ ಮತ್ತು ದೀರ್ಘ ವಾರಾಂತ್ಯದ ಕಾರಣ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರಯಾಣಿಕರ ಭದ್ರತಾ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ. ಭದ್ರತಾ ತಪಾಸಣೆಯ ಹೆಚ್ಚುವರಿ ಸಮಯದಲ್ಲಿ ಗಮನದಲ್ಲಿಟ್ಟುಕೊಂಡು ಬೇಗನೆ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಸಲಹೆ ನೀಡಿದೆ.

ಇದನ್ನೂ ಓದಿ: ಪ್ರಯಾಣಿಕರು ಗಮನಿಸಿ: ಬೆಂಗಳೂರು ವಿಮಾನ ನಿಲ್ದಾಣದಿಂದ ಮಹತ್ವದ ಸೂಚನೆ; ಮಾಹಿತಿ ಇಲ್ಲಿದೆ

ಕೊನೆ ಕ್ಷಣದಲ್ಲಿ ವಿಮಾನಕ್ಕೆ ತೆರಳಲು ವಿಳಂಬವಾಗುವುದು ಅಥವಾ ವಿಮಾನ ತಪ್ಪುವಂಥ ಸನ್ನಿವೇಶ ಸೃಷ್ಟಿಯಾಗದಿರಲು ಸಾಮಾನ್ಯವಾಗಿ ಬರಲು ಕೂಡ ಸ್ವಲ್ಪ ಬೇಗನೆ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ಮನವಿ ಮಾಡಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *