ಬೆಂಗಳೂರು, ಜ.22: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದು (ಜನವರಿ 22, 2026) ಹವಾಮಾನ ಶುಷ್ಕ ಮತ್ತು ಶೀತ ವಾತಾವರಣದಿಂದ ಕೂಡಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಪ್ರಸ್ತುತ ಚಳಿಯ ತೀವ್ರತೆ ಮುಂದುವರಿದಿದ್ದು, ಒಣ ಹವಾಮಾನ (ಶುಷ್ಕ ಹವಾಮಾನ) ಇದೆ. ಬೆಂಗಳೂರಿನಲ್ಲಿ ಇಂದು ಹವಾಮಾನವಿರಲಿದೆ, ಬೆಳಗಿನ ಜಾವ ಸಾಧಾರಣ ಮಂಜು ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 16°C ಇರಲಿದೆ. ಗಾಳಿಯ ಗುಣಮಟ್ಟ (AQI) ಸಾಧಾರಣ ಮಟ್ಟದಲ್ಲಿ. ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚಳಿಯ ಅಲೆ ಮುಂದುವರಿದಿದೆ. ಇಲ್ಲಿ ಕನಿಷ್ಠ ತಾಪಮಾನ 12°C – 14°C ವರೆಗೆ ಕುಸಿಯುವ ಸಾಧ್ಯತೆಯಿದೆ.
ಮಂಗಳೂರು, ಉಡುಪಿ ಭಾಗದಲ್ಲಿ ಹವಾಮಾನವು ಸ್ವಲ್ಪ ಉಷ್ಣಾಂಶದಿಂದ ಕೂಡಿರಲಿದ್ದು, ಗರಿಷ್ಠ ತಾಪಮಾನ 32°C ದಾಟಬಹುದು. ಇಲ್ಲಿ ಸಮುದ್ರದ ಗಾಳಿ ಮಂದಗತಿಯಲ್ಲಿರಲಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಬೆಳಿಗ್ಗೆ ದಟ್ಟ ಮಂಜು ಮುಸುಕಿನಲ್ಲಿದ್ದು, ವಾಹನ ಸವಾರರು ಜಾಗರೂಕರಾಗಿರಲು ಹವಾಮಾನ ಇಲಾಖೆ ತಿಳಿಸಿದೆ. ಮುಂಜಾನೆ ಮತ್ತು ತಡರಾತ್ರಿ ಚಳಿ ಹೆಚ್ಚಾದರೆ ಶೀತ ಮತ್ತು ಕೆಮ್ಮು ಹೆಚ್ಚಾಗುವ ಸಾಧ್ಯತೆ ಇದೆ. ಇದರ ಬಗ್ಗೆ ಜಾಗ್ರತೆ ವಹಿಸಿ. ಧರಿಸುವುದು ಉತ್ತಮ ಎಂದು ತಜ್ಞರು ಉಡುಪುಗಳನ್ನು ಹೇಳಿದ್ದಾರೆ. ಇನ್ನು ಯಾವ ಜಿಲ್ಲೆಯಲ್ಲಿಯೂ ಕೂಡ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಕರ್ನಾಟಕದ ಬಯಲು ಪ್ರದೇಶಗಳಲ್ಲೇ ದಾವಣಗೆರೆಯಲ್ಲಿ ಕನಿಷ್ಠ 11.0°C ತಾಪಮಾನ ದಾಖಲಾಗಿದೆ.
ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ತುಂಬಾ ಬದಲಾವಣೆಗಳು ಕಾಣುತ್ತಿವೆ. ಮಕ್ಕಳು, ಮಹಿಳೆಯರು ಹಾಗೂ ಹಿರಿಯರು ಎಚ್ಚರವಾಗಿರಲು ತಜ್ಞರು ಹೇಳಿದ್ದಾರೆ. ಮುಂದಿನ ನಾಲ್ಕು ಇದೇ ರೀತಿಯ ಪರಿಸ್ಥಿತಿ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವಾರು ದಿನಗಳಿಂದ ಒಣ ಹವಾಮಾನವಿದ್ದು, ಮುಂದಿನ ದಿನಗಳಲ್ಲಿ ಇದು ಹೆಚ್ಚಾಗಲಿದೆ ಎಂದು ಇಲಾಖೆ ಹೇಳಿದೆ.
ಇದನ್ನೂ ಓದಿ: ತಪಾಸಣೆ ನೆಪದಲ್ಲಿ ವಿದೇಶಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿ ತಬ್ಬಿಕೊಂಡ ನಿಲ್ದಾಣದ ಸಿಬ್ಬಂದಿಯ ಬಂಧನ
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ರಾಮದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರಗಳಲ್ಲಿ ಕೂಡ ವಾತಾವರಣವು ಶುಷ್ಕವಾಗಿರುತ್ತದೆ. ಉತ್ತರ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಒಣ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಮಾನ ಇಲಾಖೆ ಹೇಳಿದೆ. ಈ ಭಾಗದಲ್ಲೂ ಕೂಡ ಎಚ್ಚರದಿಂದ ಇರುವಂತೆ ಇಲಾಖೆ ಹೇಳಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 7:00 am, ಗುರುವಾರ, 22 ಜನವರಿ 26