ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಂಬತ್ತು ಗ್ರಹಗಳಲ್ಲಿ ಕೇತು ಅತ್ಯಂತ ಪ್ರಮುಖವಾದುದು. ಸಾಮಾನ್ಯವಾಗಿ ಕೇತು ಸುಮಾರು 18 ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತದೆ. 2026 ರ ಜನವರಿ 25 ರಂದು ಕೇತು ಪುನರ್ವಸು ನಕ್ಷತ್ರದ 2ನೇ ಹಂತದಿಂದ 1 ನೇ ಹಂತಕ್ಕೆ ಸಾಗುತ್ತದೆ. ಕೇತು ಮಾರ್ಚ್ 29ರವರೆಗೆ ಈ ನಕ್ಷತ್ರದಲ್ಲಿಯೇ ಇರಲಿದೆ. ನಂತರ ರಾಶಿ ಮತ್ತು ನಕ್ಷತ್ರ ಬದಲಾವಣೆಯ ಪರಿಣಾಮಗಳು ಸ್ಪಷ್ಟವಾಗಿ ಗೋಚರಿಸುತ್ತವೆ.
ಕೇತುವಿನ ಈ ಸಂಚಾರವು ಕೆಲವು ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯುತ್ತದೆ, ಇನ್ನೂ ಕೆಲವು ರಾಶಿಗಳಿಗೆ ಎಚ್ಚರಿಕೆಯ ಸಮಯ. ಈಗ ಯಾವ ರಾಶಿಗಳಿಗೆ ಅಶುಭ ಎಂಬುದನ್ನು ತಿಳಿದುಕೊಳ್ಳಿ.
ಈ ರಾಶಿಯವರು ಜಾಗರೂಕರಾಗಿರಿ:
ಮಿಥುನ ರಾಶಿ:
ಮಿಥುನ ರಾಶಿಯವರಿಗೆ ಕೇತುವಿನ ಸಂಚಾರವು ಸ್ವಲ್ಪ ಕಠಿಣವಾಗಿರಬಹುದು. ನೀವು ಸಾಕಷ್ಟು ಶ್ರಮಪಟ್ಟರೂ ನಿರೀಕ್ಷಿತ ಫಲ ಸಿಗದೆ ನಿರಾಸೆ ಉಂಟಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಎಚ್ಚರಿಕೆ ಅಗತ್ಯ. ಕುಟುಂಬದಲ್ಲಿ ಸಾಲ ಅಥವಾ ಹಣಕಾಸು ಸಂಬಂಧಿತ ವಿಚಾರಗಳು ಒತ್ತಡಕ್ಕೆ ಕಾರಣವಾಗುತ್ತವೆ. ವೈವಾಹಿಕ ಜೀವನದಲ್ಲಿ ಸಣ್ಣ ವಿವಾದಗಳು ಉಂಟಾಗುವ ಸಾಧ್ಯತೆಯ ಮಾತು ಮತ್ತು ವರ್ತನೆಯಲ್ಲಿ ಸಂಯಮ.
ತುಲಾ ರಾಶಿ:
ತುಲಾ ರಾಶಿಯವರಿಗೆ ಈ ಅವಧಿ ಪರೀಕ್ಷೆಯ ಸಮಯವಾಗಿರುತ್ತದೆ. ವಿಶೇಷವಾಗಿ ಮಾರ್ಚ್ ವರೆಗೆ ಯಾವುದೇ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎಚ್ಚರಿಕೆ ವಹಿಸಬೇಕು. ಉದ್ಯೋಗ ಬದಲಾವಣೆ ಅಥವಾ ಹೊಸ ಹೂಡಿಕೆಗಳನ್ನು ಮುಂದೂಡುವುದು ಒಳಿತು. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿ, ಸಲಹೆ ಸೂಚನೆಗಳನ್ನು ಪಡೆಯುವುದು ಉತ್ತಮ.
ಇದನ್ನೂ ಓದಿ: ಹವಳವನ್ನು ಯಾರು ಧರಿಸಬಹುದೇ? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ
ಮೀನ ರಾಶಿ:
ಮೀನ ರಾಶಿಯವರಿಗೆ ಕೇತುವಿನ ಸಂಚಾರದಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆಯಿದೆ. ಅಪ್ರತ್ಯಾಶಿತ ವೆಚ್ಚಗಳು ಹೆಚ್ಚಾಗಬಹುದು. ಮಾರ್ಚ್ ವರೆಗೆ ಪ್ರಯಾಣವನ್ನು ತಪ್ಪಿಸುವುದು ಒಳಿತು. ಉದ್ಯೋಗ ಮತ್ತು ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದೇ, ಶಾಂತವಾಗಿ ಯೋಚಿಸಿ ಮುಂದುವರಿಯುವುದು ಉತ್ತಮ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ