Headlines

ಪೊಲೀಸ್ ಠಾಣೆಗೆ ದೂರು ನೀಡಿ ವಾಪಾಸ್ಸಾಗುತ್ತಿದ್ದ ಪುನೀತ್ ಕೆರೆಹಳ್ಳಿ ಅರೆಸ್ಟ್!

ಪೊಲೀಸ್ ಠಾಣೆಗೆ ದೂರು ನೀಡಿ ವಾಪಾಸ್ಸಾಗುತ್ತಿದ್ದ ಪುನೀತ್ ಕೆರೆಹಳ್ಳಿ ಅರೆಸ್ಟ್!



ಪೊಲೀಸ್ ಠಾಣೆಗೆ ದೂರು ನೀಡಿ ವಾಪಾಸ್ಸಾಗುತ್ತಿದ್ದ ಪುನೀತ್ ಕೆರೆಹಳ್ಳಿ ಅರೆಸ್ಟ್!
<p>ಬೆಂಗಳೂರು: ಹಿಂದುಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಸದ್ಯಕ್ಕೆ ಅವರನ್ನು ಜಾಮೀನಿನ ಮೇಲೆ ರಿಲೀಸ್ ಮಾಡಲಾಗಿದೆ. ಏನಿದು ಪ್ರಕರಣ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್</p><p>&nbsp;</p><img><p>ಹಳೇ ಪ್ರಕರಣದ ಸಂಬಂಧ ಹಿಂದು ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದು, ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.</p><img><p>ಕೆಂಪಾಪುರದಲ್ಲಿ ಬಾಂಗ್ಲಾ ವಲಸಿಗರು ಇದ್ದಾರೆ ಎಂದು ಆರೋಪಿಸಿ ಗುರುವಾರ ಪುನೀತ್‌ ಸೋಲದೇವನಹಳ್ಳಿ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದರು. ದೂರು ನೀಡಿ ತೆರಳುವ ವೇಳೆ ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.</p><img><p>2025ರಲ್ಲಿ ಅಲ್ಲಾಬಕ್ಷ್‌ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣದ ಸಂಬಂಧ ಹಲವು ಬಾರಿ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಬಂಧಿಸಿದ್ದಾರೆ.</p><img><p>ಪೊಲೀಸರು ಶುಕ್ರವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್‌ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><img><p>ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಪುನೀತ್ ಕೆರೆಹಳ್ಳಿ, ಗುರುವಾರ ಬಂಧನಕ್ಕೊಳಗಾಗಿ, ಶುಕ್ರವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.</p><img><p>ಜನವರಿ 16 ರಂದು ಬಿಂಗಿಪುರದ ಕಾಲೋನಿಯ ಮೇಲೆ ದಾಳಿ ನಡೆಸಿ ಅಲ್ಲಿನ ನಿವಾಸಿಗಳನ್ನು ಅಕ್ರಮ ವಲಸಿಗರು ಎಂದು ಆರೋಪಿಸಿದಕ್ಕೆ ಬನ್ನೇರುಘಟ್ಟ ಪೊಲೀಸರು ಪುನೀತ್‌ ಅವರನ್ನು ಬಂಧಿಸಿದ್ದರು.</p>



Source link

Leave a Reply

Your email address will not be published. Required fields are marked *