ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ!
ಬೆಂಗಳೂರು, ಜನವರಿ 24: ಡಾ. ನಾಗೇಂದ್ರ ಶಿರೂರು ಎಂಬುವವರು ವಿಧಾನಸೌಧದ (ವಿಧಾನ ಸೌಧ) ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ತಕ್ಷಣ ಸಂಪರ್ಕಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿಯು ಚಿಕಿತ್ಸೆ ಮುಂದುವರಿದಿದೆ. ಸೋಲದೇವನಹಳ್ಳಿ ಪ್ರದೇಶದಲ್ಲಿ ತಮಗೆ ಉಂಟಾದ ಸಮಸ್ಯೆ ಮಾನಸಿಕವಾಗಿ ನೊಂದಿದ್ದ ಅವರು ವಿಧಾನಸೌಧದ ಬಳಿ ಬಂದು ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.