Headlines

ಕೊಲೆಯಾದ ಹುಬ್ಬಳ್ಳಿ ಅಂಜಲಿ ಅಂಬಿಗೇರ ಕುಟುಂಬಕ್ಕೆ ಮನೆ: ಸಿಎಂ ಮುಂದೆ ಕಣ್ಣೀರಿಟ್ಟ ಅಜ್ಜಿ

ಕೊಲೆಯಾದ ಹುಬ್ಬಳ್ಳಿ ಅಂಜಲಿ ಅಂಬಿಗೇರ ಕುಟುಂಬಕ್ಕೆ ಮನೆ: ಸಿಎಂ ಮುಂದೆ ಕಣ್ಣೀರಿಟ್ಟ ಅಜ್ಜಿ


ಅಜ್ಜಿ, ಮನೆ ವಿತರಣೆ ಕಾರ್ಯಕ್ರಮ, ಅಂಜಲಿ ಅಂಬಿಗೇರ

ಹುಬ್ಬಳ್ಳಿ, ಜನವರಿ 24: ನಗರದ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ ವತಿಯಿಂದ ಜಿ+3 ಮಾದರಿಯಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ನೂರಾರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಮನೆಗಳಿಗೆ ಕಳೆದ ಒಂದು ವರ್ಷದಿಂದ ಉದ್ಘಾಟನೆ ಭಾಗ್ಯ ಸಿಕ್ಕಿರಲಿಲ್ಲ. ಆದರೆ ಇಂದು ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ಜನರಿಗೆ ಮನೆ ಹಂಚಿಕೆ ಮಾಡಲಾಗಿದೆ. ಕೊಲೆಯಾಗಿರುವ ಅಂಜಲಿ ಅಂಬಿಗೇರ (ಅಂಜಲಿ ಅಂಬಿಗೇರ್) ಪೋಷಕರಿಗೆ ಮನೆ ಹಂಚಿಕೆ ಮಾಡಲಿಲ್ಲ, ಈ ವೇಳೆ ಮೊಮ್ಮಗಳನ್ನು ನೆನೆದು ಅಜ್ಜಿ ಭಾವುಕರಾದರು.

ಹುಬ್ಬಳ್ಳಿಯಲ್ಲಿ ಎರಡು ವರ್ಷಗಳ ಹಿಂದೆ ಅಂಜಲಿ ಅಂಬಿಗೇರ ಕೊಲೆ ನಡೆದಿತ್ತು. ದುಷ್ಕರ್ಮಿ ಮನೆಗೆ ನುಗ್ಗಿ ಅಂಜಲಿಯನ್ನ ಕೊಲೆ ಮಾಡಿದ್ದ. ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆ ಸಂದರ್ಭದಲ್ಲಿ ಅಂಜಲಿಯ ಮನೆಗೆ ಭೇಟಿ ನೀಡಿದ ಗೃಹ ಸಚಿವ ಜಿ ಪರಮೇಶ್ವರ್, ಅಜ್ಜಿ ಗಂಗಮ್ಮ ಮತ್ತು ಸಹೋದರಿಯರಿಗೆ ಸಾಂತ್ವನ ಹೇಳಿದರು. ಜೊತೆಗೆ ಗೌಪ್ಯವಾಗಿ ಹಲವು ಆಶ್ವಾಸನೆಗಳನ್ನೂ ನೀಡಿದ್ದರು. ಇದೀಗ ಆ ಕುಟುಂಬಕ್ಕೆ ಮನೆ ಹಂಚಿಕೆ ಮಾಡಲಾಗಿದೆ. ಕೊಲೆಯಾಗಿರುವ ಅಂಜಲಿ ಪೋಷಕರಿಗೆ ಸಿಎಂ ಸಿದ್ದರಾಮಯ್ಯ ಮನೆ ಹಂಚಿಕೆ ಮಾಡಿದ್ದಾರೆ. ಸಿಎಂ ಕೈಯಿಂದ ಮನೆ ಬೀಗ ಪಡೆಯುವಾಗ ಅಂಜಲಿ ಅಜ್ಜಿ ಮೊಮ್ಮಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ.

ಏನಿದು ಪ್ರಕರಣ?

ಅಂಜಲಿ ಅಂಬಿಗೇರ ಕೊಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಎರಡು ವರ್ಷಗಳ ಹಿಂದೆ ಅಂಜಲಿ ಕೊಲೆಗೆ ಪಕ್ಕಾ ಪ್ಲ್ಯಾನ್ ಮಾಡಿಕೊಂಡಿದ್ದ ಅಂಜಲಿ ಸ್ನೇಹಿತ ವಿಶ್ವ ಅಲಿಯಾಸ್ ಗಿರೀಶ್, ಮುಂಜಾನೆ ಮನೆಯ ಬಾಗಿಲು ಬಡಿದಿದ್ದ. ಪಡೆದ ಅಂಜಲಿಯೇ ಬಂದು ಬಾಗಿಲು ತೆಗೆದಿದ್ದಳು. ಪರ್ಸನಲ್ ಆಗಿ ಮಾತಾಡಬೇಕು ಬಾ ಅಂತ ಕರೆದೋನೇ ಏಕಾಏಕಿ ಚಾಕುವಿನಿಂದ ಇದ್ದಿದ್ದ.

ಇದನ್ನೂ ಓದಿ: ಅಂಜಲಿ ಅಂಬಿಗೇರ ಕುಟುಂಬಕ್ಕೆ ಆಕಾಶ ತೋರಿಸಿದ್ದ ಪರಮೇಶ್ವರ್ ಗೆ ನೀಡಿದ ಭರವಸೆಗಳು ನೆನಪಿಲ್ಲ!

ಅಂಜಲಿ ಜೋರಾಗಿ ಕೂಗಿಕೊಳ್ತಿದ್ದಂತೆ ಕುತ್ತಿಗೆ ಹಿಡಿದು ಒಳಗೆ ಎಳೆದುಕೊಂಡು ಹೋಗಿದ್ದ. ಅಜ್ಜಿ ಹಾಗೂ ಅಂಜಲಿ ತಂಗಿ ತಡೆಯಲು ಬಂದರೂ ಅವರೇ ಎದುರೇ ಕ್ರೌರ್ಯ ಮೆರೆದಿದ್ದ. ಮನೆಯೆಲ್ಲಾ ಯುವತಿಯನ್ನ ಹಿಡಿದು ಎಳೆದಾಡಿ ಹತ್ತಾರು ಬಾರಿ ಚಾಕುವಿನಿಂದ ಚುಚ್ಚಿ ಕೊಂದಿದ್ದ. ಅಂಜಲಿ ಸತ್ತಿದ್ದು ಪಕ್ಕಾ ಮಾಡಿಕೊಂಡ ಬಳಿಕವೇ ಮನೆಯಿಂದ ಕಾಲ್ಕಿತ್ತಿದ್ದ.

ಇದನ್ನೂ ಓದಿ: ನೇಹಾ, ಅಂಜಲಿ ಕೊಲೆ: ಹುಬ್ಬಳ್ಳಿಯ ಕಾಲೇಜು, ಮನೆಗಳಲ್ಲದ ಬದಲಾವಣೆ ಕುರಿತು ಪ್ರಾಂಶುಪಾಲರ, ಪೋಷಕರ ಮಾತು ಟಿವಿ9 ಸಂದರ್ಶನದಲ್ಲಿ

ಅಂಜಲಿ ಹಾಗೂ ಗಿರೀಶ್ ಇಬ್ಬರೂ ಸಹಪಾಠಿಗಳಾಗಿದ್ದರು. ಲವ್ ಬ್ರೇಕಪ್ ಆಗುತ್ತಿದೆ. ಅಂಜಲಿ ತನ್ನ ಜೊತೆ ಕ್ಲೋಸ್ ಆಗಿರೋದನ್ನೇ ಅಪಾರ್ಥ ಮಾಡಿಕೊಂಡಿದ್ದ ಪಾಗಲ್, ಅಲ್ಲಿ ಇಲ್ಲಿ ಸುತ್ತಾಡಲು ಕರೆಯುತ್ತಿದ್ದ. ಒಲ್ಲೆ ಎಂದ ಒಂದೇ ಒಂದು ಕಾರಣಕ್ಕೆ ಮಸಣ ಸೇರಿಸಿದ್ದ. ಪ್ರಕರಣಕ್ಕೆ ಆರೋಪಿಯನ್ನು ಬಂಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 3:27 pm, ಶನಿ, 24 ಜನವರಿ 26



Source link

Leave a Reply

Your email address will not be published. Required fields are marked *