ಬೆಳಗಾವಿ, ಜನವರಿ 25: ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರಾಬರಿ ಪ್ರಕರಣ ಸಂಬಂಧ ಬೆಳಗಾವಿ ಎಸ್ಪಿ ಕೆ. ರಾಮರಾಜನ್ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಜ.6ರಂದು ನಾಸಿಕ್ ಜಿಲ್ಲಾ ವರಿಷ್ಠಾಧಿಕಾರಿಯಿಂದ ನಮಗೆ ಪತ್ರ ಬಂದಿದ್ದು, ಚೋರ್ಲಾ ಘಾಟ್ ನಲ್ಲಿ ರಾಬರಿಯಾಗಿರುವ ವಿಷಯವನ್ನು ತಿಳಿಸಲಾಗಿದೆ. ರಾಬರಿ ಆದ ಹಣದ ಮೊತ್ತ ನಾಲ್ಕನೂರು ಕೋಟಿ ಆಗಿರಬಹುದು ಅಂತಾ ಪತ್ರದಲ್ಲಿ ಇತ್ತು. ಈ ಕಾರಣಕ್ಕೆ ನಮ್ಮ ಖಾನಾಪುರದ ಸಬ್ ಇನ್ಸ್ಪೆಕ್ಟರ್ ಸೇರಿ ಒಂದು ತಂಡವನ್ನ ಕಳುಹಿಸಿದ್ದೇವೆ. ಎಸ್ಐಟಿ ತಂಡ ಕೂಡ ರಚನೆಯಾಗಿದೆ. ಘಟನೆ ಬಗ್ಗೆ ಯಾರು ದೂರು ನೀಡಿದರೂ ಪಡೆಯುತ್ತೇವೆ. ಈ ಬಗ್ಗೆ ತನಿಖೆ ನಡೆಸುತ್ತೇವೆ ನಾವು ಸಹಕಾರ ಕೊಡುತ್ತೇವೆ. ಚೋರ್ಲಾ ಘಾಟ್ ಮೂರು ರಾಜ್ಯಗಳಿಗೆ ಬರಲಿದೆ ಎಂದವರು ಇರಲಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.