ಲವರ್‌ಗೆ ಬೆತ್ತಲೆ ಫೋಟೋ ಕಳಿಸಿದ 19 ವರ್ಷದ ಯುವತಿ, ಶುರುವಾಯ್ತು ಸಂಕಷ್ಟ! ಈ ತಪ್ಪು ಮಾಡಲೇಬೇಡಿ | Private Photos Leak Threat Miscreants Extort 1 Lakh From Bengaluru Student Kvn

ಲವರ್‌ಗೆ ಬೆತ್ತಲೆ ಫೋಟೋ ಕಳಿಸಿದ 19 ವರ್ಷದ ಯುವತಿ, ಶುರುವಾಯ್ತು ಸಂಕಷ್ಟ! ಈ ತಪ್ಪು ಮಾಡಲೇಬೇಡಿ | Private Photos Leak Threat Miscreants Extort 1 Lakh From Bengaluru Student Kvn



ಲವರ್‌ಗೆ ಬೆತ್ತಲೆ ಫೋಟೋ ಕಳಿಸಿದ 19 ವರ್ಷದ ಯುವತಿ, ಶುರುವಾಯ್ತು ಸಂಕಷ್ಟ! ಈ ತಪ್ಪು ಮಾಡಲೇಬೇಡಿ | Private Photos Leak Threat Miscreants Extort 1 Lakh From Bengaluru Student Kvn

ಬೆಂಗಳೂರಿನಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ಕಳುಹಿಸಿದ್ದ ಖಾಸಗಿ ಫೋಟೋಗಳನ್ನು ಬಳಸಿ ದುಷ್ಕರ್ಮಿಯೊಬ್ಬ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಒಂದು ಲಕ್ಷ ರೂಪಾಯಿ ಪಡೆದ ನಂತರವೂ, ಆತ ಮತ್ತಷ್ಟು ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದು, ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ದುಷ್ಕರ್ಮಿಗಳು ಯುವತಿಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವುದಾಗಿ ಬೆದರಿಸಿ ಹಣ ವಸೂಲು ಮಾಡಲು ಯತ್ನಿಸಿರುವ ಘಟನೆ ನಡೆದಿದೆ. 19 ವರ್ಷದ ಯುವತಿ ನೀಡಿದ ದೂರಿನನ್ವಯ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುವತಿ ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ತನ್ನ ಪ್ರಿಯಕರನಿಗೆ ಖಾಸಗಿ ಫೋಟೋಗಳನ್ನು ಕಳುಹಿಸಿದ್ದಳು ಎನ್ನಲಾಗಿದೆ. ಬಳಿಕ ಮೊಬೈಲ್ ಸಂಖ್ಯೆಯಿಂದ ಯುವತಿಗೆ ಕರೆ ಮಾಡಿದ ವ್ಯಕ್ತಿಯು ಆಕೆಯ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಾನೆ. ಅಲ್ಲದೆ, ಒಂದು ಲಕ್ಷ ರು. ಕೊಡದಿದ್ದರೆ ಆ ಫೋಟೊಗಳನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಡುವುದಾಗಿ ಹೆದರಿಸಿದ್ದಾನೆ.

ಇದರಿಂದ ಆತಂಕಗೊಂಡ ಯುವತಿ, ಖಾಸಗಿ ಫೋಟೊಗಳು ಹಾಗೂ ಬೆದರಿಕೆ ಹಾಕಿದವನ ಬಗ್ಗೆ ಪ್ರಿಯಕರನ ಜತೆ ಚರ್ಚಿಸಿದ್ದಾಳೆ. ನಂತರ ಕರೆ ಮಾಡಿದ್ದ ವ್ಯಕ್ತಿಗೆ ಪ್ರಿಯಕರನಿಂದ ಒಂದು ಲಕ್ಷ ರುಪಾಯಿ ನಗದು ಕೊಡಿಸಿದ್ದಾಳೆ. ಆ ನಂತರವೂ ಅಪರಿಚಿತ ವ್ಯಕ್ತಿ ಯುವತಿಗೆ ಕರೆ ಮಾಡಿ ಹೆಚ್ಚಿನ ಹಣ ಕೊಡುವಂತೆ ಬೆದರಿಕೆ ಹಾಕಿದ್ದಾನೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಿಯಕರನ ಮೇಲೆ ಶಂಕೆ!:

ತನ್ನ ಖಾಸಗಿ ಫೋಟೋ ಅಪರಿಚಿತ ವ್ಯಕ್ತಿಗೆ ಹೇಗೆ ದೊರೆಯಿತು ಎಂದು ಆತಂಕಗೊಂಡ ಯುವತಿ, ಮೊದಲು ಪ್ರಿಯಕರನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಳು. ಈ ನಿಟ್ಟಿನಲ್ಲಿ ತನಿಖೆ ಮಾಡಿದಾಗ ಆತನಿಂದ ಬಹಿರಂಗವಾಗಿಲ್ಲ ಎಂಬುದು ಗೊತ್ತಾಗಿದೆ. ಫೋಟೊಗಳು ಅಪರಿಚಿತನಿಗೆ ಹೇಗೆ ಸಿಕ್ಕಿದವು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

ಕಾರು ಡಿಕ್ಕಿಯಾಗಿ ತಾಯಿ ಸಾವು, ಮಗಳಿಗೆ ಗಾಯ

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಮೃತಪಟ್ಟು, ಮಗಳು ಗಾಯಗೊಂಡಿರುವ ಘಟನೆ ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಬೂಸಾಬ್ ಪಾಳ್ಯದ ನಿವಾಸಿ ಅರುಣಾ (42) ಮೃತ ಮಹಿಳೆ. ಮಗಳು ನಂದಿನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ನಂದಿನಿ ಜ.24ರ ಸಂಜೆ ತನ್ನ ತಾಯಿಯನ್ನು ದ್ವಿಚಕ್ರ ವಾಹನದಲ್ಲಿ ಹೆಬ್ಬಾಳದ ಕಡೆ ಹೋಗುತ್ತಿದ್ದರು. ರಿಂಗ್ ರಸ್ತೆಯ ಹೆಣ್ಣೂರು ಜಂಕ್ಷನ್ ಅಂಡರ್ ಪಾಸ್‌ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಆ ಸಂದರ್ಭದಲ್ಲಿ ಕಾರು ಅರುಣಾ ಅವರ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡು, ಮೃತಪಟ್ಟರು. ಕೇರಳ ಮೂಲದ ಚಾಲಕ ಅನಾಸ್ ನಗರದಲ್ಲಿ ಬಾಡಿಗೆ ವಾಹನ ಓಡಿಸುತ್ತಿದ್ದು, ಅತಿ ವೇಗದ ಚಾಲನೆಯಿಂದಾಗಿ ಈ ದುರ್ಘಟನೆ ನಡೆದಿದೆ. ಚಾಲಕನನ್ನು ಬಂಧಿಸಿ, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



Source link

Leave a Reply

Your email address will not be published. Required fields are marked *