
<p>Bengaluru rowdy sheeter ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾರ್ಮ್ ಹೌಸ್ನಲ್ಲಿ ಆಟೋ ಚಾಲಕ ನಾಗ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.</p><img><p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾರ್ಮ್ ಹೌಸ್ನಲ್ಲಿ ಆಟೋ ಚಾಲಕ ನಾಗ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಹಣಕಾಸಿನ ವ್ಯವಹಾರವೇ ಈ ಕೊಲೆಗೆ ಪ್ರಮುಖ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.</p><img><p>ಮೃತ ನಾಗ ಅಂದರ್-ಬಾಹರ್ ಹಣಕಾಸು ವ್ಯವಹಾರ ನಡೆಸುತ್ತಿದ್ದು, ಅಭಿ ಎಂಬ ವ್ಯಕ್ತಿಗೆ ಸುಮಾರು 22 ಲಕ್ಷ ರೂಪಾಯಿ ಸಾಲ ನೀಡಿದ್ದನು ಎನ್ನಲಾಗಿದೆ. ಈ ಹಣವನ್ನು ವಾಪಸ್ ಕೇಳುತ್ತಿದ್ದ ಹಿನ್ನೆಲೆಯಲ್ಲಿ ಆರೋಪಿಗಳು ನಾಗನನ್ನು ಕೊಲೆ ಮಾಡುವ ಪ್ಲಾನ್ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.</p><img><p>ಹಣದ ವಿಚಾರವಾಗಿ ಒತ್ತಡ ಹೆಚ್ಚಾಗುತ್ತಿದ್ದಂತೆ, ಪಾರ್ಟಿ ಮಾಡಿ ಮಾತನಾಡೋಣ ಎಂಬ ನೆಪದಲ್ಲಿ ನಾಗನನ್ನು ಫಾರ್ಮ್ ಹೌಸ್ಗೆ ಕರೆಸಿಕೊಂಡಿದ್ದಾರೆ. ಈ ಸಮಯದಲ್ಲಿ ಎರಡು ರೂಮ್ಗಳನ್ನು ಬುಕ್ ಮಾಡಲಾಗಿದ್ದು, ಒಂದು ರೂಮ್ ಅನ್ನು ನಾಗನೇ ಬುಕ್ ಮಾಡಿದ್ದರೆ, ಮತ್ತೊಂದು ರೂಮ್ ಅನ್ನು ಮೂವರು ಆರೋಪಿಗಳು ಬುಕ್ ಮಾಡಿಕೊಂಡಿದ್ದರು.</p><img><p>ಮೊದಲೇ ಪ್ಲಾನ್ ಮಾಡಿದಂತೆ ಡ್ರಾಗರ್ ಸೇರಿದಂತೆ ಆಯುಧಗಳನ್ನು ಹಿಡಿದು ಸ್ಥಳಕ್ಕೆ ಬಂದ ಆರೋಪಿಗಳು, ನಾಗನಿಗೆ ಮದ್ಯವನ್ನು ಕಂಠಪೂರ್ತಿ ಕುಡಿಸಿ, ನಂತರ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಮಾದನಾಯಕನಹಳ್ಳಿ ಪೊಲೀಸರು ಬಲೆ ಬೀಸಿದ್ದು, ತನಿಖೆ ತೀವ್ರಗೊಳಿಸಲಾಗಿದೆ. ಕೊಲೆಯ ಹಿಂದೆ ಇನ್ನಷ್ಟು ವ್ಯಕ್ತಿಗಳ ಪಾತ್ರವಿದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.</p>
Source link
ಬೆಂಗಳೂರು ಲೋಕಲ್ ರೌಡಿ ಆಟೋ ನಾಗನ ದುರಂತ ಅಂತ್ಯ! ಎಣ್ಣೆ ಪಾರ್ಟಿಗೆ ಕರೆದೊಯ್ದು ಫಾರ್ಮ್ಹೌಸಲ್ಲಿ ಮರ್ಡರ್